![Yadagiri CEO withdrew the order issued in the matter of blocking the promotion of teachers](https://www.udayavani.com/wp-content/uploads/2024/06/teachers-415x229.jpg)
Mangaluru ನಮಾಜ್ ಪ್ರಕರಣ: ಬಿ ರಿಪೋರ್ಟ್ ಸಲ್ಲಿಕೆ; ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ
ಇನ್ಸ್ಪೆಕ್ಟರ್ಗೆ ಕಡ್ಡಾಯ ರಜೆ
Team Udayavani, May 30, 2024, 11:37 PM IST
![1-qewqeweqw](https://www.udayavani.com/wp-content/uploads/2024/05/1-qewqeweqw-620x371.jpg)
ಮಂಗಳೂರು: ನಗರದ ರಸ್ತೆಯಲ್ಲಿ ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಅಲ್ಲಿ ಸಂಚಾರಕ್ಕೆ ಅಡೆತಡೆ ಮಾಡುವ ಯಾವುದೇ ಉದ್ದೇಶ ಇರಲಿಲ್ಲ ಎಂಬ ಕಾರಣಕ್ಕೆ ನ್ಯಾಯಾಲಯಕ್ಕೆ “ಬಿ’ ರಿಪೋರ್ಟ್ ಸಲ್ಲಿಸಲಾಗಿದೆ.
ಇದೇ ವೇಳೆ ಹಿರಿಯ ಅಧಿಕಾರಿ ಗಳಿಗೆ ಯಾವುದೇ ಮಾಹಿತಿಯನ್ನು ನೀಡದೆ ಸುಮೋಟೊ ಪ್ರಕರಣ ದಾಖಲಿಸಿದ ಕದ್ರಿ ಪೊಲೀಸ್ ನಿರೀಕ್ಷಕ ಸೋಮಶೇಖರ್ರವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿ ಎಸಿಪಿ ದರ್ಜೆಯ ಅಧಿಕಾರಿಯನ್ನು ವಿಚಾರಣೆಗೆ ನೇಮಕ ಮಾಡಲಾಗಿದೆ.
ಶರಣ್ ಮೇಲೆ ಪ್ರಕರಣ
ನಮಾಜ್ ವೀಡಿಯೋ ವೈರಲ್ ಆದ ಮೇಲೆ ಹೇಳಿಕೆ ನೀಡಿದ್ದ ವಿಶ್ವ ಹಿಂದೂ ಪರಿಷತ್ ವಿಭಾಗ ಸಹ ಸಂಚಾಲಕ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ ನೇರವಾಗಿ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ ನಿಲ್ಲಿಸಲಿದೆ ಎಂಬುದಾಗಿ ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂಬ ಬರವಣಿಗೆಯೊಂದಿಗೆ ಶರಣ್ ಪೋಸ್ಟ್ ಮಾಡಿದ್ದು ಈ ಮೂಲಕ ಜನರಲ್ಲಿ ದ್ವೇಷ ಭಾವನೆ ಉಂಟಾಗುವಂತೆ ಹಾಗೂ ಕಾನೂನನ್ನು ಕೈಗೆತ್ತಿಕೊಳ್ಳುವ ಬೆದರಿಕೆ ಹಾಕಿ ಸಮಾಜದಲ್ಲಿ ಭಯವನ್ನುಂಟು ಮಾಡುವ ರೀತಿಯಲ್ಲಿ ಪೋಸ್ಟನ್ನು ಮಾಡಿದ್ದಾರೆ. ಈ ಬಗ್ಗೆ ಮಂಗಳೂರು ನಗರದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ಸಾದ್ಯತೆ ಇರುವುದರಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Yadagiri CEO withdrew the order issued in the matter of blocking the promotion of teachers](https://www.udayavani.com/wp-content/uploads/2024/06/teachers-415x229.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.