Mangaluru: ಉಸಿರಾಟ ಸಮಸ್ಯೆ; ಎಂಟು ತಿಂಗಳ ಗರ್ಭಿಣಿ ಸಾವು
Team Udayavani, Oct 9, 2024, 6:45 AM IST
ಮಂಗಳೂರು: ನಗರ ಹೊರ ವಲಯದ ಅರ್ಕುಳ ಗಣೇಶ್ತೋಟ ನಿವಾಸಿ ಎಂಟು ತಿಂಗಳ ಗರ್ಭಿಣಿಯೊಬ್ಬರು ಉಸಿರಾಟ ಸಮಸ್ಯೆಯಿಂದ ಮೃತಪಟ್ಟಿದ್ದಾರೆ.
ಶರಣ್ಯ (29) ಮೃತ ದುರ್ದೈವಿ. ಅವರಿಗೆ ರವಿವಾರ ತಡರಾತ್ರಿ ಸುಮಾರು 1.15ರ ಸುಮಾರಿಗೆ ಉಸಿರಾಡಲು ಸಮಸ್ಯೆಯಾಗಿ ದಮ್ಮು ಕಟ್ಟುವುದಕ್ಕೆ ಆರಂಭವಾಗಿದೆ. ವೈದ್ಯರು ಮೊದಲೇ ನೀಡಿದ್ದ ಸೂಚನೆಯಂತೆ ವಾಕಿಂಗ್ ಮಾಡಿದರೂ ಕಡಿಮೆಯಾಗದೆ ಉಸಿರಾಟ ಸಮಸ್ಯೆ ಹೆಚ್ಚಾಗಿದೆ. ಕೂಡಲೇ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಈ ವೇಳೆ ದಾರಿ ಮಧ್ಯದಲ್ಲಿ ಅವರಿಗೆ ವಾಂತಿಯಾಗಿದೆ. ಪಡೀಲ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.
ಶರಣ್ಯ ಅವರು ರವಿವಾರವಷ್ಟೇ 29ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿದ್ದರು. ಮನೆಯಲ್ಲೇ ಸಣ್ಣ ಕಾರ್ಯಕ್ರಮವನ್ನೂ ಮಾಡಿದ್ದರು. ಎರಡನೇ ಬಾರಿ ಗರ್ಭಿಣಿಯಾಗಿದ್ದು, ಎರಡು ವರ್ಷದ ಒಂದು ಹೆಣ್ಣು ಮಗುವಿದೆ. ಎರಡು ಮೂರು ದಿನದ ಹಿಂದೆ ವೈದ್ಯರಲ್ಲಿಗೆ ತೆರಳಿ ತಪಾಸಣೆಯನ್ನೂ ಮಾಡಿಸಿಕೊಂಡು ಬಂದಿದ್ದರು.
ಶರಣ್ಯ ಅವರಿಗೆ ಮದುವೆಯಾಗಿ ಸುಮಾರು 8 ವರ್ಷವಾಗಿದ್ದು, ಪತಿಯೊಂದಿಗೆ ಗಲ್ಫ್ ರಾಷ್ಟ್ರದಲ್ಲಿದ್ದರು. ಗರ್ಭಿಣಿಯಾಗಿ ಎರಡು ತಿಂಗಳು ಆಗುತ್ತಲೇ ಊರಿಗೆ ಬಂದು ನೆಲೆಸಿದ್ದರು.
ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಘಟನೆಗೆ ನೈಜ ಕಾರಣ ಮರಣೋತ್ತರ ಪರೀಕ್ಷೆ ಬಳಿಕ ತಿಳಿದು ಬರಲಿದೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್ಗೆ ವಿದ್ಯಾರ್ಥಿಗಳಿಲ್ಲ !
Mangaluru: “ಐ ವಾಚ್’ ಗಿಫ್ಟ್ ಆಸೆಗೆ 1,10,028 ರೂ. ಕಳೆದುಕೊಂಡರು
Mangaluru: ಹುಲಿ ವೇಷದ ಅಬ್ಬರ ಸವಿಯಲಿರುವ ತಾರೆಯರು
Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ
Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!
Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..
Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ
Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು
Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.