![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jan 20, 2023, 10:04 PM IST
ಮಂಗಳೂರು : ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಇದಕ್ಕೆ ವೈದ್ಯರ ನಿರ್ಲಕ್ಷ್ಯ ಕಾರಣವಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
2022ರ ಜು.10ರಂದು ಕೇರಳ ಕಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟರ್ ಮತ್ತು ಪಿಕ್ ಅಪ್ ವಾಹನ ನಡುವಿನ ಅಪಘಾತದಲ್ಲಿ ಸಬೀನ್ ಗಾಯಗೊಂಡಿದ್ದರು. ಅವರನ್ನು ಪ್ರಥಮ ಚಿಕಿತ್ಸೆಗೆ ಕಣ್ಣೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಂತರ ಹೆಚ್ಚಿನ ಚಿಕಿತ್ಸೆಗೆ ಅಲ್ಲಿನ ಖಾಸಗಿ ಆಸ್ಪತ್ರೆಗೆ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಚಿಕಿತ್ಸೆ ಫಲಕಾರಿಯಾಗದೆ ಜು. 20ರಂದು ಮೃತಪಟ್ಟಿದ್ದರು. ಅವರ ಶವ ಪರೀಕ್ಷೆ ನಡೆಸಿದ ವೈದ್ಯರು ಸಬೀನ್ ಅವರ ಸಾವಿಗೆ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಹೇಳಿರುವುದಾಗಿ ಗುರುವಾರ ಮಂಗಳೂರು ಪೂರ್ವ ಠಾಣೆಗೆ ದೂರು ನೀಡಲಾಗಿದೆ.
ಇದನ್ನೂ ಓದಿ: ರಾಜಕೀಯ ಟಾಕ್ ವಾರ್ ಗುಣಮಟ್ಟದ್ದಾಗಿರಬೇಕು: ಅಮರೇಗೌಡ ಪಾಟೀಲ ಬಯ್ಯಾಪೂರ
You seem to have an Ad Blocker on.
To continue reading, please turn it off or whitelist Udayavani.