Mangaluru: ಖಾಲಿಯ ರಫೀಕ್ ಕೊಲೆ ಪ್ರಕರಣ; ನಾಲ್ವರು ಆರೋಪಿಗಳ ಖುಲಾಸೆ
Team Udayavani, Sep 26, 2024, 7:30 AM IST
ಮಂಗಳೂರು: ಉಳ್ಳಾಲದ ಕೋಟೆಕಾರ್ನಲ್ಲಿ 2017ರಲ್ಲಿ ನಡೆದಿದ್ದ ರೌಡಿ ಖಾಲಿಯ ರಫೀಕ್ನ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
ನೂರಲಿ, ಜಿಯ ಆಲಿಯಾಸ್ ಇಸುಬು ಶಿಯಾದ್, ರಶೀದ್ ಮತ್ತು ಮಜೀಬ್ ಆಲಿಯಾಸ್ ಕಲ್ಲಟ್ರ ನಜೀಬ್ ಕೆ.ಎ. ದೋಷಮುಕ್ತಗೊಂಡವರು.
2017ರ ಫೆ. 2ರಂದು ಖಾಲಿಯಾ ರಫೀಕ್ ಮತ್ತು ಆತನ ಸ್ನೇಹಿತರು ಸಂಚರಿಸುತ್ತಿದ್ದ ಕಾರಿಗೆ ಕೋಟೆಕಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿಯನ್ನು ಢಿಕ್ಕಿ ಹೊಡೆಸಲಾಗಿತ್ತು. ಕಾರಿನಿಂದ ಇಳಿದು ಪೆಟ್ರೋಲ್ ಬಂಕ್ ಕಡೆಗೆ ಓಡುತ್ತಿದ್ದ ಖಾಲಿಯ ರಫೀಕ್ನನ್ನು ಬೆನ್ನಟ್ಟಿಕೊಂಡು ಹೋಗಿದ್ದ ಆರೋಪಿಗಳು ಪಿಸ್ತೂಲ್ನಿಂದ ಗುಂಡು ಹಾರಿಸಿ ಬಳಿಕ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು ಎಂದು ಆರೋಪಿಸಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಒಟ್ಟು 9 ಮಂದಿ ಆರೋಪಿಗಳನ್ನು ಗುರುತಿಸಲಾಗಿತ್ತು. ಈ ಪೈಕಿ ನಾಲ್ವರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಓರ್ವ ಆರೋಪಿ ಮೃತಪಟ್ಟಿದ್ದಾನೆ. ಇನ್ನೋರ್ವ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದಾನೆ. ಉಳಿದ ಆರೋಪಿಗಳ ಬಂಧನವಾಗಿಲ್ಲ. ಆರೋಪಿಗಳ ಪರ ಹಿರಿಯ ನ್ಯಾಯವಾದಿ ವೈ. ವಿಕ್ರಂ ಹೆಗ್ಡೆ, ರಾಜೇಶ್ ಕೆ.ಜಿ. ಮತ್ತು ಅಬ್ದುಲ್ ಅಜೀಜ್ ಬಾಯರ್ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ
Karnataka; ರಾಜ್ಯ ಟೆನಿಸ್ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ
Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್, ಎಂಆರ್ಐ ಸೇವೆ ವ್ಯತ್ಯಯ
Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್ ಇಂದಿನಿಂದ
Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.