Mangaluru: ಕೆಎಸ್ಆರ್ಟಿಸಿಯಿಂದ ದಸರಾ ಪ್ರವಾಸ ಪ್ಯಾಕೇಜ್
ಮಂಗಳೂರು ಪರಿಸರ, ಮಡಿಕೇರಿ, ಕೊಲ್ಲೂರು, ಮುರ್ಡೇಶ್ವರಕ್ಕೂ ಯಾತ್ರೆ ಅವಕಾಶ
Team Udayavani, Oct 3, 2024, 3:26 PM IST
ಮಂಗಳೂರು: ಕೆಎಸ್ಆರ್ಟಿಸಿ ಮಂಗಳೂರು ವಿಭಾಗವು ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅ. 3ರಿಂದ 12ರ ವರೆಗೆ ಹಮ್ಮಿಕೊಳ್ಳಲಿದೆ.
ದಸರಾ ನವದುರ್ಗ ದರ್ಶನ ಪ್ಯಾಕೇಜ್ ಮಂಗಳೂರು ಬಸ್ ನಿಲ್ದಾಣದಿಂದ ಶ್ರೀ ಮಂಗಳಾದೇವಿ ದೇವಸ್ಥಾನ-ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ-ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ – ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಹಾಗೂ ಬೀಚ್ – ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ- ಶ್ರೀ ಉರ್ವ ಮಾರಿಯಮ್ಮ ದೇವಸ್ಥಾನ (ಸಂಜೆ ಉಪಹಾರ)- ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ, ನವದುರ್ಗಾ ದರ್ಶನ – ಮಂಗಳೂರು ಬಸ್ ನಿಲ್ದಾಣ. ವಯಸ್ಕರಿಗೆ 400 ರೂ., ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) 300 ರೂ. (ಬೆಳಗ್ಗೆ 8 ಗಂಟೆಗೆ ಹೊರಟು ರಾತ್ರಿ 8.30ಕ್ಕೆ ಮಂಗಳೂರು ಬಸ್ ನಿಲ್ದಾಣ)
ಮಡಿಕೇರಿ ಪ್ಯಾಕೇಜ್
ಮಂಗಳೂರು- ಮಡಿಕೇರಿ-ರಾ ಜಾಸೀಟ್- ಅಬ್ಬಿಫಾಲ್ಸ್ -ನಿಸರ್ಗ ಧಾಮ- ಗೋಲ್ಡನ್ ಟೆಂಪಲ್-ಮಂಗಳೂರು ಬಸ್ ನಿಲ್ದಾಣ. ವಯಸ್ಕರಿಗೆ 500 ರೂ. ಮಕ್ಕಳಿಗೆ (6ವರ್ಷದಿಂದ 12 ವರ್ಷದವರಿಗೆ) 400 ರೂ. ಬೆಳಗ್ಗೆ 7 ಗಂಟೆಗೆ ಹೊರಟು ರಾತ್ರಿ 9ಕ್ಕೆ ಮಂಗಳೂರು ಬಸ್ ನಿಲ್ದಾಣ.
ಮಂಗಳೂರು-ಕೊಲ್ಲೂರು ಮಂಗಳೂರು ಬಸ್ ನಿಲ್ದಾಣ -ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ-ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ- ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಮಂಗಳೂರು ಬಸ್ ನಿಲ್ದಾಣ. ವಯಸ್ಕರಿಗೆ 500, ಮಕ್ಕಳಿಗೆ 400 ರೂ. ಬೆಳಗ್ಗೆ 8 ಗಂಟೆಗೆ ಹೊರಟು
ರಾತ್ರಿ 7ಕ್ಕೆ ಮಂಗಳೂರು ಬಸ್ ನಿಲ್ದಾಣ.
ಮಂಗಳೂರು-ಮುರ್ಡೇಶ್ವರ ಮಂಗಳೂರು ಬಸ್ ನಿಲ್ದಾಣ – ಮುರ್ಡೇಶ್ವರ ದೇವಸ್ಥಾನ – ಚಂಡಿಕಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕುಂಭಾಶಿ – ಆನೆಗುಡ್ಡೆ ಗಣಪತಿ ದೇವಸ್ಥಾನ ಕುಂಭಾಶಿ – ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ – ಮಂಗಳೂರು ಬಸ್ ನಿಲ್ದಾಣ. ವಯಸ್ಕರಿಗೆ 550, ಮಕ್ಕಳಿಗೆ 450 ರೂ. ಬೆಳಗ್ಗೆ 7 ಗಂಟೆಗೆ ಹೊರಟು ರಾತ್ರಿ 7ಕ್ಕೆ ಮಂಗಳೂರು ಬಸ್ ನಿಲ್ದಾಣ.
ಮಾಹಿತಿಗೆ 7760990720 ಸಂಪರ್ಕಿಸಬಹುದು. ಈ ಪ್ಯಾಕೇಜ್ಗಳಿಗೆ www.ksrtc.in ಮೂಲಕ ಮುಂಗಡ ಆಸನ ಕಾಯ್ದಿರಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Border 2: ಸನ್ನಿ ಡಿಯೋಲ್ ʼಬಾರ್ಡರ್-2ʼಗೆ ʼಫೌಜಿʼಯಾಗಿ ಬಂದ ಸುನಿಲ್ ಶೆಟ್ಟಿ ಪುತ್ರ
Panaji: ಕಾರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ; ಆರೋಪಿ ಬಂಧನ
Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು
Savarkar ಗೋ ಹ*ತ್ಯೆಯ ಪರವಾಗಿದ್ದರು,ಜಿನ್ನಾ ಹಂದಿ ಮಾಂಸ ಸೇವಿಸಿದ್ದರು: ದಿನೇಶ್ ಗುಂಡೂರಾವ್
ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್ ಠಾಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.