Mangaluru”ಬೊಳ್ಳಿಮಲೆತ ಶಿವಶಕ್ತಿಲು’ ಪ್ರದರ್ಶನಕ್ಕೆ ಚಾಲನೆ


Team Udayavani, Aug 27, 2023, 11:36 PM IST

Mangaluru”ಬೊಳ್ಳಿಮಲೆತ ಶಿವಶಕ್ತಿಲು’ ಪ್ರದರ್ಶನಕ್ಕೆ ಚಾಲನೆ

ಮಂಗಳೂರು: ಉರ್ವ ಚಿಲಿಂಬಿಯ ಶ್ರೀ ಶಿರಡಿ ಸಾಯಿಬಾಬ ಮಂದಿರದ ಮುಖ್ಯಸ್ಥೆ ಲಾವಣ್ಯಾ ವಿಶ್ವಾಸ್‌ಕುಮಾರ್‌ದಾಸ್‌ ನಿರ್ದೇಶನದ, ಸಾಯಿಶಕ್ತಿ ಕಲಾ ಬಳಗದ ಶ್ರೀ ದೇವಿ ಭಗವತಿ ಪರಿವಾರದ ಪುರಾಣ ಪುಣ್ಯ ಕಥೆ ಹೊಂದಿರುವ “ಬೊಳ್ಳಿಮಲೆತ ಶಿವಶಕ್ತಿಲು’ ತುಳು ಪೌರಾಣಿಕ ನಾಟಕದ ಪ್ರಾಯೋಗಿಕ ಪ್ರದರ್ಶನ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ರವಿವಾರ ನಡೆಯಿತು.

ಅವಧೂತ ಶ್ರೀ ವಿನಯ ಗುರೂಜಿ ಆಶೀರ್ವಚನ ನೀಡಿ, ಯಾವುದೇ ಕಲೆ ಬೆಳೆಯಲು ಪ್ರೋತ್ಸಾಹ ಅಗತ್ಯ. ಅಧ್ಯಾತ್ಮಕ್ಕೆ ಹೊರಗಿನ ವೇಷಭೂಷಣದ ಬದಲಾಗಿ ಮನೋಖುಷಿ ಅಗತ್ಯ. ದಕ್ಷಿಣ ಕನ್ನಡ ಜಿಲ್ಲೆಯ ಮಂದಿ ಕಲಾವಿದರನ್ನು ಕೈಬಿಟ್ಟಿಲ್ಲ. ಪೌರಾಣಿಕ ನಾಟಕಗಳನ್ನು ಪ್ರೋತ್ಸಾಹಿಸಿ ಬೆಳೆಸಿದ್ದಾರೆ ಎಂದರು.

ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, “ಬೊಳ್ಳಿಮಲೆತ ಶಿವಶಕ್ತಿಲು’ ಪೌರಾಣಿಕ ನಾಟಕ ದೇಶ-ವಿದೇಶಗಳಲ್ಲಿ ಪ್ರದರ್ಶನ ಕಾಣಲಿ ಎಂದು ಹಾರೈಸಿದರು.

ಮಾಜಿ ಶಾಸಕ ಜೆ.ಆರ್‌. ಲೋಬೊ ಮಾತನಾಡಿ, ಶಿರಡಿ ಸಾಯಿಬಾಬಾ ಅಂದು ಇಡೀ ಸಮಾಜಕ್ಕೆ ದಾರಿ ದೀಪವಾಗಿದ್ದವರು. ಭಗವಂತನ ಶಕ್ತಿ ಏನೆಂದು ಅರ್ಥ ಮಾಡಿಕೊಳ್ಳಲು ಈ ರೀತಿಯ ಪೌರಾಣಿಕ ನಾಟಕ ನೋಡಬೇಕು. ಅದರಲ್ಲಿ ಒಳಗೊಂಡಿರುವ ಶಿಕ್ಷಣವನ್ನು ಆತ್ಮದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು. ನಾಟಕ ರಚನೆಕಾರ ಕದ್ರಿ ನವನೀತ ಶೆಟ್ಟಿ ಪ್ರಸ್ತಾವನೆಗೈದು, ಕೇರಳದ ತೃಶ್ಶೂರ್‌ನ ಕಲಾವಿದರು ನಾಟಕದ ರಂಗವೇದಿಕೆ ಸಿದ್ಧಗೊಳಿಸಿದ್ದಾರೆ. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವಿಭಿನ್ನ ರೀತಿಯಲ್ಲಿ ಈ ಪೌರಾಣಿಕ ನಾಟಕ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ಸಮ್ಮಾನ
ಕಲಾ ಕ್ಷೇತ್ರದ ಸಾಧಕರಾದ ಪಟ್ಲ ಸತೀಶ್‌ ಶೆಟ್ಟಿ, ಭೋಜರಾಜ್‌ ವಾಮಂಜೂರು, ಬಿ.ಎಸ್‌. ಕಾರಂತ್‌ ಇಂಚರ, ಡಾ| ಪ್ರಿಯಾ ಹರೀಶ್‌, ಅಶೋಕ್‌ ಕ್ರಾಸ್ತಾ ಅವರನ್ನು ಸಮ್ಮಾನಿಸಲಾಯಿತು. ಶಿಕ್ಷಕಿ ಅಹಲ್ಯಾ ಅವರಿಗೆ ಗುರುವಂದನೆ ನೀಡಲಾಯಿತು.

ರಂಗನಿರ್ದೇಶಕ ವಿಜಯ ಕುಮಾರ್‌ ಕೊಡಿಯಾಲ್‌ಬೈಲ್‌, ಮುಂಬಯಿ ಸಂಚಾಲಕ ಅಜೆಕಾರು ಬಾಲಕೃಷ್ಣ ಶೆಟ್ಟಿ, ಮಾಜಿ ಮೇಯರ್‌ ಶಶಿಧರ ಹೆಗ್ಡೆ, ನಮ್ಮ ಕುಡ್ಲದ ಲೀಲಾಕ್ಷ ಕರ್ಕೇರ, ಶಿರಡಿ ಶ್ರೀ ಸಾಯಿ ಮಂದಿರದ ಮುಖ್ಯಸ್ಥ ವಿಶ್ವಾಸ್‌ಕುಮಾರ್‌ದಾಸ್‌, ಲಾವಣ್ಯ ವಿಶ್ವಾಸ್‌ ದಾಸ್‌ ಮುಖ್ಯ ಅತಿಥಿಗಳಾಗಿದ್ದರು.

“ಬೊಳ್ಳಿಮಲೆತ ಶಿವಶಕ್ತಿಲು’ ನಾಟಕವನ್ನು ನವನೀತ ಶೆಟ್ಟಿ ಕದ್ರಿ ರಚಿಸಿದ್ದು ಶಿರಿಡಿ ಸಾಯಿ ಮಂದಿರದ ಮುಖ್ಯಸ್ಥ ವಿಶ್ವಾಸ್‌ದಾಸ್‌ ನಿರ್ಮಾಣ, ಲಾವಣ್ಯ ವಿಶ್ವಾಸ್‌ ದಾಸ್‌ ನಿರ್ದೇಶನ, ಬಿ.ಎಸ್‌. ಕಾರಂತ ಸಂಗೀತ, ಲಲಿತ ಕಲಾ ಆರ್ಟ್ಸ್ ವೇಷಭೂಷಣ, ಪಟ್ಲ ಸತೀಶ್‌ ಶೆಟ್ಟಿ, ಲಾವಣ್ಯ ಸುಧಾಕರ್‌ ಹಿನ್ನೆಲೆ ಗಾಯನ, ದಿವ್ಯಜ್ಯೋತಿ ಸೌಂಡ್ಸ್‌ ಧ್ವನಿ, ತಸ್ಮಯ್‌ ಕೊಡಿಯಾಲ್‌ಬೈಲ್‌ ಬೆಳಕು ನಿರ್ವಹಣೆ, ದನಿಶ್‌ ಕುಮಾರ್‌ದಾಸ್‌ ತಾಂತ್ರಿಕ ನಿರ್ವಹಣೆ ನೀಡಿದ್ದಾರೆ.

ವಿಶ್ವಾಸ್‌ ಕುಮಾರ್‌ದಾಸ್‌, ಸ್ವಾಗತಿಸಿ, ಲಾವಣ್ಯಾ ವಿಶ್ವಾಸ್‌ದಾಸ್‌ ವಂದಿಸಿದರು. ಪ್ರಿಯಾ ಹರೀಶ್‌ ಮತ್ತು ರೋಹಿತ್‌ ಉಳ್ಳಾಲ ನಿರೂಪಿಸಿದರು.

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Mangaluru: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ; ನಾಳೆ ಶಿಕ್ಷೆ ಪ್ರಕಟ

Mangaluru: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ; ನಾಳೆ ಶಿಕ್ಷೆ ಪ್ರಕಟ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.