
Mangaluru 13 ವರ್ಷಗಳಿಂದ ತಲೆಮರೆಸಿಕೊಂಡಿದ್ದಾತನ ಬಂಧನ
Team Udayavani, Sep 4, 2023, 11:59 PM IST

ಮಂಗಳೂರು: ಹಲವು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜ ರಾಗದೆ 13 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಜಪ್ಪಿನಮೊಗರು ನಿವಾಸಿ ಪ್ರೀತಂ ಆಚಾರ್ಯ (38) ನನ್ನು ಶನಿವಾರ ಉರ್ವ ಪೊಲೀಸರು ಬಂಧಿಸಿದ್ದಾರೆ.
ಈತನ ವಿರುದ್ದ ವಾರಂಟ್ ಜಾರಿಯಾಗಿತ್ತು. ಈತ ತಲೆಮರೆಸಿ ಕೊಂಡು ಮುಂಬಯಿಯ ಹೊಟೇ ಲೊಂದರಲ್ಲಿ ಮ್ಯಾನೇಜರ್ಆಗಿ ಕೆಲಸ ಮಾಡಿಕೊಂಡಿದ್ದ.
ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತ ಅಂಶುಕುಮಾರ್, ಅಪರಾಧ ಮತ್ತು ಸಂಚಾರ ವಿಭಾಗದ ಪೊಲೀಸ್ ಉಪ ಆಯುಕ್ತ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ, ಕೇಂದ್ರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಮಾರ್ಗದರ್ಶನದಂತೆ ಉರ್ವ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕಿ ಭಾರತಿ ಜಿ. ನೇತೃತ್ವದಲ್ಲಿ ಉರ್ವ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಹರೀಶ್ ಎಚ್.ಎ., ಸಹಾಯಕ ಪೊಲೀಸ್ ಉಪ ನಿರೀಕ್ಷಕ ಉಲ್ಲಾ ಸ್ ಮಹಲೆ, ಎಚ್.ಸಿ. ಸುಧಾಕರ್, ಮಹಿಳಾ ಕಾನ್ಸ್ಟೆಬಲ್ ಸಫೀನಾ ಅವರು ವಿಶೇಷ ಕರ್ತವ್ಯದಲ್ಲಿ ಮುಂಬಯಿಗೆ ತೆರಳಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
ಟಾಪ್ ನ್ಯೂಸ್

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.