Court: ವಾಹನ ಅಪಘಾತ: ಮೃತ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ: ನ್ಯಾಯಾಲಯ ಆದೇಶ
Team Udayavani, Oct 4, 2024, 6:19 AM IST
ಮಂಗಳೂರು: ವಾಹನ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ ನೀಡುವಂತೆ ವಿಮಾ ಕಂಪೆನಿಗೆ ಆದೇಶಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯರ್ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಲಕ್ಷ್ಮೀ ಜಿ.ಎಂ. ತೀರ್ಪು ನೀಡಿದ್ದಾರೆ.
ಪಣಂಬೂರಿನ ಎಂಸಿಎಫ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹೇಶ್ ಭಟ್ 2018ರ ಮೇ 18ರಂದು ತನ್ನ ಬೈಕ್ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಕೊಟ್ಟಾರಚೌಕಿ ಬಳಿ ರಾಜಸ್ಥಾನ ನೋಂದಣಿಯ ಲಾರಿ ಢಿಕ್ಕಿ ಹೊಡೆದು ಮೃತಪಟ್ಟಿದ್ದರು.
ಒಂದನೇ ಹೆಚ್ಚುವರಿ ಸೀನಿಯರ್ ಸಿವಿಲ್ ಜಡ್ಜ್ ನ್ಯಾಯಾಲಯದಲ್ಲಿ ಮೋಟಾರು ವಾಹನ ಅಪಘಾತ ಪರಿಹಾರ ಕಾಯ್ದೆಯಡಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲಾಗಿತ್ತು. ಎದುರುವಾದಿ ವಿಮಾ ಕಂಪೆನಿಯ ನ್ಯಾಯವಾದಿಗಳು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಬಹಳಷ್ಟು ವಾದಗಳನ್ನು ಮಾಡಿದ್ದರು. ಕೊನೆಗೆ ನ್ಯಾಯಾಲಯವು ಅರ್ಜಿದಾರರು ಹಾಜರುಪಡಿಸಿದ ದಾಖಲೆಗಳು ಹಾಗೂ ಮಂಡಿಸಿದ ವಾದ ಪ್ರತಿವಾದಗಳನ್ನು ಪರಿಗಣಿಸಿ ಪರಿಹಾರ ಧನ ಪಡೆಯಲು ಮೃತರ ಪತ್ನಿ ಮತ್ತು ಪುತ್ರ ಹಾಗೂ ಹೆತ್ತವರು ಅರ್ಹರಾಗಿದ್ದಾರೆ ಎಂದು ತೀರ್ಮಾನಿಸಿತು. 1 ಕೋಟಿ 6 ಲಕ್ಷ ರೂ. ಪರಿಹಾರವನ್ನು 2018ರಿಂದ 24ರ ವರೆಗಿನ ಶೇ. 6ರಷ್ಟು ಬಡ್ಡಿಯೊಂದಿಗೆ ಸೇರಿಸಿ ಒಟ್ಟು 1.35 ಕೋ.ರೂ.ಗಳನ್ನು ಅರ್ಜಿದಾರರಿಗೆ ನೀಡಬೇಕು ಎಂದು ಆದೇಶಿಸಿತು.
ಅರ್ಜಿದಾರರ ಪರವಾಗಿ ಮಂಗಳೂರಿನ ವಕೀಲರಾದ ಎ. ದಿನೇಶ್ ಭಂಡಾರಿ, ಕೆ.ಎಸ್.ಎನ್. ಅಡಿಗ, ಪ್ರೀತಿಕಾ ಕೆ.ಎಂ. ಹಾಗೂ ತೃಪ್ತಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ
Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ
BJP: ನನ್ನಂಥವನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಋಣಿ: ಕಿಶೋರ್ ಕುಮಾರ್
State Govt: ಡಾ| ಸಂಧ್ಯಾ ಶೆಣೈಗೆ ಕಲ್ಪನಾ ಚಾವ್ಲಾ ಯುವವಿಜ್ಞಾನಿ ಪ್ರಶಸ್ತಿ
Mangaluru: ಕೆಮರಾ ಖರೀದಿಸುವುದಾಗಿ ತಿಳಿಸಿ ವಂಚನೆ; ಪ್ರಕರಣ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.