Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು
Team Udayavani, Oct 26, 2024, 1:39 AM IST
ಮಂಗಳೂರು: ನಗರದ ಲೇಡಿಗೋಷನ್ ಆಸ್ಪತ್ರೆಯ ಹಿಂಬದಿ ಇರುವ ಗುಜರಾತಿ ಸಮುದಾಯದ ಶ್ವೇತಾಂಬರ ಮೂರ್ತಿ ಪೂಜಕ್ ಜೈನ ಮಂದಿರದ ಮೂರ್ತಿಗಳಿಗೆ ಹಾಕಿದ್ದ ಚಿನ್ನದ ಸರಗಳನ್ನು ಕಳವು ಮಾಡಿರುವ ಘಟನೆ ಗುರುವಾರ ಮುಂಜಾವ ಸಂಭವಿಸಿದೆ.
ಮುಂಜಾವ 4.30ರ ಸುಮಾರಿಗೆ ಮನೆಮಂದಿ ಮಲಗಿದ್ದಾಗ ಜೈನಮಂ ದಿರಕ್ಕೆ ಯಾರೋ ಕಳ್ಳರು ಬಂದಿರುವ ಬಗ್ಗೆ ಅರ್ಚಕರ ಪತ್ನಿ ತಿಳಿಸಿದಂತೆ ಅರ್ಚಕರು ಮತ್ತು ಅವರ ಪುತ್ರ ಮನೆಯಿಂದ ಹೊರಬಂದಾಗ ಕಳ್ಳರು ರಸ್ತೆಬದಿ ಹಣದಡಬ್ಬವನ್ನು ಒಡೆಯುವ ಸದ್ದು ಕೇಳಿ ಸಿತು. ಅಲ್ಲಿಗೆ ಹೋಗಿ ನೋಡಿದಾಗ ಕಳ್ಳರುಡಬ್ಬವನ್ನು ಅಲ್ಲಿಯೇ ಬಿಟ್ಟು ಓಡಿ ಪರಾರಿಯಾಗಿದ್ದಾರೆ.
ಬಳಿಕ ಅರ್ಚಕರು ಜೈನಮಂದಿರಕ್ಕೆ ಬಂದು ನೋಡಿದಾಗ ಕಳ್ಳರು ಜೈನಮಂದಿರದ ಬಾಗಿಲಿನ ಚಿಲಕವನ್ನು ಮುರಿದು ಮಂದಿರದೊಳ ಗಿದ್ದ 5 ಮೂರ್ತಿಗಳಿಗೆ ಹಾಕಿದ್ದ 55 ಗ್ರಾಂ ತೂಕದ ಒಟ್ಟು ಅಂದಾಜು 2.50 ಲ.ರೂ. ಮೌಲ್ಯದ 5 ಚಿನ್ನದ ಸರಗಳನ್ನು ಕಳವು ಮಾಡಿಕೊಂಡು ಹೋಗಿರುವುದು ಗಮನಕ್ಕೆ ಬಂದಿದೆ. ಮಂಗಳೂರು ನಗರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು
Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Mangaluru: ಸೈಟ್ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್ ವಿರುದ್ಧ ಮಹಿಳೆ ದೂರು
Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ
ನನ್ನ ಜತೆ ಬರದಿದ್ದರೆ 24 ತುಂಡು ಮಾಡುವೆ:ಬೆದರಿಕೆ ಪ್ರಕರಣ-ಆತಂಕದಿಂದ ಯುವತಿ ಆತ್ಮಹತ್ಯೆ ಯತ್ನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.