ಮಂಗಳೂರು ವಿಶ್ವವಿದ್ಯಾನಿಲಯ; ಗೈರುಹಾಜರಾದ ವಿದ್ಯಾರ್ಥಿಗಳಿಗೆ ಡಿ. 21ರಿಂದ ವಿಶೇಷ ಪರೀಕ್ಷೆ


Team Udayavani, Nov 25, 2020, 1:58 AM IST

ಮಂಗಳೂರು ವಿಶ್ವವಿದ್ಯಾನಿಲಯ; ಗೈರುಹಾಜರಾದ ವಿದ್ಯಾರ್ಥಿಗಳಿಗೆ ಡಿ. 21ರಿಂದ ವಿಶೇಷ ಪರೀಕ್ಷೆ

ಸಾಂದರ್ಭಿಕ ಚಿತ್ರ

ಮಂಗಳೂರು: ಸೆಪ್ಟಂಬರ್‌ ಮತ್ತು ಅಕ್ಟೋಬರ್‌ನಲ್ಲಿ ನಡೆದ ಪರೀಕ್ಷೆಗಳಿಗೆ ಕೊರೊನಾ ಹಿನ್ನೆಲೆಯಲ್ಲಿ ಆಗಮಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಡಿ. 21ರಿಂದ ವಿಶೇಷ ಪರೀಕ್ಷೆ ನಡೆಸಲಾಗುವುದು ಎಂದು ಮಂಗಳೂರು ವಿ.ವಿ. ಪರೀಕ್ಷಾಂಗ ಕುಲಸಚಿವ ಡಾ| ಪಿ.ಎಲ್‌. ಧರ್ಮ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಉಡುಪಿಯ ಎಂಜಿಎಂ ಕಾಲೇಜು, ಮಂಗಳೂರಿನ ವಿ.ವಿ. ಕಾಲೇಜು ಮತ್ತು ಮಡಿಕೇರಿಯ ಎಫ್ಎಂಕೆಎಂಸಿ ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುವುದು. ಅಂದು ಶ್ರೀಲಂಕಾದ 6 ಮಂದಿ ವಿದ್ಯಾರ್ಥಿಗಳು ಸೇರಿದಂತೆ 5,000ಕ್ಕೂ ಅಧಿಕ ಮಂದಿ ಪರೀಕ್ಷೆ ಬರೆಯಲಿದ್ದಾರೆ ಎಂದರು.

ಯಶಸ್ವೀ ಪರೀಕ್ಷೆ
ಕೊರೊನಾ ಸವಾಲಿನ ನಡುವೆಯೂ ಮಂಗಳೂರು ವಿ.ವಿ. ತನ್ನ ವ್ಯಾಪ್ತಿಯಲ್ಲಿ ಬರುವ 210 ಕಾಲೇಜುಗಳ ಪೈಕಿ 205 ಕಾಲೇಜುಗಳ ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಪರೀಕ್ಷೆಗಳನ್ನು ಆಯೋಜಿಸಿದೆ. ಹಲವಾರು ಕೋರ್ಸ್‌ಗಳ ಫ‌ಲಿತಾಂಶ ಈಗಾಗಲೇ ಪ್ರಕಟವಾಗಿದ್ದು ಬಾಕಿ ಇರುವ ಕೋರ್ಸ್‌ಗಳ ಫ‌ಲಿತಾಂಶವನ್ನು ಶೀಘ್ರದಲ್ಲೇ ಹಂತ ಹಂತವಾಗಿ ಪ್ರಕಟಿಸ
ಲಾಗುವುದು. ಫಿಜಿ, ಲಕ್ಷದ್ವೀಪ, ಮಣಿಪುರ, ಧಾರವಾಡ, ಜಮ್ಮು-ಕಾಶ್ಮೀರದಲ್ಲಿಯೂ ಅಲ್ಲಿನ ವಿ.ವಿ.ಗಳ ಸಹಕಾರದಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು ಎಂದು ಅವರು ವಿವರಿಸಿದರು.

ಹೆಲ್ಪ್ ಡೆಸ್ಕ್
ಫ‌ಲಿತಾಂಶದಲ್ಲಿ ಯಾವುದೇ ರೀತಿಯ ಗೊಂದಲಗಳಿದ್ದರೆ ಅದನ್ನು ಪರಿಹರಿಸುವುದಕ್ಕಾಗಿ ವಿ.ವಿ.ಯು ಹೆಲ್ಪ್ಡೆಸ್ಕ್ ಮೂಲಕ ತ್ವರಿತ ಸೇವೆ ಒದಗಿಸುತ್ತಿದೆ. ಯಾವುದೇ ವಿದ್ಯಾರ್ಥಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಕುಲಸಚಿವರು ತಿಳಿಸಿದರು.

ಏಜೆನ್ಸಿ ಮುಂದುವರಿಸುವುದಿಲ್ಲ
ಮುಂದಿನ ಶೈಕ್ಷಣಿಕ ವರ್ಷದಿಂದ ಮಂಗಳೂರು ವಿ.ವಿ.ಯ ಪರೀಕ್ಷೆ, ಫ‌ಲಿತಾಂಶಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ವಿಶ್ವವಿದ್ಯಾನಿಲಯದ ತಂಡವೇ ನಿರ್ವಹಿಸಲಿದೆ. ಖಾಸಗಿಯವರಿಗೆ ಗುತ್ತಿಗೆ ನೀಡುವ ವ್ಯವಸ್ಥೆಯನ್ನು ಮುಂದುವರಿಸದೆ ಇರಲು ನಿರ್ಧರಿಸಲಾಗಿದೆ ಎಂದು ಡಾ| ಧರ್ಮ ತಿಳಿಸಿದರು.

ಕಂಪೆನಿಗೆ ನೋಟಿಸ್
ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಫ‌ಲಿತಾಂಶ ಪ್ರಕಟ ಸಂದರ್ಭ ಈ ಬಾರಿ ಲೋಪಗಳು ತೀರಾ ಕಡಿಮೆ. ಆದರೂ ಇಬ್ಬರು ವಿದ್ಯಾರ್ಥಿಗಳ ಫ‌ಲಿತಾಂಶದಲ್ಲಿ ಉಂಟಾಗಿದ್ದ ಗೊಂದಲವನ್ನು ಗಂಭೀರವಾಗಿ ಪರಿಗಣಿಸಿ ಕುಲಪತಿಯವರು ಕಂಪೆನಿಗೆ ನೋಟಿಸ್‌ ನೀಡಿ ಸ್ಪಷ್ಟೀಕರಣ ಕೇಳಿದ್ದಾರೆ.

ಸಾಫ್ಟ್ವೇರ್‌ನಲ್ಲಿ ಉಂಟಾದ ದೋಷದಿಂದಾಗಿ ಫ‌ಲಿತಾಂಶದಲ್ಲಿ ಪ್ರಮಾದ ಆಗಿರುವುದನ್ನು ಏಜೆನ್ಸಿ ಪಡೆದುಕೊಂಡಿರುವ ಕಂಪೆನಿ ಒಪ್ಪಿಕೊಂಡಿದೆ ಎಂದು ಕುಲಸಚಿವರು ತಿಳಿಸಿದರು.

ದೂರ ಶಿಕ್ಷಣ ಕೇಂದ್ರದ ನಿರ್ದೇಶಕ ಪ್ರೊ| ಸಂಗಪ್ಪ, ಸಹಾಯಕ ಕುಲ ಸಚಿವೆ ಯಶೋದಾ, ವಿಶೇಷ ಅಧಿಕಾರಿ ಡಾ| ರಮೇಶ್‌, ತಾಂತ್ರಿಕ ಸಮಿತಿಯ ಸದಸ್ಯ ಡಾ| ರವಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.