Mangaluru: ಖೀರ್ ಮಿಕ್ಸ್ ಪೌಡರ್ ಪ್ಯಾಕೆಟ್ಗಳಲ್ಲಿ 20 ಲಕ್ಷ ರೂ. ಮೌಲ್ಯದ ಚಿನ್ನ!
ದುಬೈನಿಂದ ಕಳ್ಳಸಾಗಣೆ ಮಾಡಲು ಹೊಸ ತಂತ್ರ ; ಕಸ್ಟಮ್ಸ್ ಅಧಿಕಾರಿಗಳಿಂದ ವಿಫಲ
Team Udayavani, Oct 8, 2023, 7:27 PM IST
ಮಂಗಳೂರು: ಚಿನ್ನ ಕಳ್ಳಸಾಗಣೆದಾರರು ನಾನಾ ತಂತ್ರಗಳನ್ನು ಹುಡುಕುತ್ತಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ಖೀರ್ ಮಿಕ್ಸ್ ಪೌಡರ್ ಪ್ಯಾಕೆಟ್ಗಳಲ್ಲಿ ಚಿನ್ನವನ್ನು ಸಾಗಿಸಲು ಯತ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಿಫಲಗೊಳಿಸಿದ್ದಾರೆ.
ಮಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಚಿನ್ನವನ್ನು ದೇಶಕ್ಕೆ ಸಾಗಿಸಲು ಯತ್ನಿಸುತ್ತಿದ್ದ ಪ್ರಯಾಣಿಕನನ್ನು ತಡೆದು ತೀವ್ರ ತಪಾಸಣೆ ನಡೆಸಿ ಬ್ಯಾಗೇಜ್ನಲ್ಲಿ ಅಡಗಿಸಿಟ್ಟಿದ್ದ ಹಳದಿ ಲೋಹವನ್ನು ವಶಪಡಿಸಿಕೊಂಡಿದ್ದಾರೆ.
ಪ್ರಯಾಣಿಕ ಅ 6 ರಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಫ್ಲೈಟ್ ನಲ್ಲಿ ದುಬೈನಿಂದ ಬಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 374 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು 5 ಪ್ಯಾಕೆಟ್ ‘ಕಿಚನ್ ಟ್ರೆಷರ್’ ಖೀರ್ ಮಿಶ್ರಣದಲ್ಲಿ ಪ್ಯಾಕ್ ಮಾಡಿದ ಬಿಳಿ ಬಣ್ಣದ ಪುಡಿಯಿಂದ ಹೊರತೆಗೆಯಲಾಗಿದೆ. ವಶಪಡಿಸಿಕೊಂಡ ಚಿನ್ನದ ಒಟ್ಟು ಮೌಲ್ಯ 20 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
Salaar 2: ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ -2ʼ ಶೂಟಿಂಗ್ ಆರಂಭ?
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.