Mangaluru University ಪದವಿ ತರಗತಿಯ ವಿದ್ಯಾರ್ಥಿಗಳಿಗೆ ಆರಂಭದಲ್ಲೇ ಪಾಠ ಕೊರತೆ ಭೀತಿ!

ಮಂಗಳೂರು ವಿ.ವಿ.ಯ ಸರಕಾರಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ವಿಳಂಬ ; 600ರಷ್ಟು ಅತಿಥಿ ಉಪನ್ಯಾಸಕರ ನೇಮಕಾತಿ ಅಗತ್ಯ

Team Udayavani, Aug 8, 2024, 7:05 AM IST

Mangaluru University ಪದವಿ ತರಗತಿಯ ವಿದ್ಯಾರ್ಥಿಗಳಿಗೆ ಆರಂಭದಲ್ಲೇ ಪಾಠ ಕೊರತೆ ಭೀತಿ!

ಮಂಗಳೂರು: ಮಂಗಳೂರು ವಿಶ್ವವಿದ್ಯಾ ನಿಲಯ ವ್ಯಾಪ್ತಿಯಲ್ಲಿ ಆ. 12ಕ್ಕೆ ಪದವಿ ತರಗತಿ ಆರಂಭವಾಗುತ್ತಿದ್ದರೂ ಸರಕಾರಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಇನ್ನೂ ಆಗಿಲ್ಲ; ಹೀಗಾಗಿ ವಿದ್ಯಾರ್ಥಿಗಳಿಗೆ ತರಗತಿ ಆರಂಭದಲ್ಲೇ “ಪಾಠ ಕೊರತೆ’ ಲಕ್ಷಣ ಎದುರಾಗಿದೆ!

ವಿ.ವಿ. ವ್ಯಾಪ್ತಿಯಲ್ಲಿ 35 ಸರಕಾರಿ ಕಾಲೇಜುಗಳಿವೆ. ಶೇ. 30ರಿಂದ 40ರಷ್ಟು ಖಾಯಂ ಉಪನ್ಯಾಸಕರಿದ್ದು, ಶೇ. 60ಕ್ಕಿಂತ ಅಧಿಕವಾಗಿ (600ರಷ್ಟು)ಅತಿಥಿ ಉಪನ್ಯಾಸಕರ ಅಗತ್ಯವಿದೆ.ಕಳೆದ ಸಾಲಿನಲ್ಲಿ (2023-24) ಆ. 23ಕ್ಕೆ ಕಾಲೇಜು ಆರಂಭವಾಗಿದ್ದರೂ ಅಕ್ಟೋಬರ್‌ 7ಕ್ಕೆ ಕೌನ್ಸೆಲಿಂಗ್‌ ನಡೆಸಿ ಅತಿಥಿ ಉಪನ್ಯಾಸಕರ ನೇಮಕಾತಿ ಆಗಿತ್ತು. ಹೀಗಾಗಿ ಆರಂಭದ 45 ದಿನ ಅತಿಥಿ ಉಪನ್ಯಾಸಕರಿಲ್ಲದೆ ಮಕ್ಕಳಿಗೆ ತರಗತಿ ನಷ್ಟವಾಗಿದೆ. ಈ ಬಾರಿ ಇನ್ನೆಷ್ಟು ದಿನ ತರಗತಿ ನಷ್ಟ ಎಂಬುದನ್ನು ನೋಡಬೇಕಿದೆ.

ಕೌನ್ಸೆಲಿಂಗ್‌ಗೆ ಇನ್ನೆಷ್ಟು ದಿನ?
ಸರಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ಅನಂತರ ಉಳಿಕೆಯಾಗಿರುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್‌ ಕೌನ್ಸೆಲಿಂಗ್‌ ಮೂಲಕ ಆಯ್ಕೆ ಮಾಡಲಾಗುತ್ತದೆ. ಇದಕ್ಕಾಗಿ ಅರ್ಜಿ ಸಲ್ಲಿಕೆ ಆಗಿ, ರಾಜ್ಯವ್ಯಾಪಿ ಮೆರಿಟ್‌ ಪಟ್ಟಿ ಪ್ರಕಟಿಸಿ, ಇದರಲ್ಲಿ ತಾತ್ಕಾಲಿಕ ಕಾರ್ಯಭಾರ ಹಾಗೂ ಕೌನ್ಸೆಲಿಂಗ್‌ಗಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಮೆರಿಟ್‌ ಪಟ್ಟಿಯನ್ವಯ ಕೌನ್ಸೆಲಿಂಗ್‌ ನಡೆಸಿ ಕಾಲೇಜು ಆಯ್ಕೆ ಮಾಡಿ, ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತದೆ. ಬಳಿಕವಷ್ಟೇ ಅತಿಥಿ ಉಪನ್ಯಾಸಕರು ಕಾಲೇಜಿಗೆ ಬರಲಿದ್ದಾರೆ. ಒಂದು ವೇಳೆ 2ನೇ ಹಂತದ ಕೌನ್ಸೆಲಿಂಗ್‌ ನಡೆಯಲಿದ್ದರೆ ಇನ್ನಷ್ಟು ದಿನ ಬೇಕು!

ಆಯಾ ವಿ.ವಿ. ವ್ಯಾಪ್ತಿಯಲ್ಲಿ ನೇಮಕ
“ರಾಜ್ಯದಲ್ಲಿ ಪದವಿ ತರಗತಿ ಆರಂಭಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ಪ್ರಾರಂಭಿಸಬೇಕು. ಅಲ್ಲಿಯವರೆಗೆ ಆಯಾ ವಿ.ವಿ. ವ್ಯಾಪ್ತಿಯ ಶೈಕ್ಷಣಿಕ ಕ್ಯಾಲೆಂಡರ್‌ ಪ್ರಕಾರವೇ ಅತಿಥಿ ಉಪನ್ಯಾಸಕರನ್ನು ನೇಮಿಸುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಗಳಾಗುವುದಿಲ್ಲ. 10 ತಿಂಗಳುಪೂರ್ಣವಾದ ಕಾರಣದಿಂದ ಆ. 6ರಂದು ನಮ್ಮನ್ನು ಬಿಡುಗಡೆಗೊಳಿಸಲಾಗಿದೆ. ಆದರೆ
ಶೈಕ್ಷಣಿಕ ಕ್ಯಾಲೆಂಡರ್‌ ಮುಗಿಯದೆ ಕೆಲವು ವಿ.ವಿ.ಗಳ ಅತಿಥಿ ಉಪನ್ಯಾಸಕರನ್ನು ಈಗಲೂ ಮುಂದುವರಿಸಿ ರುವುದು ಸರಕಾರದ ದ್ವಂದ್ವ ನಿಲುವು. ಇದರ ಬದಲು ಮಂಗಳೂರು ವ್ಯಾಪ್ತಿಯಲ್ಲಿ ಕಾಲೇಜು ಆರಂಭದ ಸಮಯದಲ್ಲಿ ನಮಗೂ ಇಂತಹುದೇ ಅವಕಾಶ ಕಲ್ಪಿಸಲಿ’ ಎನ್ನುತ್ತಾರೆ ಅತಿಥಿ ಉಪನ್ಯಾಸಕ ಸಂಘದ ಪ್ರಮುಖ ಧೀರಜ್‌ ಕುಮಾರ್‌.

ಕೆಲವೆಡೆ ಬಿಡುಗಡೆ; ಉಳಿದೆಡೆ ಮುಂದುವರಿಕೆ!
ವಿ.ವಿ. ಶೈಕ್ಷಣಿಕ ವೇಳಾಪಟ್ಟಿಯಂತೆ (2023-24ಕ್ಕೆ) ಈಗಾಗಲೇ ತರಗತಿ ಮುಕ್ತಾಯವಾದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಆ. 6ಕ್ಕೆ ಸೀಮಿತಗೊಳಿಸಿ ಸರಕಾರ ಕರ್ತವ್ಯದಿಂದ ಬಿಡುಗಡೆ ಮಾಡಿದೆ. ಹೀಗಿದ್ದರೂ ರಾಜ್ಯದ ಕೆಲವು ವಿ.ವಿ.ಗಳ ಶೈಕ್ಷಣಿಕ ವೇಳಾಪಟ್ಟಿ ಸೆಪ್ಟಂಬರ್‌ವರೆಗೂ ಮುಂದುವರಿಯುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಂತಹ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆಯಾ ಪ್ರಾಂಶುಪಾಲರ ಹಂತದಲ್ಲಿ ಆಯ್ಕೆ ಮಾಡಲು ಸರಕಾರ ಈ ಬಾರಿ ಅನುಮತಿ ನೀಡಿದೆ.ಆದರೆ ಮಂಗಳೂರು ವಿ.ವಿ.ಯಲ್ಲಿ ಪದವಿ ತರಗತಿ ಆ. 12ಕ್ಕೆ ಆರಂಭವಾಗುತ್ತಿದ್ದರೂ ಆ. 6ಕ್ಕೆ ಬಿಡುಗಡೆಗೊಂಡ ಅತಿಥಿ ಉಪನ್ಯಾಸಕರು ಮತ್ತೆ ಸೇರ್ಪಡೆಗಾಗಿ ದಿನಗಟ್ಟಲೆ ಕಾಯಬೇಕಾಗಿದೆ!

15 ದಿನದೊಳಗೆ
ಅಂತಿಮ ತೀರ್ಮಾನ
ಕಳೆದ ಬಾರಿ ಒಂದೊಂದು ವಿ.ವಿ. ಕಾಲೇಜುಗಳ ತರಗತಿ ಬೇರೆ ಬೇರೆ ದಿನಗಳಂದು ಆರಂಭವಾಗಿ ಸಮಸ್ಯೆ ಆಗಿತ್ತು. ಈ ಬಾರಿ ಅದನ್ನು ನಿವಾರಿಸಲು ಏಕರೂಪದ ಕ್ಯಾಲೆಂಡರ್‌ ಜಾರಿಗೆ ನಿರ್ಧರಿಸಲಾಗಿದೆ. ಈ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪ್ರಾರಂಭಿ ಸಲು ಉದ್ದೇಶಿಸಲಾಗಿದೆ. ಮುಂದಿನ 15 ದಿನದೊಳಗೆ ಈ ಕುರಿತಂತೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.
-ಜಗದೀಶ್‌ ಜಿ.,ಆಯುಕ್ತರು, ಕಾಲೇಜು
ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.