Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌


Team Udayavani, Oct 18, 2024, 8:30 PM IST

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

ಮಲ್ಲಿಕಟ್ಟೆ: ಮಕ್ಕಳಿಗಾಗಿ ತುಳುವನ್ನು ಡಿಜಿಟಲ್‌ ಸ್ವರೂಪಗಳಲ್ಲಿ ತಂದರೆ, ಇಂದಿನ ಮಕ್ಕಳಿಗೆ ಅದು ಬಹಳ ಆಪ್ತವಾಗುತ್ತದೆ ಮತ್ತು ಜಗದಗಲದ ಜನರಿಗೆ ತಲುಪುತ್ತದೆ. ಮಕ್ಕಳಿಗೆ ದೊಡ್ಡ ದೊಡ್ಡ ಗ್ರಂಥಗಳನ್ನು ನೀಡಿದರೆ ತುಳುವಿನ ಬಗೆಗೆ ಆಸಕ್ತಿ ಬರದು. ಮಕ್ಕಳಿಗೆ ಅವರ ವಯಸ್ಸಿಗೆ ಸಂಬಂಧಪಟ್ಟ ರೀತಿಯಲ್ಲಿ ಸಾಹಿತ್ಯವನ್ನು ನೀಡಿ ಭಾಷೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್‌ ಗಟ್ಟಿ ಕಾಪಿಕಾಡ್‌ ಹೇಳಿದರು.

ರಘು ಇಡ್ಕಿದು ರವರು ಸಾಹಿತ್ಯ ರಚಿಸಿ, ಸಂಗೀತ ನಿರ್ದೇಶಕ ಎಲ್ಲೂರು ಶ್ರೀನಿವಾಸರಾವ್‌ ಸಂಗೀತ ನೀಡಿದ, ವಿದ್ಯಾ.ಯು ನಿರ್ಮಾಣ, ನಿರ್ದೇಶನ, ಸಂಕಲನ ಮಾಡಿ, ಮಕ್ಕಳಿಂದಲೇ ಹಾಡುಗಳನ್ನು ಹಾಡಿಸಿ, ದೃಶ್ಶಿಕರಿಸಿದ ಈ ಮಕ್ಕಳ ತುಳು ಹಾಡುಗಳನ್ನು ಕದ್ರಿ ಮಲ್ಲಿಕಟ್ಟೆಯ ಶ್ರೀ ಕೃಷ್ಣ ಸಭಾಭವನದಲ್ಲಿ ಗುರುವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ತುಳುನಾಡಿನ ಗುಡ್ಡ, ಬೆಟ್ಟ, ನದಿ,ಬಯಲು,ಗದ್ದೆ, ತೋಡು, ತೋಟ ಇವುಗಳೆಲ್ಲ ದೊಡ್ಡವರ ಗಮನಕ್ಕೆ ಬಂದಿರುತ್ತದೆ. ಆದರೆ ಇಂದಿನ ಮಕ್ಕಳ ಗಮನಕ್ಕೆ ಬರಬೇಕಾದ ಅಗತ್ಯವಿದೆ. ಹಾಗಾಗಿ ಮಕ್ಕಳನ್ನು ಬಳಸಿಕೊಂಡು ಆ ದೃಶ್ಯಗಳನ್ನು ದೃಶ್ಶಿಕರಿಸಿ ಮಕ್ಕಳಿಗೆ ನೀಡಿದಾಗ ಆಪ್ತವಾಗುತ್ತದೆ. ಇದರಿಂದ ನಾಡಿನ ಬಗೆಗೆ ಭಾಷೆಯ ಬಗೆಗೆ ಮಕ್ಕಳಲ್ಲಿ ಕಿಂಚಿತ್ತಾದರೂ ಜಾದೃತಿ ಮೂಡುವ ಸಾಧ್ಯತೆ ಇದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಹಿರಿಯ ಕವಿ ಸಾಹಿತಿ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅವರು ಮಾತನಾಡಿ, ತುಳುವಿನಲ್ಲಿ ಈ ರೀತಿಯ ಮಕ್ಕಳ ಹಾಡುಗಳು ಇದುವರೆಗೆ ಬಂದಿಲ್ಲ. ತುಳುವನ್ನು ಈ ರೀತಿ ಮಕ್ಕಳಿಗೆ ದಾಟಿಸಬೇಕಾದ ತುರ್ತು ಅಗತ್ಯ ಇಂದಿನ ದಿನಗಳಲ್ಲಿ ಇದೆ ಎಂದು ನುಡಿದರು.

ಸುರತ್ಕಲ್‌ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ| ಪಿ.ಕೃಷ್ಣಮೂರ್ತಿ ಅವರು ಮಾತನಾಡಿ, ತುಳುವನ್ನು ಶಿಕ್ಷಣದ ಮೂಲಕ ಕಟ್ಟುವ ಅಗತ್ಯ ಇಂದು ಬಹಳ ಇದೆ ಎಂದರು.

ಸಂಗೀತ ನಿರ್ದೇಶಕರಾದ ಎಲ್ಲೂರು ಶ್ರೀನಿವಾಸ ರಾವ್‌ ಮತ್ತು ನಿರ್ಮಾಣ ನಿರ್ದೇಶನ ಮತ್ತು ಸಂಕಲನ ಮಾಡಿದ ವಿದ್ಯಾ.ಯು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಾಡುಗಳನ್ನು ಹಾಡಿದ ಮಕ್ಕಳು, ಹಾಡುಗಳಲ್ಲಿ ಅಭಿನಯಿಸಿದ ಮಕ್ಕಳು ಪಾಲ್ಗೊಂಡಿದ್ದರು.

ರಘು ಇಡ್ಕಿದು ಕಾರ್ಯಕ್ರಮ ನಿರೂಪಿಸಿದರು. ಥಂಡರ್‌ ಕಿಡ್ಸ್‌ ಮಂಗಳೂರು ಮತ್ತು ವಿದ್ಯಾ ಪ್ರಕಾಶನ ಕಾರ್ಯಕ್ರಮ ಆಯೋಜಿಸಿತ್ತು.

ಟಾಪ್ ನ್ಯೂಸ್

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

POlice

Panambur ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ ಆರೋಪಿಗಳ ಮಹಜರು, ಮುಂದುವರಿದ ತನಿಖೆ

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

8(3)

Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

1-dcc

Udupi;ವಿಧಾನಪರಿಷತ್‌ ಉಪಚುನಾವಣೆ: ನಿಷೇಧಾಜ್ಞೆ ಜಾರಿ

man-a

Siddapura: ಪುತ್ರನ ಮನೆ ಸಾಲದಿಂದ ತಂದೆ ಆತ್ಮಹ*ತ್ಯೆ

police

Bangla ಅಕ್ರಮ ವಲಸೆ : ಸಂತೆಕಟ್ಟೆಯಲ್ಲಿ ಮತ್ತೋರ್ವನ ಬಂಧನ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.