Mangaluru; ಗುದನಾಳದಲ್ಲಿ 46 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳ ಸಾಗಾಣಿಕೆ!
Team Udayavani, Mar 3, 2024, 4:10 PM IST
ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು 46 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮ ವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಮಾರ್ಚ್ 3 , ಭಾನುವಾರ ಬಂಧಿಸಿದ್ದಾರೆ.
ದುಬೈನಿಂದ ಆಗಮಿಸಿದ ಕಾಸರಗೋಡು ಮೂಲದ ಪ್ರಯಾಣಿಕ ತನ್ನ ಗುದನಾಳದಲ್ಲಿ ಅಂಡಾಕಾರದ ಮೂರು ಗುಳಿಗೆಗಳಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ. 24 ಕ್ಯಾರೆಟ್ ನ 729 ಗ್ರಾಂ ಚಿನ್ನ ಪತ್ತೆಯಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 45ಲಕ್ಷದ 92 ಸಾವಿರದ 700 ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ರೀತಿಯ ಹಲವು ಪ್ರಕರಣಗಳು ಈ ಹಿಂದೆಯೂ ವರದಿಯಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ಸೂಕ್ಷ್ಮವಾಗಿ ಪರೀಕ್ಷೆ ನಡೆಸಿದ ಬಳಿಕವೇ ಪ್ರಯಾಣಿಕರನ್ನು ಹೊರ ಬಿಡುತ್ತಿದ್ದಾರೆ. ಚಿನ್ನ ಕಳ್ಳ ಸಾಗಾಣಿಕೆಗೆ ಹಲವು ವಾಮ ಮಾರ್ಗಗಳ ನ್ನು ಕಂಡು ಹಿಡಿದರೂ ಅಧಿಕಾರಿಗಳು ಹಲವು ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.