ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ: ಸೆ. 21ರಿಂದ ಮಂಗಳೂರು ದಸರಾ


Team Udayavani, Sep 19, 2017, 6:35 AM IST

1809mlr59-kudroli.jpg

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ “ಮಂಗಳೂರು ದಸರಾ-2017′ ಹಾಗೂ ನವರಾತ್ರಿ ಮಹೋತ್ಸವ ಸೆ. 21ರಿಂದ ಅ. 1ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಕ್ಷೇತ್ರದ ನವೀಕರಣದ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸೆ. 21ರಂದು ಮಧ್ಯಾಹ್ನ 12.20ಕ್ಕೆ ನವ ದುರ್ಗೆಯರು ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠೆ ನಡೆಯಲಿದೆ. ಸೆ. 28ರಂದು ಬೆಳಗ್ಗೆ 10 ಗಂಟೆಗೆ ಚಂಡಿಕಾ ಹೋಮ, ಹಗಲು ಉತ್ಸವ ಜರಗ ಲಿದೆ. ಉತ್ಸವದ ಸಂದರ್ಭ ಪ್ರತಿದಿನ ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ಕ್ಷೇತ್ರದ ಸಂತೋಷಿ ಕಲಾಮಂಟಪದಲ್ಲಿ ಪ್ರತಿದಿನ ಸಂಜೆ 6ರಿಂದ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯ ಲಿವೆ ಎಂದು ಅವರು ಹೇಳಿದರು.
ಸೆ. 30ರಂದು ಸಂಜೆ 4 ಗಂಟೆಗೆ ವೈಭವದ “ಮಂಗಳೂರು ದಸರಾ’ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಮತ್ತು ವಿಸರ್ಜನಾ ಸಮಾರಂಭ ನಡೆಯಲಿದೆ. ಮೆರವಣಿಗೆಯಲ್ಲಿ ಶ್ರೀ ಶಾರದಾ ಮಾತೆ, ಮಹಾಗಣಪತಿ, ನವದುರ್ಗೆಯರ ಸಹಿತ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಸುಮಾರು 75ಕ್ಕಿಂತಲೂ ಅಧಿಕ ಟ್ಯಾಬ್ಲೋಗಳು ಭಾಗವಹಿಸಲಿವೆ.
ಜಿಲ್ಲೆ ಹಾಗೂ ಹೊರಜಿಲ್ಲೆಯ ಜಾನಪದ ತಂಡ ಗಳು ಮೆರವಣಿಗೆಗೆ ವಿಶೇಷ ಸೊಬಗನ್ನು ನೀಡ ಲಿವೆ. ಸುಮಾರು 500ಕ್ಕೂ ಹೆಚ್ಚು ಆಲಂಕಾರಿಕ ಕೊಡೆಗಳ ಮೂಲಕ ಮೆರವಣಿಗೆಗೆ ಮೆರುಗು ದೊರೆಯಲಿದೆ ಎಂದರು.

ನವರಾತ್ರಿ ಹಾಗೂ ದಸರಾ ಕಾರ್ಯಕ್ರಮಗಳ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ನಗರವನ್ನು ವಿದ್ಯುತ್‌ ದೀಪಗಳಿಂದ ಸಿಂಗರಿಸಲಾಗುತ್ತಿದೆ. ಶೋಭಾಯಾತ್ರೆ ಕುದ್ರೋಳಿ ದೇವಸ್ಥಾನದಿಂದ ಹೊರಟು ಲೇಡಿಹಿಲ್‌, ಬಲ್ಲಾಳ್‌ಬಾಗ್‌, ಕೊಡಿಯಾಲ್‌ ಬೈಲ್‌, ಹಂಪನಕಟ್ಟೆ, ವಿ.ವಿ. ಕಾಲೇಜು, ಗಣಪತಿ ಹೈಸ್ಕೂಲ್‌ ರಸ್ತೆ, ರಥಬೀದಿ, ನ್ಯೂಚಿತ್ರ ಮಾರ್ಗವಾಗಿ ಮರಳಿ ಕುದ್ರೋಳಿ ಕ್ಷೇತ್ರಕ್ಕೆ ಬಂದು ಪುಷ್ಕರಣಿಯಲ್ಲಿ ವಿಸರ್ಜನೆಗೊಳ್ಳಲಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಎಚ್‌.ಎಸ್‌. ಸಾಯಿ ರಾಮ್‌, ಉಪಾಧ್ಯಕ್ಷ ರಾಘವೇಂದ್ರ ಕೂಳೂರು, ಕಾರ್ಯ ದರ್ಶಿ ಮಾಧವ ಸುವರ್ಣ, ಖಜಾಂಚಿ ಪದ್ಮ ರಾಜ್‌ ಆರ್‌., ಟ್ರಸ್ಟಿಗಳಾದ ಬಿ.ಕೆ. ತಾರಾ ನಾಥ್‌, ರವಿಶಂಕರ್‌ ಮಿಜಾರ್‌, ಕೆ. ಮಹೇಶ್ಚಂದ್ರ, ಅಭಿ ವೃದ್ಧಿ ಸಮಿತಿಯ ದೇವೇಂದ್ರ ಪೂಜಾರಿ, ಎನ್‌. ಹರಿಶ್ಚಂದ್ರ, ಹರಿಕೃಷ್ಣ ಬಂಟ್ವಾಳ, ಎಂ. ಶೇಖರ್‌ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

ಭಾವುಕರಾದ ಪೂಜಾರಿ
ಪತ್ರಿಕಾಗೋಷ್ಠಿ ಸಂದರ್ಭ ಜನಾರ್ದನ ಪೂಜಾರಿ ಭಾವುಕರಾಗಿ ಮಾತನಾಡಿದರು. “ಇತ್ತೀಚಿನ ದಿನಗಳಲ್ಲಿ ಅನಾರೋಗ್ಯ ನನ್ನನ್ನು ತೀವ್ರವಾಗಿ ಕಾಡುತ್ತಿದೆ. ನನ್ನ ಮಾತುಗಳನ್ನು ಕೇಳುವಾಗಲೇ ನಿಮಗೆ ಮನವರಿಕೆ ಆಗಿರ ಬಹುದು. ಮುಂದಿನ ಮಂಗಳೂರು ದಸರಾ ವನ್ನು ನಾನು ನೋಡುತ್ತೇನೆ ಎಂಬ ವಿಶ್ವಾಸವೂ ನನಗಿಲ್ಲ. ಅಲ್ಲಿಯವರೆಗೆ ನಾನು ಬದು ಕಿರುತ್ತೇನೆ ಎಂಬ ನಂಬಿಕೆ ಕೂಡ ನನಗಿಲ್ಲ. ಹಾಗಾಗಿ ಈ ಪತ್ರಿಕಾಗೋಷ್ಠಿಯೇ ನನ್ನ ಕೊನೆಯ ಪತ್ರಿಕಾಗೋಷ್ಠಿ ಆಗಿರಲೂ ಬಹುದು’ ಎಂದು ಜನಾರ್ದನ ಪೂಜಾರಿ ಭಾವುಕರಾಗಿ ಹೇಳಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.