Mangaluru: ಕಿನ್ನಿಗೋಳಿಗೆ ಬೇಕು ಹೊರ ಠಾಣೆ

ಹತ್ತಾರು ಬ್ಯಾಂಕ್‌, ಶಿಕ್ಷಣ ಸಂಸ್ಥೆಗಳಿರುವ ಪೇಟೆಯಲ್ಲಿ ಸುರಕ್ಷೆಗೆ ಇರಲಿ ಆದ್ಯತೆ; ಹೆಚ್ಚುತ್ತಿರುವ ಅಪಘಾತ, ವಾಹನ ದಟ್ಟಣೆ ನಿರ್ವಹಣೆಗೆ ಬೇಕು ಖಾಯಂ ವ್ಯವಸ್ಥೆ

Team Udayavani, Sep 24, 2024, 2:31 PM IST

Mangaluru: ಕಿನ್ನಿಗೋಳಿಗೆ ಬೇಕು ಹೊರ ಠಾಣೆ

ಕಿನ್ನಿಗೋಳಿ: ಅತ್ಯಂತ ವೇಗವಾಗಿ ಬೆಳೆಯುತ್ತಿರುವ, ವಾಹನ ದಟ್ಟಣೆ, ಜನವಸತಿ ಹೆಚ್ಚುತ್ತಿರುವ ಮೂಲ್ಕಿ ತಾಲೂಕಿನ ಪ್ರಮುಖ ಪಟ್ಟಣವಾದ ಕಿನ್ನಿಗೋಳಿಯಲ್ಲಿ  ಸಾರ್ವಜನಿಕರ ಸುರಕ್ಷೆ ಮತ್ತು ನಿರ್ವಹಣೆ ದೃಷ್ಟಿಯಿಂದ ಕನಿಷ್ಠ ಪೊಲೀಸ್‌ ಹೊರಠಾಣೆಯಾದರೂ ಬೇಕು ಎಂಬ ಬೇಡಿಕೆ ಜೋರಾಗಿದೆ. ಈಗ ಏನೇ ನಡೆದರೂ 10 ಕಿ.ಮೀ. ದೂರದ ಮೂಲ್ಕಿಯಿಂದಲೇ ಪೊಲೀಸರು ಬರಬೇಕು. ವಾಹನ ದಟ್ಟಣೆ ನಿಯಂತ್ರಣ, ಅಪರಾಧಗಳ ಮೇಲೆ ನಿಗಾ ಇಡುವುದಕ್ಕಾಗಿ ಪ್ರತ್ಯೇಕ ವ್ಯವಸ್ಥೆಯೊಂದು ಬೇಕಾಗಿದೆ.

ಕಿನ್ನಿಗೋಳಿಯಲ್ಲಿ ಹೆಚ್ಚಿನ ಎಲ್ಲ ರಾಷ್ಟ್ರೀಕೃತ ಬ್ಯಾಂಕ್‌ಗಳ ಖಾತೆಗಳು, ಸಹಕಾರಿ ಬ್ಯಾಂಕ್‌ಗಳು ಇವೆ. ಕೋಟ್ಯಂತರ ರೂ. ವ್ಯವಹಾರ ಈ ಪಟ್ಟಣದಲ್ಲಿ ನಡೆಯುತ್ತದೆ. ಪದವಿ ಕಾಲೇಜು ಸೇರಿದಂತೆ 6 ಶಿಕ್ಷಣ ಸಂಸ್ಥೆಗಳುವೆ. ಹತ್ತಿರದಲ್ಲಿಯೇ ಪ್ರಸಿದ್ಧ ಧಾರ್ಮಿಕ ಕೇಂದ್ರ ಕಟೀಲು ದೇಗುಲವಿದೆ. ಕಿನ್ನಿಗೋಳಿಯ ಪರಿಸರದಲ್ಲಿ ಹಲವಾರು ಅಪಾರ್ಟ್‌ಮೆಂಟ್‌ಗಳು, ವ್ಯವಸ್ಥಿತ ಬಡಾವಣೆಗಳು ಇವೆ. ಕಿನ್ನಿಗೋಳಿ ಬಸ್‌ ನಿಲ್ದಾಣದಲ್ಲಿ ದಿನನಿತ್ಯ ನೂರಾರೂ ಬಸ್‌ಗಳ ಓಡಾಟ ಇದೆ.  ಎಲ್ಲ ರೀತಿಯ ಸಾವಿರಾರು ವಾಹನಗಳು, ಅವುಗಳಿಗೆ ಸಂಬಂಧಿಸಿದ ಶೋರೂಮ್‌ಗಳು ಇಲ್ಲಿವೆ.

ಕಿನ್ನಿಗೋಳಿ ಪರಿಸರದಲ್ಲಿ ಹಿಂದೆ ಚಿನ್ನದ ಅಂಗಡಿ ಕಳವು, ಬ್ಯಾಂಕ್‌ ದರೋಡೆ ಪ್ರಕರಣಗಳು ಸಂಭವಿಸಿವೆ. ಇಲ್ಲಿ ಸಾಕಷ್ಟು ವಾಹನಗಳ ಓಡಾಟವಿದೆ. ಸಣ್ಣ ಪುಟ್ಟ ಅಪಘಾತ ಜಗಳ, ಕಳವು, ಅಪರಾಧ ಪ್ರಕರಣಗಳು ನಡೆಯುತ್ತಲೇ ಇರುತ್ತದೆ. ಆದರೆ, ಇವುಗಳ ಮೇಲೆ ನಿಗಾ ಇಡುವ ವ್ಯವಸ್ಥೆ ಇಲ್ಲಿಲ್ಲ. ಹೀಗಾಗಿ  ಹೊರ ಠಾಣೆಯ ಅಗತ್ಯತೆ ಬಗ್ಗೆ ಸಂಘ – ಸಂಸ್ಥೆಗಳು ಬಹು ಹಿಂದಿನಿಂದಲೇ ಮನವಿ ಮಾಡುತ್ತಾ ಬಂದಿವೆ. ಆದರೆ, ಯಾವುದೇ ಆಶಾದಾಯಕ ಬೆಳವಣಿಗೆಗಳು ನಡೆದಿಲ್ಲ.

ಸಿಸಿ ಕೆಮರಾ ವ್ಯವಸ್ಥೆಯು ಇಲ್ಲ
ಕಿನ್ನಿಗೋಳಿ ಬಸ್‌ನಿಲ್ದಾಣ ಜಂಕ್ಷನ್‌ನಲ್ಲಿ ಪೊಲೀಸ್‌ ಟ್ರಾಫಿಕ್‌ ಕಟ್ಟೆಗೆ ಟ್ರಾಫಿಕ್‌ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸಿಸಿ ಕೆಮರಾ ಆಳವಡಿಸಲಾಗಿತ್ತು. ಒಂದು ವರ್ಷದ ಬಳಿಕ ಅದು  ಸಿಡಿಲು ಬಡಿದು ಹಾಳಾಗಿದೆ. ಮತ್ತೆ ಅಳವಡಿಸಿಲ್ಲ. ಜಂಕ್ಷನ್‌ನಲ್ಲಿ ಎರಡು ತಿಂಗಳ ಹಿಂದೆ ಒಂದು ಅಪಘಾತ ಸಂಭವಿಸಿದಾಗ  ಪಕ್ಕದ ಬ್ಯಾಂಕ್‌ನ ಸಿಸಿ ಕೆಮರಾದ ಮೊರೆ ಹೋಗಬೇಕಾಯಿತು. ಮುಖ್ಯ ರಸ್ತೆಯ ಕಿನ್ನಿಗೋಳಿ ಜಂಕ್ಷನ್‌ನಲ್ಲಿ ಹೈಮಾಸ್ಟ್‌ ದೀಪದ ವ್ಯವಸ್ಥೆ ಬೇಕಾಗಿದೆ. ಚಿಕ್ಕ ಬೀದಿ ದೀಪ ಇದ್ದು ಇದು ಸಾಕಾಗುತ್ತಿಲ್ಲ. ಬಸ್‌ಗಾಗಿ ಕಾಯುವರು, ಇತರರು ಪರದಾಡಬೇಕಾದ ಪರಿಸ್ಥಿತಿ ಉಂಟಾಗಿದೆ.

ಹಿಂದಿನ ಚೌಕಿಯಲ್ಲೀಗ ಬ್ಯಾನರ್‌, ಬಂಟಿಂಗ್ಸ್‌!
ಈ ಹಿಂದೆ ಕಿನ್ನಿಗೋಳಿ ಬಸ್‌ ನಿಲ್ದಾಣದ ಕಟ್ಟಡದಲ್ಲಿ  ಒಂದು ಕೋಣೆ ಪೊಲೀಸ್‌ ಚೌಕಿಗಾಗಿ ಇತ್ತು. ಆದರೆ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣವಾದಾಗ ಅದು ಕಣ್ಮರೆಯಾಯಿತು.  ಕ್ರಮೇಣ ಮುಖ್ಯ ರಸ್ತೆಯಲ್ಲಿ ಪೊಲೀಸ್‌ ವ್ಯವಸ್ಥೆಗೆ ಕಬ್ಬಿಣದ ಗೂಡು ನಿರ್ಮಿಸಿ ಇಡಲಾಯಿತು. ಆದರೆ ಇಂದು ಅದು ಬ್ಯಾನರ್‌ ಬಂಟಿಂಗ್ಸ್‌ ಕಟ್ಟುವ ಜಾಗವಾಗಿದೆ!

ವಿ.ಎಸ್‌. ಆಚಾರ್ಯ ಅವರು ಗೃಹ ಸಚಿವರಾಗಿದ್ದು  ಕಿನ್ನಿಗೋಳಿಗೆ ಬಂದಿದ್ದಾಗ  ಪೊಲೀಸ್‌ ಹೊರಠಾಣೆಯ ಬಗ್ಗೆ ನಾಗರಿಕರು ಮನವಿ ಮಾಡಿದ್ದರು. ಕೂಡಲೇ ಮಂಜೂರು ಮಾಡುವ ಬಗ್ಗೆ ಭರವಸೆ ನೀಡಿದ್ದರು. ಆದರೆ ಪ್ರಕ್ರಿಯೆ ಮುಂದುವರಿದಿಲ್ಲ. ಅನಂತರ ಪೊಲೀಸ್‌ ಕಮಿಷನರೆಟ್‌ ಆದ ಬಳಿಕ ಆಗಬೇಕಿತ್ತು, ಆಗಲೂ ಆದು ನೇರವೆರಲೇ ಇಲ್ಲ.

-ರಘುನಾಥ ಕಾಮತ್‌ ಕೆಂಚನಕೆರೆ

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.