Mangaluru; ಟ್ರಾಫಿಕ್ ದಟ್ಟಣೆಯಿಂದ ಕಂಗೆಟ್ಟ ಸ್ಪೀಕರ್: ತ್ವರಿತ ಕ್ರಮಕ್ಕೆ ಆದೇಶ
Team Udayavani, Jul 13, 2024, 8:21 PM IST
ಮಂಗಳೂರು : ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ನಂತೂರು ವೃತ್ತದಲ್ಲಿ ಸಂಚಾರ ದಟ್ಟಣೆಯಿಂದ ಕಂಗೆಟ್ಟ ಘಟನೆ ಶನಿವಾರ ನಡೆದಿದೆ.
ನಗರದ ಹೆದ್ದಾರಿಗಳಲ್ಲಿನ ಹೊಂಡಗುಂಡಿಗಳಿಂದ ವಿಧಾನಸಭಾಧ್ಯಕ್ಷರಿಗೆ ಕೆಟ್ಟ ಅನುಭವವಾಗಿದ್ದು, ನಂತೂರು, ಪಂಪ್ವೆಲ್ ಬಳಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಟ್ರಾಫಿಕ್ ನಲ್ಲಿ ಸಿಲುಕಿದ ಖಾದರ್ ಅವರಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಿಗದಿಯಾಗಿದ್ದ ಡೆಂಗ್ಯೂ ಕುರಿತ ಸಭೆಗೆ ಆಗಮಿಸುವಾಗ ಸಾಕಷ್ಟು ವಿಳಂಬವಾಯಿತು.
ತ್ವರಿತ ಪರಿಹಾರಕ್ಕೆ ಸೂಚನೆ
ನಗರದ ನಂತೂರು, ಪಂಪ್ ವೆಲ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಸ್ಪೀಕರ್ ಯು.ಟಿ. ಖಾದರ್ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಡೆಂಗ್ಯೂ ಕುರಿತ ಸಭೆಯ ಬಳಿಕ ಜಿಲ್ಲಾಧಿಕಾಯವರಿಗೆ, ನಂತೂರು ಮತ್ತು ಪಂಪ್ ವೆಲ್ ವೃತ್ತದಲ್ಲಿ ಹೆದ್ದಾರಿಯಲ್ಲಿ ಬಿದ್ದಿರುವ ಗುಂಡಿಗಳನ್ನು ಕೂಡಲೇ ಮುಚ್ಚಲು ಕ್ರಮ ವಹಿಸಲು ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಮಹಾನಗರಪಾಲಿಕೆ ಅಧಿಕಾರಿಗಳಿಗೆ ಈ ಬಗ್ಗೆ ತತ್ ಕ್ಷಣ ಕಾರ್ಯಪ್ರವೃತ್ತರಾಗಲು ನಿರ್ದೇಶಿಸಲು ಸ್ಪೀಕರ್ ಯು.ಟಿ ಖಾದರ್ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.