Mangaluru: ಬರೊಂದುಲ್ಲ.. ಮಾರ್ನೆಮಿದ ಪಿಲಿಕುಲು!

ತಾಸೆದ ಪೆಟ್ಟ್ ಗ್‌ ಊರುದ ಪಿಲಿಕುಲು ನಲಿಪುನ ಪೊರ್ಲು ತೂಯರಾ...! ಕರಾವಳಿಯಲ್ಲಿ ನವರಾತ್ರಿ ಹಬ್ಬದ ಸಂಭ್ರಮ ಉತ್ತುಂಗಕ್ಕೇರಿಸುವ ಹುಲಿ ಕುಣಿತ

Team Udayavani, Oct 3, 2024, 1:37 PM IST

1

ಮಹಾನಗರ: ಹುಲಿ ವೇಷಗಳ ಕುಣಿತದ ಜನಪ್ರಿಯತೆ ಈಗ ಎಷ್ಟರಮಟ್ಟಿಗೆ ಇದೆ ಎಂದರೆ ತಾಸೆಯ ಪೆಟ್ಟು ಕೇಳಿದರೆ ಸಾಕು ಈಗ ಕರಾವಳಿ ಮಾತ್ರವಲ್ಲ, ಇಡೀ ಕರ್ನಾಟಕ ಕುಣಿಯುತ್ತದೆ. ಮಕ್ಕಳಿಂದ ಹಿಡಿದು ವಯೋವೃದ್ಧರ ವರೆಗೆ ಎಲ್ಲರ ಮನಸ್ಸನ್ನು ಮುದಗೊಳಿಸುವ ಸಂಭ್ರಮ ಇದು. ಹೆಜ್ಜೆ ಹಾಕುವಂತೆ ಪ್ರಚೋದಿಸುವ, ಕಸರತ್ತುಗಳ ಮೂಲಕ ಅಚ್ಚರಿಗೆ ತಳ್ಳುವ ವಿಸ್ಮಯ ಇದು. ಅಂಥ ಹುಲಿ ಕುಣಿತದ ಸಡಗರ ನವರಾತ್ರಿಯ ಹೊತ್ತಿಗೆ ತಾರಕಕ್ಕೇರುತ್ತದೆ.

ಸಂಕಷ್ಟದಿಂದ ಮುಕ್ತಿಕೊಡು ಎಂದು ಬೇಡಿಕೊಂಡಾಗ ಹೇಳಿದ ಹರಕೆಯಾಗಿ, ಭಕ್ತಿಯ ಸಮರ್ಪಣೆಯಾಗಿ, ದೇವಿಯ ಸೇವೆಯಾಗಿ, ನಂಬಿಕೆಯಾಗಿ ಹುಟ್ಟಿಕೊಂಡದ್ದು ಹುಲಿ ವೇಷ. ಇಂದು ಹತ್ತಾರು ತಂಡಗಳಾಗಿ ಅದ್ಧೂರಿತನ, ವಿಜೃಂಭಣೆಯೊಂದಿಗೆ ತುಳುನಾಡಿನ ಹೆಮ್ಮೆಯ ಸಾಂಸ್ಕೃತಿಕ ಸೊಗಡಾಗಿ ಬದಲಾಗಿದೆ. ಇಲ್ಲಿ ಸುದೀರ್ಘ‌ ವರ್ಷದಿಂದ ಹುಲಿ ವೇಷ ಆಯೋಜಿಸುತ್ತಿರುವ ಹಲವು ಸಂಘಟನೆಗಳಿವೆ. ಹುಲಿ ವೇಷ ಹಾಕುವ ಸುಮಾರು 50ಕ್ಕೂ ಅಧಿಕ ಪ್ರಸಿದ್ಧ ತಂಡಗಳು ಮಂಗಳೂರು ಆಸುಪಾಸಿನಲ್ಲೇ ಇದೆ. ತಮ್ಮ ಪ್ರದರ್ಶನದ ಮೂಲಕವೇ ಒಂದಕ್ಕೊಂದು ಮೀರಿಸುವ ಹುಲಿ ಕುಣಿತಗಳಿವೆ.

ಅಚ್ಚರಿ ಎಂದರೆ, ಈಗ ಹುಲಿ ಕುಣಿತ ನಾನಾ ವೈವಿಧ್ಯತೆ ಗಳೊಂದಿಗೆ, ವಾಣಿಜ್ಯಿಕ ವಾಗಿ ಬೆಳೆದಿದೆಯಾದರೂ ಆ ಮೂಲ ಭಕ್ತಿ ಮತ್ತು ನಿಯಮಪಾಲನೆಗಳು ಮಾತ್ರ ಕಿಂಚಿತ್ತೂ ಬದಲಾಗದೆ ಹಾಗೇ ಉಳಿದಿವೆ. ಇಲ್ಲಿ ಜಾತಿ, ಮತ, ಧರ್ಮದ ಭೇದಗಳಿಲ್ಲ. ಸಾಮರಸ್ಯದ ನೆರಳಿನಲ್ಲಿ ಹುಲಿ ಕುಣಿತ ಮೈಮರೆಸುತ್ತಿದೆ.

ಹುಲಿ ಹೆಜ್ಜೆಯ ಹಿಂದೆ ತರಬೇತಿ
ಹುಲಿ ವೇಷಧಾರಿಯ ವಿಭಿನ್ನ ಸಾಹಸ ಪ್ರದರ್ಶನವೇ ಈಗಿನ ವಿಶೇಷ. ತರಹೇವಾರಿ ಕುಣಿಯುವ ಒಂದೊಂದು ಹೆಜ್ಜೆಯ ಹಿಂದೆ ಹುಲಿ ವೇಷಧಾರಿಯ ಶ್ರಮವಿದೆ, ತರಬೇತಿಯೂ ಇದೆ. ‘ತಾಲೀಮು’ ಅನುಭವ ಇದ್ದವರಿಗೆ ಇದು ಲೀಲಾಜಾಲವಾಗಿದ್ದರೆ, ಡ್ಯಾನ್ಸ್‌ ಪ್ರವೀಣರು ಇತ್ತೀಚೆಗೆ ಹೊಸ ಲುಕ್‌ ನೀಡಿರುವುದು ಮತ್ತೂಂದು ವಿಶೇಷ. ಸಂಪ್ರದಾಯ ಪ್ರಕಾರ ‘ತೇಲ್‌ ಬಗ್ಗುನಿ’, ‘ಮಂಕಿ ಡೈವ್‌’, ಕೈಯಲ್ಲಿ ನಡೆಯುವುದು, ಅಕ್ಕಿ ಮುಡಿ ಎತ್ತುವುದು ಸಹಿತ ನಾನಾ ಸಾಹಸ ಪ್ರದರ್ಶನವಿದೆ.

ಹುಲಿ ವೇಷ ಹುಟ್ಟಿದ ಬಗ್ಗೆ ಹಲವು ಕಥೆಗಳಿವೆ

1. ಮಂಗಳಾದೇವಿ ದೇವಸ್ಥಾನದ ಬಳಿಯ ಒಂದು ಮಗುವಿಗೆ ವರ್ಷ ತುಂಬಿದರೂ ನಡೆಯಲು ಆಗುತ್ತಿರಲಿಲ್ಲ. ಆಗ ಆತನ ತಾಯಿ ಮಂಗಳಾದೇವಿಯಲ್ಲಿ ಪ್ರಾರ್ಥಿಸಿ, ಮಗ ನಡೆಯುವಂತಾದರೆ ಮುಂದಿನ ವರ್ಷ ಹುಲಿ ವೇಷ ಹಾಕಿಸುತ್ತೇನೆ ಎಂದು ಹರಕೆ ಹೇಳಿದ್ದಳಂತೆ. ಅದು ಈಡೇರಿದ್ದರಿಂದ ಹುಲಿ ವೇಷ ಹಾಕಿಸಿದ್ದಾಳೆ (ಈ ನಂಬಿಕೆ ಈಗಲೂ ಇದ್ದು ಹರಕೆ ಹುಲಿ ಸೇವೆಯೇ ಸಾಕಷ್ಟಿರುತ್ತದೆ).

2. ಮಂಗಳಾದೇವಿ ಭಾಗದಲ್ಲಿ ಹಿಂದೆ ಹುಲಿಗಳ ಕಾಟ ಜೋರಾಗಿತ್ತು. ಆಗ ಊರಿನ ಜನರು ಸೇರಿ ಹುಲಿ ದಾಳಿ ನಿಂತರೆ ಹರಕೆ ರೂಪದಲ್ಲಿ ಹುಲಿ ವೇಷ ಹಾಕುತ್ತೇವೆ ಎಂದು ಹೇಳಿಕೊಂಡರು. ಹುಲಿ ದಾಳಿ ನಿಂತಿತು, ಹುಲಿ ವೇಷ ಆರಂಭಗೊಂಡಿತು.

3.ದೇವಿಯ ವಾಹನ ಹುಲಿ. ಈ ಕಾರಣಕ್ಕಾಗಿ ದೇವಿಯ ಪ್ರೀತ್ಯರ್ಥ ಹುಲಿಗಳ ಕುಣಿತದ ಕಲ್ಪನೆ ಹುಟ್ಟಿಕೊಂಡಿದೆ.

ಕುಡ್ಲದಲ್ಲಿ ‘ಪಿಲಿ ನಲಿಕೆ’ದ ‘ಪರ್ಬ’
ಕಳೆದ ಕೆಲವು ವರ್ಷಗಳಲ್ಲಿ ‘ಪಿಲಿ ವೇಷ’ದ ಅಬ್ಬರ ಇನ್ನೂ ಜೋರಾಗಿದೆ. ಕೇವಲ ಸಾಂಸ್ಕೃತಿಕ, ಧಾರ್ಮಿಕ ಆಚರಣೆಯಾಗಿ ಮಾತ್ರವಲ್ಲದೆ ಸ್ಪರ್ಧೆಯಾಗಿಯೂ ಗಮನ ಸೆಳೆದಿದೆ. ಮಂಗಳೂರಿನ ಪಿಲಿನಲಿಕೆ ಪ್ರತಿಷ್ಠಾನ ವತಿಯಿಂದ 9ನೇ ವರ್ಷದ ‘ಪಿಲಿ ನಲಿಕೆ’ ಅ. 12ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ 3ನೇ ವರ್ಷದ ‘ಪಿಲಿ ಪರ್ಬ’ ಅ. 11ರಂದು ಕೇಂದ್ರ ಮೈದಾನದಲ್ಲಿ ನಡೆಯಲಿದೆ. ವಿಜಯ ಸಾಮ್ರಾಟ್‌ ಪುತ್ತೂರು ಆಶ್ರಯದಲ್ಲಿ ‘ಪಿಲಿ ಗೊಬ್ಬು’ ಪುತ್ತೂರು ದೇವಳದಲ್ಲಿ ನಡೆಯಲಿದೆ.

ಪಿಲಿ ನಲಿಕೆಯಲ್ಲಿ ಗೆದ್ದ ತಂಡಕ್ಕೆ ಬಹ್ರೈನ್‌ನಲ್ಲಿ ಡಿ. 16ರಂದು ನಡೆಯಲಿರುವ ರಾಷ್ಟ್ರೀಯ ಉತ್ಸವದಲ್ಲಿ ಭಾಗವಹಿಸುವ ಅಪೂರ್ವ ಅವಕಾಶವಿದೆ. ಪಿಲಿ ನಲಿಕೆ ಸ್ಪರ್ಧೆಗೆ ಆಯ್ಕೆಯಾದ ಪ್ರತೀ ತಂಡದಲ್ಲಿಯೂ ಓರ್ವ ಬಡ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ ವಿದ್ಯಾನಿಧಿ ನೀಡುವ ಯೋಜನೆಯಿದೆ.

-ದಿನೇಶ್‌ ಇರಾ

ಟಾಪ್ ನ್ಯೂಸ್

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

10

Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ಷರತ್ತುಬದ್ಧ ಜಾಮೀನು

8-bantwala-1

Bantwala: ದ್ವಿಚಕ್ರಗಳೆರಡರ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Indian 3: ʼಇಂಡಿಯನ್‌ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?

Indian 3: ʼಇಂಡಿಯನ್‌ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?

Delhi:‌5,600 ಕೋಟಿ ರೂಪಾಯಿ ಡ್ರಗ್‌ ಸ್ಮಗ್ಲಿಂಗ್ ಕಿಂಗ್‌ ಪಿನ್‌ ಕಾಂಗ್ರೆಸ್‌ ಮುಖಂಡ? BJP

Delhi:‌5,600 ಕೋಟಿ ರೂಪಾಯಿ ಡ್ರಗ್‌ ಸ್ಮಗ್ಲಿಂಗ್ ಕಿಂಗ್‌ ಪಿನ್‌ ಕಾಂಗ್ರೆಸ್‌ ಮುಖಂಡ? BJP

Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್‌ ಆಕ್ರೋಶ

Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್‌ ಆಕ್ರೋಶ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Ullal: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸಹಾಯಧನ

3

Mangaluru: ಕೆಎಸ್‌ಆರ್‌ಟಿಸಿಯಿಂದ ದಸರಾ ಪ್ರವಾಸ ಪ್ಯಾಕೇಜ್‌

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

ಕರಾವಳಿಯಲ್ಲಿ ಇಂದಿನಿಂದ ನವರಾತ್ರಿ ಸಂಭ್ರಮ

Navaratri: ಕರಾವಳಿಯಲ್ಲಿ ಇಂದಿನಿಂದ ನವರಾತ್ರಿ ಸಂಭ್ರಮ

Rain: ಕರಾವಳಿಯಲ್ಲಿ ವಾಡಿಕೆಗಿಂತ ಹೆಚ್ಚು ಸುರಿದ ಮುಂಗಾರು ಮಳೆ; ಹಿಂಗಾರಿನ ಮೇಲೆ ನಿರೀಕ್ಷೆ

Rain: ಕರಾವಳಿಯಲ್ಲಿ ವಾಡಿಕೆಗಿಂತ ಹೆಚ್ಚು ಸುರಿದ ಮುಂಗಾರು ಮಳೆ; ಹಿಂಗಾರಿನ ಮೇಲೆ ನಿರೀಕ್ಷೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

9-bidar

Bidar ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನಾ ರ್‍ಯಾಲಿ

10

Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ಷರತ್ತುಬದ್ಧ ಜಾಮೀನು

4

Ullal: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸಹಾಯಧನ

3

Mangaluru: ಕೆಎಸ್‌ಆರ್‌ಟಿಸಿಯಿಂದ ದಸರಾ ಪ್ರವಾಸ ಪ್ಯಾಕೇಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.