Mangaluru; ಧರ್ಮಕ್ಕೆ ಅವಹೇಳನ ಮಾಡಿದ ಶಿಕ್ಷಕಿಯ ಅಮಾನತಿಗೆ ಶಾಸಕರು, ಹಿಂದೂ ಮುಖಂಡರ ಪಟ್ಟು
Team Udayavani, Feb 12, 2024, 12:29 PM IST
ಮಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಪಾಠ ಮಾಡಿದ ಶಿಕ್ಷಕಿ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಶಾಸಕರು ಮತ್ತು ಹಿಂದೂ ಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.
ಜಿಲ್ಲಾ ಪಂಚಾಯತ್ ಕಚೇರಿ ಎದುರು ಜಮಾಯಿಸಿದ ಶಾಸಕರಾದ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ವಿದ್ಯಾರ್ಥಿಗಳ ಪೋಷಕರು, ಹಿಂದೂ ಕಾರ್ಯಕರ್ತರು, ಮುಖಂಡರು ಶಿಕ್ಷಿಕಿಯನ್ನು ವಜಾ ಮಾಡಬೇಕು, ಪ್ರಕರಣ ದಾಖಲಿಸಬೇಕೆಂದು ಡಿಡಿಪಿಐಗೆ ಒತ್ತಾಯಿಸಿದರು.
ರಾಮನ ಬಗ್ಗೆ ಮಾತನಾಡಲು ಇವರು ಯಾರು? ಇವರು ಪಾಠ ಮಾಡಲಿ ಸಾಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಶಾಲೆಗೆ ಅಧಿಕಾರಿಗಳ ತಂಡವನ್ನು ಕಳುಹಿಸಿದ್ದು, ಅವರು ನೀಡುವ ವರದಿ ಮೇಲೆ ಕ್ರಮ ಕೈಗೊಳ್ಳುತ್ತೇವೆ” ಎಂದು ಡಿಡಿಪಿಐ ಹೇಳಿದರು.
“ಮಕ್ಕಳು ಸುಳ್ಳು ಹೇಳುವುದಿಲ್ಲ. ಕೂಡಲೇ ಕ್ರಮ ಕೈಗೊಳ್ಳಿ” ಎಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದರು.
ಅವಹೇಳನಕಾರಿಯಾಗಿ ಪಾಠ ಮಾಡಿದ ಶಿಕ್ಷಕಿಯನ್ನು ಸ್ಥಳದಲ್ಲೇ ಅಮಾನತು ಆದೇಶ ಹೊರಡಿಸಿ ಎಂದು ಪಟ್ಟು ಹಿಡಿಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.