ಮಂಗಳೂರು ಗಲಭೆ: ಸಾಕ್ಷ್ಯಾಧಾರವಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ

ಎಡಿಜಿಪಿ ಅಮರ್‌ ಕುಮಾರ್‌ ಪಾಂಡೆ ಸೂಚನೆ

Team Udayavani, Jan 5, 2020, 7:30 AM IST

34

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದಲ್ಲಿ ಡಿ. 19ರಂದು ನಡೆದ ಹಿಂಸಾಚಾರದಲ್ಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ಸೂಕ್ತ ಸಾಕ್ಷ್ಯಾಧಾರಗಳಿದ್ದರೆ ಕಠಿನ ಕ್ರಮ ಕೈಗೊಳ್ಳುವಂತೆ ಎಡಿಜಿಪಿ ಅಮರ್‌ ಕುಮಾರ್‌ ಪಾಂಡೆ ಅವರು ಮಂಗಳೂರಿನ ಪೊಲೀಸ್‌ ಅ ಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶನಿವಾರ ಮಂಗಳೂರಿಗೆ ಭೇಟಿ ನೀಡಿದ ಅವರು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಪೊಲೀಸ್‌ ಅ ಧಿಕಾರಿಗಳ ಸಭೆ ನಡೆಸಿ ಇದುವರೆಗಿನ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಶನಿವಾರ ಇಡೀ ದಿನ ನಡೆದ ಸಭೆಯಲ್ಲಿ ಪಶ್ಚಿಮ ವಲಯ ಐಜಿಪಿ ಅರುಣ್‌ ಚಕ್ರವರ್ತಿ, ಆಯುಕ್ತ ಡಾ| ಹರ್ಷ ಪಿ.ಎಸ್‌., ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್‌, ಡಿಸಿಪಿಗಳಾದ ಅರುಣಾಂಶುಗಿರಿ ಮತ್ತು ಲಕ್ಷ್ಮೀಗಣೇಶ್‌ ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ.

ಹಿಂಸಾಚಾರ ಹಾಗೂ ಗೋಲಿಬಾರ್‌ ಬಗಿಗನ ಸಮಗ್ರ ವಿವರಗಳನ್ನು ಮಂಗಳೂರು ಪೊಲೀಸರು ಎಡಿಜಿಪಿ ಅವರ ಮುಂದಿಟ್ಟರು. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಗುಂಪೊಂದು ನಡೆಸಿದ ಪ್ರತಿಭಟನೆ, ಪೊಲೀಸ್‌ ಲಾಠಿ ಚಾರ್ಜ್‌, ಬಳಿಕ ಗಲಭೆ ಹಬ್ಬಿರುವುದು, ಗಲಭೆ ನಿಯಂತ್ರಿಸಲು ಕೈಗೊಂಡ ಕ್ರಮಗಳು ಹಾಗೂ ಗೋಲಿಬಾರ್‌ ನಡೆಸ ಬೇಕಾದ ಅನಿವಾರ್ಯತೆಯನ್ನು ಮನದಟ್ಟು ಮಾಡುವ ಪ್ರಯತ್ನ ನಡೆಸಿದರು.

ಸಮಗ್ರ ಸಾಕ್ಷ್ಯಗಳನ್ನು ಎಡಿಜಿಪಿ ಪಾಂಡೆ ಅವಲೋಕಿಸಿದರು. ಹಿಂಸಾಚಾರ ನಡೆದ ರಾತ್ರಿ ಖಾಸಗಿ ಆಸ್ಪತ್ರೆಗೆ ಪೊಲೀಸರು ನುಗ್ಗಬೇಕಾದ ಸಂದರ್ಭವನ್ನು ಕೂಡ ಈ ಸಂದರ್ಭ ವಿವರಿಸಲಾಯಿತು. ಘಟನೆಯ ವೀಡಿಯೋ, ಸಿಸಿ ಟಿವಿ ಫುಟೇಜ್‌ ದಾಖಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಕೆಲವು ಪ್ರಚೋದನಕಾರಿ ಸಂದೇಶ ಸೇರಿದಂತೆ ಸಾಕಷ್ಟು ಪ್ರಮಾಣದಲ್ಲಿ ಸಾಕ್ಷ್ಯಾಗಳನ್ನು ಕಲೆ ಹಾಕಿರುವುದನ್ನು ಕೂಡ ಅವರ ಗಮನಕ್ಕೆ ತರಲಾಯಿತು ಎಂದು ಮೂಲಗಳು ತಿಳಿಸಿವೆ.

ಗಲಭೆ ತಡೆಯಬಹುದಿತ್ತೇ?
ಗುಪ್ತಚರ ಇಲಾಖೆಯ ಮುನ್ಸೂಚನೆ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದರೂ ಮಂಗಳೂರಿನಲ್ಲಿ ಗಲಭೆ ನಡೆದಿದೆ. ಅದೇ ದಿನ ಹಾಗೂ ಅನಂತರದ ದಿನಗಳಲ್ಲಿ ಬೆಂಗಳೂರು ಸಹಿತ ರಾಜ್ಯದ ವಿವಿಧೆಡೆ ಪೌರತ್ವ ತಿದ್ದುಪಡಿ ವಿರೋಧಿ ಪ್ರತಿಭಟನೆಗಳು ನಡೆದಿದ್ದರೂ ಮಂಗಳೂರಿನಲ್ಲಿ ಮಾತ್ರ ಗಲಭೆ ನಡೆಯಲು ಕಾರಣ ಏನು? ಪೊಲೀಸರು ಒಂದಿಷ್ಟು ಗಂಭೀರವಾಗಿ ಪರಿಗಣಿಸಿದ್ದರೆ ಗಲಭೆಯನ್ನು ಮಟ್ಟಹಾಕಲು ಸಾಧ್ಯವಿತ್ತೇ ಎನ್ನುವ ಜಿಜ್ಞಾಸೆಯನ್ನು ಎಡಿಜಿಪಿ ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು ಎನ್ನಲಾಗಿದೆ.

ಕಠಿನ ಕ್ರಮಕ್ಕೆ ಸೂಚನೆ
ಈಗಾಗಲೇ 20ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. 24ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಅಲ್ಲದೆ ಗಲಭೆಗೆ ಮುನ್ನ ಹಾಗೂ ಅನಂತರ ಪ್ರಚೋದನಕಾರಿ ಸಂದೇಶಗಳನ್ನು ಕಳುಹಿಸಿದ 50ಕ್ಕೂ ಅಧಿಕ ಜನರ ವಿರುದ್ಧ ಸೈಬರ್‌ ಕ್ರೈಂ ಪೊಲೀಸರು ಕೇಸು ದಾಖಲಿಸಿದ್ದಾರೆ. ಇವುಗಳ ಬಗ್ಗೆ ಮಾಹಿತಿ ಪಡೆದುಕೊಂಡ ಎಡಿಜಿಪಿ ಅಮರ್‌ ಕುಮಾರ್‌ ಪಾಂಡೆ ಅವರು, ಸೂಕ್ತ ಸಾಕ್ಷ್ಯಾಧಾರಗಳು ಇದ್ದರೆ ಕಠಿನ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು ಎಂದು ತಿಳಿದು ಬಂದಿದೆ.

ಆಯಕಟ್ಟಿನ ಜಾಗದಲ್ಲಿ ಭದ್ರತೆ
ಶನಿವಾರ ಮಾಧ್ಯಮದ ಜತೆ ಮಾತನಾಡಿದ ಆಯುಕ್ತ ಡಾ| ಹರ್ಷ ಪಿ.ಎಸ್‌. ಅವರು ನೆಹರೂ ಮೈದಾನದ‌ಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮುಸ್ಲಿಂ ಸಂಘಟನೆಗಳು ಮುಂದೂಡಿವೆ. ಮುಂದಿನ ದಿನಾಂಕ ಹೇಳುವಂತೆ ಅವರಿಗೆ ಸೂಚಿಸಲಾಗಿದೆ. ಈಗಾಗಲೇ ಕಮಿಷನರೆಟ್‌ ವ್ಯಾಪ್ತಿಯ ಕೆಲವೆಡೆ ಪ್ರತಿಭಟನೆಗೆ ಅನುಮತಿ ನೀಡಲಾಗಿದೆ. ಜ. 12ರಂದು ಸಿಎಎ ಬೆಂಬಲಿಸಿ ಬಿಜೆಪಿ ಸಮಾವೇಶ ನಡೆಸುವುದಾಗಿ ತಿಳಿಸಿತ್ತು. ಅವರಿಗೂ ಸಮಾವೇಶ ಮುಂದೂಡುವ ಬಗ್ಗೆ ಗೃಹ ಸಚಿವರಲ್ಲಿ ಮನವಿ ಮಾಡಿದ್ದೇವೆ. ಈಗ ಮತ್ತೂಮ್ಮೆ ಈ ವಿಚಾರದಲ್ಲಿ ಅವರ ಗಮನಕ್ಕೆ ತರಲಾಗುವುದು. ಸದ್ಯ ಇಡೀ ಮಂಗಳೂರು ನಗರ ಶಾಂತವಾಗಿದೆ. ಆಯಕಟ್ಟಿನ ಜಾಗದಲ್ಲಿ ಬಿಗು ಪೊಲೀಸ್‌ ಭದ್ರತೆ ಮುಂದುವರಿಸಲಾಗಿದೆ. ಹಿಂಸಾಚಾರ ಘಟನೆಗೆ ಸಂಬಂಧಿಸಿ ಸ್ವತಂತ್ರ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಹಾಗಾಗಿ ತನಿಖೆ ಬಗ್ಗೆ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ನೆಹರೂ ಮೈದಾನಕ್ಕೆ ಪೊಲೀಸ್‌ ಸರ್ಪಗಾವಲು
ಗೋಲಿಬಾರ್‌ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸೆಂಟ್ರಲ್‌ ಕಮಿಟಿ ಶನಿವಾರ ಪ್ರತಿಭಟನೆಗೆ ನೀಡಿದ್ದ ಕರೆಯನ್ನು ವಾಪಸ್‌ ಪಡೆದರೂ ಮುಂಜಾಗ್ರತಾ ಕ್ರಮವಾಗಿ ನೆಹರೂ ಮೈದಾನದ ಸುತ್ತಮುತ್ತ ಪೊಲೀಸ್‌ ಸರ್ಪಗಾವಲು ಹಾಕಲಾಗಿತ್ತು. ಬೆಳಗ್ಗಿನಿಂದಲೇ ಸುಮಾರು 20 ಕೆಎಸ್‌ಆರ್‌ಪಿ ಪ್ಲಟೂನ್‌ ಪೊಲೀಸರು ಮೈದಾನ್‌ ಸುತ್ತ ಬಿಗಿ ಭದ್ರತೆಯನ್ನು ಕೈಗೊಂಡಿದ್ದರು.

ಯಾವುದೇ ಕ್ಷಣದಲ್ಲಿ ಪ್ರತಿಭಟನಾಕಾರರು ಮೈದಾನ ಪ್ರವೇಶಿಸಿ ಪ್ರತಿಭಟನೆ ನಡೆಸಿ ಶಾಂತಿ ಕದಡುವ ಸಾಧ್ಯತೆ ಇದೆ ಎಂಬ ಮುನ್ಸೂಚನೆ ಹಿನ್ನೆಲೆಯಲ್ಲಿ ಭದ್ರತೆ ಏರ್ಪಡಿಸಲಾಗಿತ್ತು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.