ಮಂಗಳೂರು: ಬಿಡಿಸಲು ಹೋದ ಜೈಲ್‌ ಸಿಬಂದಿಗೆ  ಥಳಿತ


Team Udayavani, May 23, 2018, 12:26 PM IST

talita.jpg

ಮಂಗಳೂರು: ನಗರದ ಕೊಡಿಯಾಲ್‌ಬೈಲಿನಲ್ಲಿರುವ  ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ಕೈದಿಗಳ ನಡುವೆ ಮತ್ತೆ ಸಂಘರ್ಷ ಮರುಕಳಿಸಿದ್ದು, ಜಗಳ ಬಿಡಿಸಲು ಹೋದ ಜೈಲು ಅಧೀಕ್ಷಕರು ಸಹಿತ ಆರು ಮಂದಿ ಸಿಬಂದಿ ಗಾಯಗೊಂಡಿದ್ದಾರೆ. 

ಸೋಮವಾರ ತಡರಾತ್ರಿ ವಿಚಾರಾಣಾಧೀನ ಕೈದಿಗಳು ಪರಸ್ಪರ ಜಗಳವಾಡುತ್ತಿದ್ದು ಈ ಜಗಳ ಬಿಡಿಸಲು ಹೋದ ಜೈಲು ಸೂಪರಿಂಟೆಂಡೆಂಟ್‌ ಹಾಗೂ ಪೊಲೀಸರ ಮೇಲೆ ಕೈದಿಗಳು ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ. 

ಜಲಾಲುದ್ದೀನ್‌, ಮೊಹಮ್ಮದ್‌ ಇಂಮಿ¤ಯಾಝ್, ಅಮ್ಜದ್‌, ನವೀದ್‌ ಅಹ್ಮದ್‌, ಉಬೈದುಲ್ಲಾ, ಹಫೀಜ್‌, ಮೊಹಮ್ಮದ್‌ ಆಸ್ರು, ಮಹಮ್ಮದ್‌ ಶಾಫಿ  ದಾಳಿ ನಡೆಸಿದ ಆರೋಪಿಗಳಾಗಿದ್ದಾರೆ.   

ಈ ಘಟನೆಯಿಂದ ಜೈಲು  ಸೂಪರಿಂಟೆಂಡೆಂಟ್‌ ಪರಮೇಶ್ವರ್‌, ವಾರ್ಡರ್‌ ಮುತ್ತಪ್ಪ ವಿರೂಪಾಕ್ಷಪ್ಪ, ಪೊಲೀಸ್‌ ರಮೇಶ್‌ ಸಹಿತ ಒಟ್ಟು ಆರು ಜನರು ಗಾಯಗೊಂಡಿದ್ದಾರೆ. 

ಸೋಮವಾರ ರಾತ್ರಿ 11.30ರ ವೇಳೆಗೆ ಜೈಲು ಸೂಪರಿಂಡೆಂಟ್‌ ಪರಮೇಶ್‌ ಅವರು ಗಸ್ತು ತಿರುಗುತ್ತಿದ್ದಾಗ ಜೈಲಿನ ಎ ಬ್ಲಾಕ್‌ನಲ್ಲಿ ವಿಚಾರಣಾಧೀನ ಕೈದಿಗಳ ಎರಡು ತಂಡಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ, ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡು ಜಗಳ ನಡೆಯುತ್ತಿತ್ತು. ಅದನ್ನು ಗಮನಿಸಿದ ಜೈಲು ಸೂಪರಿಂಟೆಂಡೆಂಟ್‌ ಹಾಗೂ ಸಿಬಂದಿ ತತ್‌ಕ್ಷಣ ಜೈಲಿನೊಳಗೆ ಹೋಗಿ ಜಗಳ ನಿಲ್ಲಿಸಲು ಪ್ರಯತ್ನಿಸಿದರು. 

ಇದರಿಂದ ಕೋಪಗೊಂಡ ವಿಚಾರಣಾಧೀನ ಕೈದಿಗಳ ತಂಡವೊಂದು  ಸೂಪರಿಂಟೆಂಡೆಂಟ್‌, ವಾರ್ಡನ್‌  ಹಾಗೂ ಇತರ ಸಿಬಂದಿ  ಮೇಲೆ ದಾಳಿ ನಡೆಸಿದೆ. ಸೂಪರಿಂಟೆಂಡೆಂಟ್‌ ಪರಮೇಶ್‌ಗೆ ಕೈದಿಗಳು ಚೊಂಬಿನಿಂದ ಹಣೆಗೆ ಹೊಡೆದ ಪರಿಣಾಮ ರಕ್ತ ಗಾಯ ಉಂಟಾಗಿದೆ. ಇದೇ ವೇಳೆ  ಜೈಲಿನ ಸಿಸಿಟಿವಿ ಕ್ಯಾಮೆರಾ, ಟ್ಯೂಬ್‌ಲೈಟ್‌ ಸೇರಿದಂತೆ ಇತರ ಸೊತ್ತುಗಳಿಗೆ ಹಾನಿಯಾಗಿದೆ.

ಘಟನೆ ತಿಳಿದ ಕೂಡಲೇ ಇತರ ಸಿಬಂದಿ ಸ್ಥಳಕ್ಕೆ ಧಾವಿಸಿ ಬಂದು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಬರ್ಕೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್‌ 341, 332, 147, 143, 427, 149 ರಡಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.  

ಮಂಗಳೂರು ಕೇಂದ್ರ ಕಾರಾಗೃಹ ಕೈದಿಗಳ ನಡುವೆ ಮಾರಾಮಾರಿ ಘಟನೆಗಳು ಪದೆ ಪದೇ ನಡೆಯುತ್ತಿದ್ದು ಈ ಮೂಲಕ ಸದಾ ಸುದ್ದಿಯಲ್ಲಿರುತ್ತದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.