Mangaluru ಫೆ. 11ರಂದು ಸಂದೇಶ ಪ್ರಶಸ್ತಿ ಪ್ರದಾನ
Team Udayavani, Jan 21, 2024, 11:40 PM IST
ಮಂಗಳೂರು: ಕರ್ನಾಟಕ ಪ್ರಾಂತೀಯ ಕೆಥೋಲಿಕ್ ಧರ್ಮಾಧ್ಯಕ್ಷರ ಮಂಡಳಿ ಆಶ್ರಯದಲ್ಲಿರುವ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನದ ಸಂದೇಶ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ 7 ಸಾಧಕರು, 1 ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಫೆ. 11ರಂದು ಸಂಜೆ 5.30ಕ್ಕೆ ನಂತೂರಿನ ಸಂದೇಶ ಪ್ರತಿಷ್ಠಾನದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ನಿರ್ದೇಶಕ ವಂ| ಡಾ| ಸುದೀಪ್ ಪಾಲ್ ಎಂಎಸ್ಎಫ್ಎಸ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಂದೇಶ ಸಾಹಿತ್ಯ ಪ್ರಶಸ್ತಿ ಪ್ರೊ| ಬಿ.ಎ. ವಿವೇಕ ರೈ (ಕನ್ನಡ), ವಲೇರಿಯನ್ ಕ್ವಾಡ್ರಸ್(ಕೊಂಕಣಿ), ಮುದ್ದು ಮೂಡುಬೆಳ್ಳೆ (ತುಳು), ಸಂದೇಶ ಮಾಧ್ಯಮ ಪ್ರಶಸ್ತಿ ಅಬ್ದುಸ್ಸಲಾಮ್ ಪುತ್ತಿಗೆ, ಸಂದೇಶ ಕೊಂಕಣಿ ಸಂಗೀತ ಪ್ರಶಸ್ತಿ ಆಲ್ವಿನ್ ಡಿ’ಕುನ್ಹಾ, ಸಂದೇಶ ಕಲಾ ಪ್ರಶಸ್ತಿ ಚಂದ್ರನಾಥ ಆಚಾರ್ಯ, ಸಂದೇಶ ಶಿಕ್ಷಣ ಪ್ರಶಸ್ತಿಗೆ ಹುಚ್ಚಮ್ಮ ಚೌದ್ರಿ ಆಯ್ಕೆಯಾಗಿದ್ದಾರೆ. ವಿಶೇಷ ಪ್ರಶಸ್ತಿಗೆ ಜನ ಶಿಕ್ಷಣ ಸೇವಾ ಟ್ರಸ್ಟ್ ಆಯ್ಕೆಯಾಗಿದೆ ಎಂದು ತಿಳಿಸಿದರು.
ಸಂಸ್ಥೆಯ ಟ್ರಸ್ಟಿ ರಾಯ್ ಕ್ಯಾಸ್ಟಲಿನೊ ಮಾಹಿತಿ ನೀಡಿ, ಸಮಾರಂಭದ ಅಧ್ಯಕ್ಷತೆ ಯನ್ನು ಬೆಂಗಳೂರಿನ ಆರ್ಚ್ ಬಿಷಪ್ ಮತ್ತು ಕರ್ನಾಟಕ ಪ್ರಾದೇಶಿಕ ಬಿಷಪ್ ಸಮ್ಮೇಳನದ ಅಧ್ಯಕ್ಷ ರೈ| ರೆ| ಡಾ| ಪೀಟರ್ ಮಚಾದೋ ವಹಿಸಲಿದ್ದಾರೆ. ಅತಿಥಿಗಳಾಗಿ ಸ್ಪೀಕರ್ ಯು.ಟಿ. ಖಾದರ್, ಬಳ್ಳಾರಿಯ ಬಿಷಪ್ ಮತ್ತು ಸಂಸ್ಥೆಯ ಅಧ್ಯಕ್ಷ ರೈ| ರೆ| ಡಾ| ಹೆನ್ರಿ ಡಿ’ಸೋಜಾ, ಮಂಗಳೂರಿನ ಬಿಷಪ್ ರೈ| ರೆ| ಡಾ| ಪೀಟರ್ ಪೌಲ್ ಸಲ್ಡಾನ್ಹಾ, ಉಡುಪಿಯ ಬಿಷಪ್ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೊ, ಸಂಸ್ಥೆಯ ಟ್ರಸ್ಟಿ ಫಾ| ಐವನ್ ಪಿಂಟೊ ಭಾಗವಹಿಸಲಿದ್ದಾರೆ ಎಂದರು.
ಆಯ್ಕೆ ಸಮಿತಿ ಅಧ್ಯಕ್ಷ ಚಿನ್ನಪ್ಪ ಗೌಡ, ಸದಸ್ಯ ಅಡ್ವಕೇಟ್ ಬಿ.ಎ. ಮುಹಮ್ಮದ್ ಹನೀಫ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.