![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 17, 2023, 6:53 AM IST
ಮಂಗಳೂರು: ಬೋಳಾರ ಬತ್ತೇರಿ ಗಾರ್ಡನ್ನ ಫೆಲಿಕ್ಸ್ ಕಂಪೌಂಡ್ನಲ್ಲಿ ಬುಧವಾರ ತಡರಾತ್ರಿ ಮಗನೇ ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದು ದೂಡಿ ಹಾಕಿ ತುಳಿದ ತೊಡೆಯ ಮೂಳೆ ಮುರಿಯುವಂತೆ ಮಾಡಿದ್ದಾನೆ.
ಶಾಂತಾ ರೈ ಗಾಯಾಳು. ಆರೋಪಿ ಪುತ್ರ ರೋಹಿತ್ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಂತಾ ರೈ ಅವರು ಮೈದುನ ನವೀನ್ ರೈ ಮತ್ತು ಅತ್ತೆ ಶಾಂಭವಿ ಶೆಟ್ಟಿ ಅವರು ಫೆಲಿಕ್ಸ್ ಕಂಪೌಂಡ್ನಲ್ಲಿ ವಾಸವಿದ್ದಾರೆ. ರಾತ್ರಿ ಸುಮಾರು 1.30ರ ವೇಳೆಗೆ ಆರೋಪಿ ಪುತ್ರ ರೋಹಿತ್ ಕಬ್ಬಿಣದ ಪಂಚ್ ತರಹದ ವಸ್ತುವನ್ನು ಹಿಡಿದು ತಿರುಗಿಸುತ್ತಾ ಮನೆಯ ಒಳಗೆ ಬಂದು ಶಾಂಭವಿ ಶೆಟ್ಟಿಯವರ ಕುತ್ತಿಗೆ ಹಿಡಿಯಲು ಮುಂದಾಗಿದ್ದಾನೆ. ಆಗ ನವೀನ್ ಆತನನ್ನು ತಡೆದಿದ್ದಾರೆ. ಆಗ ಅವರಿಗೂ ಕೊಲೆ ಬೆದರಿಕೆಯೊಡ್ಡಿ, ಆತನ ಕೈಯಲ್ಲಿದ್ದ ಕಬ್ಬಿಣದ ವಸ್ತುವಿನಿಂದ ಎದೆಗೆ ಗುದ್ದಿ ಎಳೆದಾಡಿ ದೂಡಿ ಹಾಕಿದ್ದಾನೆ. ತಾಯಿ ಶಾಂತಾ ಅವರು ತಡೆಯಲು ಬಂದಾಗ ಅವರಿಗೆ, ಅವಾಚ್ಯ ಶಬ್ದಗಳಿಂದ ಬೈಯ್ದು ದೂಡಿ ಹಾಕಿದ್ದಾನೆ. ನೆಲಕ್ಕೆ ಬಿದ್ದ ಆಕೆಯ ಬಲಕಾಲಿನ ತೊಡೆಗೆ ಕಾಲಿನಿಂದ ತುಳಿದಿದ್ದಾನೆ. ಪರಿಣಾಮ ಮೂಳೆ ಮುರಿತವಾಗಿದ್ದು, ಬಳಿಕ ಜೀವ ಬೆದರಿಕೆ ಹಾಕಿ ಅಲ್ಲಿಂದ ಹೊರಟು ಹೋಗಿದ್ದಾನೆ. ಶಾಂತಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರೋಹಿತನ ನಡತೆ ಸರಿ ಇಲ್ಲದೇ ಇದ್ದುದರಿಂದ ಹಲವು ಬಾರಿ ಸರಿಯಾಗಿ ಕೆಲಸಕ್ಕೆ ಹೋಗಿ ಹಣ ಸಂಪಾದಿಸುವಂತೆ ಬುದ್ದಿವಾದ ಹೇಳಿದ್ದಕ್ಕೆ ಕೋಪಗೊಂಡು ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿದ್ದಾನೆ ಎಂದು ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.