ಮಂಗಳೂರು ವಿಮಾನ ನಿಲ್ದಾಣ: ಬಳಕೆದಾರರ ಶುಲ್ಕ ಏರಿಕೆಗೆ ನಿಯಂತ್ರಣ ಪ್ರಾಧಿಕಾರ ತಡೆ


Team Udayavani, Nov 17, 2022, 10:06 AM IST

ಮಂಗಳೂರು ವಿಮಾನ ನಿಲ್ದಾಣ: ಬಳಕೆದಾರರ ಶುಲ್ಕ ಏರಿಕೆಗೆ ನಿಯಂತ್ರಣ ಪ್ರಾಧಿಕಾರ ತಡೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ವಿಧಿಸುವ ಬಳಕೆದಾರರ ಶುಲ್ಕವನ್ನು ಏರಿಸುವ ಬಹು ವರ್ಷಗಳ ಪ್ರಸ್ತಾವ (ಎಂವೈಟಿಪಿ)ಕ್ಕೆ ಅನುಮೋದನೆ ಸಿಗದ ಪರಿಣಾಮ ಶುಲ್ಕ ಏರಿಕೆ ಸದ್ಯಕ್ಕಿಲ್ಲ.

ಈಗಿನ ದರಗಳನ್ನೇ 2023ರ ಮಾರ್ಚ್‌ ಅಥವಾ ಮುಂದಿನ ಆದೇಶದವರೆಗೆ ಮುಂದುವರಿಸಲು ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ (ಎಇಆರ್‌ಎಐ) ಸೂಚಿಸಿದೆ.

ಮಂಗಳೂರಿನೊಂದಿಗೆ ಅಹ್ಮದಾಬಾದ್‌, ಲಕ್ನೋ, ಜೈಪುರ, ಗುವಾಹಟಿ, ತಿರುವನಂತಪುರ ಹಾಗೂ ಶ್ರೀನಗರ ವಿಮಾನ ನಿಲ್ದಾಣಗಳ ಶುಲ್ಕ ಪರಿಷ್ಕರಣೆಗೆ ಪ್ರಸ್ತಾವಿಸಲಾಗಿತ್ತು. ಈ ಪೈಕಿ ಮಂಗಳೂರು, ಅಹ್ಮದಾಬಾದ್‌, ಲಕ್ನೋ ಹಾಗೂ ಶ್ರೀನಗರ ವಿಮಾನ ನಿಲ್ದಾಣಗಳ ಶುಲ್ಕ ನಿರ್ಧರಣೆ ಪ್ರಕ್ರಿಯೆ ಅಂತಿಮಗೊಳ್ಳದ್ದರಿಂದ ಹಳೆಯ ಶುಲ್ಕವನ್ನೇ ಮುಂದುವರಿಸಲು ಎಇಆರ್‌ಎಇ ಆದೇಶಿಸಿದೆ.

ಕಳೆದ ಆಗಸ್ಟ್‌ನಲ್ಲಿ ಅದಾನಿ ಸಮೂಹ ನಿರ್ವಹಣೆಯ ಆಡಳಿತ ಮಂಗಳೂರು ವಿಮಾನ ನಿಲ್ದಾಣದಲ್ಲಿ ದೇಶೀಯ ಪ್ರಯಾಣಿಕರಿಗೆ ತಲಾ 100 ರೂ. (ಇದೇ ಅಕ್ಟೋಬರ್‌ 1ರಿಂದ) ಏರಿಸಲು ಅನುಮತಿ ಕೋರಿತ್ತು. ಪ್ರಸ್ತುತ ಈ ಶುಲ್ಕ 150 ರೂ. ಇದೆ. ಈ ಬಹುವರ್ಷೀಯ ಶುಲ್ಕ ಪ್ರಸ್ತಾವದ ಪ್ರಕಾರ ಮಾರ್ಚ್‌ 31, 2026ರ ವೇಳೆಗೆ ಈ ದರವನ್ನು 725 ರೂ.ಗೆ ಏರಿಸುವ (ಪ್ರತೀ ವರ್ಷಕ್ಕೊಮ್ಮೆ ಏರಿಕೆ) ಉದ್ದೇಶವಿದೆ. ಹಾಗೆಯೇ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪ್ರತೀ ವರ್ಷ ಏರಿಸುತ್ತ ಹೋಗಿ 2026ರ ವೇಳೆಗೆ 1,200 ರೂ. ಶುಲ್ಕ ವಿಧಿಸುವ ಉದ್ದೇಶವಿದೆ.
2020ರ ಅಕ್ಟೋಬರ್‌ನಲ್ಲಿ ಮಂಗಳೂರು ವಿಮಾನ ನಿಲ್ದಾಣ ನಿರ್ವಹಣೆಯನ್ನು ಅದಾನಿ ಸಮೂಹ ಗುತ್ತಿಗೆಗೆ ಪಡೆದಿತ್ತು. ಆ ಬಳಿಕ ಹಳೆಯ ಶುಲ್ಕವನ್ನೇ ಮುಂದುವರಿಸಿತ್ತು.

ತನ್ನ ಮುಂಬರುವ ಅಭಿವೃದ್ಧಿ ಕಾರ್ಯಗಳನ್ನು ಎಂವೈಟಿಪಿ ಪ್ರಸ್ತಾವ ದಲ್ಲಿ ಅದಾನಿ ಏರ್‌ಪೋರ್ಟ್ಸ್ ವಿವರವಾಗಿ ತಿಳಿಸಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಮೊದಲು ಕೈಗೆತ್ತಿಕೊಂಡಿರುವ 300 ಕೋಟಿ ರೂ. ಮೌಲ್ಯದ ವಿಸ್ತರಣ ಕಾಮಗಾರಿಯನ್ನು ಅದಾನಿ ಏರ್‌ಪೋರ್ಟ್ಸ್ ಈಗ ವಹಿಸಿ ಕೊಂಡಿದೆ, ಅಲ್ಲದೆ 500 ಕೋಟಿ ರೂ. ಮೊತ್ತದ ಹೆಚ್ಚುವರಿ ಅಭಿವೃದ್ಧಿ ಕಾಮಗಾರಿಗಳನ್ನೂ ಅದು ಮುಂದಿನ 5 ವರ್ಷಗಳಲ್ಲಿ ಕೈಗೊಳ್ಳಲಿದೆ. ಸುರಕ್ಷೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ಕಾಗಿ ಬಳಕೆದಾರರ ಶುಲ್ಕದಲ್ಲಿ ಏರಿಕೆಯನ್ನು ಪ್ರಸ್ತಾವಿಸಲಾಗಿದೆ.

ಆಗಮಿಸುವವರಿಗೂ ಶುಲ್ಕ?
ಪ್ರಸ್ತಾವದಲ್ಲಿರುವ ಮತ್ತೂಂದು ಗಮನಾರ್ಹ ಅಂಶವೆಂದರೆ ಮಂಗಳೂರಿಗೆ ಆಗಮಿಸುವವರಿಗೂ ಶುಲ್ಕ. ಇದುವರೆಗೆ ಇಲ್ಲಿಂದ ತೆರಳುವ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾತ್ರವೇ ಬಳಕೆದಾರ ಶುಲ್ಕ ವಿಧಿಸಲಾಗುತ್ತಿತ್ತು. ಹೊಸ ಪ್ರಸ್ತಾವದಂತೆ ಆಗಮಿಸುವ ಪ್ರಯಾಣಿಕರಿಗೂ ತಲಾ 250 ರೂ. ಶುಲ್ಕ ವಿಧಿಸುವ ಪ್ರಸ್ತಾವಿಸಿದೆ.

ಇದನ್ನೂ ಓದಿ : ಬಿಜೆಪಿ ನಾಯಕರಿಗೆ ಕೊಲೆ ಬೆದರಿಕೆ ಆರೋಪ: ಪ್ರಿಯಾಂಕ್ ಖರ್ಗೆ ವಿರುದ್ಧ ದೂರು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.