Mangaluru;ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ
Team Udayavani, Oct 19, 2024, 12:20 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 30 ಹಾಸಿಗೆಗಿಂತ ಹೆಚ್ಚಿರುವ ಆಸ್ಪತ್ರೆಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 1974ರ ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, 1981ರ ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಮತ್ತು ಜೀವ ವೈದ್ಯಕೀಯ ತ್ಯಾಜ್ಯ ಕಾಯ್ದೆ 2016ರಡಿಯಲ್ಲಿ ಅ ಧಿಕಾರ ಪತ್ರ ಪಡೆಯುವುದು ಕಡ್ಡಾಯವಾಗಿದೆ.
30 ಹಾಸಿಗೆಗಿಂತ ಕಡಿಮೆ ಹಾಗೂ ಹಾಸಿಗೆ ರಹಿತ ಆಸ್ಪತ್ರೆಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜೀವ ವೈದ್ಯಕೀಯ ತ್ಯಾಜ್ಯ ಕಾಯ್ದೆ 2016 ರಡಿಯಲ್ಲಿ ಶ್ವೇತವರ್ಣದಡಿಯಲ್ಲಿ ಜೀವ ವೈದ್ಯಕೀಯ ತ್ಯಾಜ್ಯ ಅ ಧಿಕಾರ ಪತ್ರ ಪಡೆಯುವುದು ಕಡ್ಡಾಯವಾಗಿದೆ.
ಈ ಹಿನ್ನಲೆಯಲ್ಲಿ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ/ಅ ಧಿಕಾರ ಪತ್ರ ಪಡೆದು ನವೀಕರಣಗೊಳಿಸದೆ ಹಾಗೂ ಪಡೆಯದೆ ಕಾರ್ಯ ನಿರ್ವಹಿಸುತ್ತಿರುವವರಿಗೆ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ/ಅ ಧಿಕಾರ ಪತ್ರ ಪಡೆದು ಕಾರ್ಯನಿರ್ವಹಿಸುತ್ತಿರುವಂತೆ ಈ ಮೂಲಕ ಸೂಚಿಸಲಾಗಿದೆ. ತಪ್ಪಿದಲ್ಲಿ ಮಂಡಳಿಯು ಅನ್ವಯವಾಗುವ ಕಾನೂನಿನ ಪ್ರಕಾರ ಕ್ರಮ ಜರಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕಚೇರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೈಕಂಪಾಡಿ ಕೈಗಾರಿಕಾ ಪ್ರದೇಶ ಇಲ್ಲಿ ಸಂಪರ್ಕಿಸುವಂತೆ ಪರಿಸರ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು
Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್ಗಳಿಂದಲೇ ನೋಂದಣಿ
Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ
Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ
India Vs New Zealand Test: ಇನ್ನಿಂಗ್ಸ್ ಸೋಲು ತಪ್ಪಿಸಲು ಭಾರತ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.