Mangaluru University ಹೊಸ ಕೋರ್ಸ್‌ಗಳಿಗೆ ಅನುಮೋದನೆ ಗಿಟ್ಟಿಸುವುದೇ ಹರಸಾಹಸ

ಮಂಗಳೂರು ವಿ.ವಿ.ಯ ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ಪ್ರಸ್ತಾಪ

Team Udayavani, Jun 20, 2024, 6:32 AM IST

Mangaluru University ಹೊಸ ಕೋರ್ಸ್‌ಗಳಿಗೆ ಅನುಮೋದನೆ ಗಿಟ್ಟಿಸುವುದೇ ಹರಸಾಹಸ

ಮಂಗಳೂರು: ಹೊಸ ಅಗತ್ಯಕ್ಕೆ ತಕ್ಕಂತೆ ಕಾಲೇಜುಗಳು ನವೀನ ಕೋರ್ಸುಗಳನ್ನು ರೂಪಿಸಿದರೂ ಸರಕಾರದಿಂದ ಅನುಮೋದನೆ ಪಡೆಯಲು ಕಾದು ಸುಸ್ತಾಗುವ ಸ್ಥಿತಿ ಸದ್ಯದ್ದು.

ಈ ಅಂಶವನ್ನು ಕಾಲೇಜು ಒಂದರ ಪ್ರಾಂಶುಪಾಲರೇ ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ತೋಡಿ ಕೊಂಡರು.

“ಹೊಸ ಕೋರ್ಸ್‌ ಆರಂಭಿಸಲು ಹಲವು ಕಾಲೇಜುಗಳು ಉತ್ಸುಕವಾಗಿವೆ. ಆದರೆ ಅದಕ್ಕೆ ಅನುಮೋದನೆ ಪಡೆಯುವುದೇ ತೀರಾ ಕಷ್ಟದ್ದು. ಇದರಿಂದ ಹೊಸ ಕೋರ್ಸ್‌ಗಳನ್ನು ಆರಂಭಿಸುವ ಉತ್ಸಾಹವೇ ಇಲ್ಲವಾಗುತ್ತದೆ’ ಎಂದು ವಾಸ್ತವವನ್ನು ವಿವರಿಸಿದರು ಅವರು.

ಇದಕ್ಕೆ ಶೈಕ್ಷಣಿಕ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ| ಧರ್ಮ ಪ್ರತಿಕ್ರಿಯಿಸಿ, ಎಲ್ಲವೂ ಆನ್‌ಲೈನ್‌ ಪ್ರಕ್ರಿಯೆ.ಅಗತ್ಯವಿರುವ ದಾಖಲೆಗಳನ್ನು ಸರಿಯಾಗಿ ಒದಗಿಸಿ. ಆ ಬಳಿಕ ಅದರ ಬೆನ್ನುಹಿಡಿಯುವ ಕೆಲಸವನ್ನು ವಿಶ್ವವಿದ್ಯಾನಿಲಯದಿಂದಲೂ ಮಾಡಲಾಗುವುದು ಎಂದು ಹೇಳಿದರು.

ಹದಿನೇಳು ಕಾಲೇಜುಗಳು
ಈ ಸಾಲಿನ ಪ್ರವೇಶಾತಿಗೆ ಸಂಯೋಜನೆ ಪಡೆಯಲು 17 ಕಾಲೇಜುಗಳು ಅರ್ಜಿ ಹಾಕಿಲ್ಲ ಎಂದು ಕುಲಪತಿಗಳು ತಿಳಿಸಿದರು.

ವಿ.ವಿ.ಯಡಿ ಒಟ್ಟು 178 ಕಾಲೇಜುಗಳಿದ್ದು, ಇದರಲ್ಲಿ 7 ಸ್ವಾಯತ್ತ ಹಾಗೂ 5 ವಿ.ವಿ. ಸಂಯೋಜಿತ ಕಾಲೇಜುಗಳಾಗಿವೆ. ವಿದ್ಯಾರ್ಥಿಗಳ ಪ್ರವೇಶಾತಿ ಕಡಿಮೆ ಇರುವುದರಿಂದ 17 ಕಾಲೇಜುಗಳು ಸಂಯೋಜನೆ ಪಡೆಯಲು ಮುಂದಾಗಿಲ್ಲ, ಆದರೆ ಎರಡನೇ ಹಾಗೂ ಮೂರನೇ ವರ್ಷದ ಪದವಿ ತರಗತಿಗಳು ಅಲ್ಲಿ ನಡೆಯುತ್ತವೆ ಎಂದರು.

ಮುಂದುವರಿಕೆ ಸಂಯೋಜನೆಗೆ 136, ವಿಸ್ತರಣ ಸಂಯೋಜನೆಗೆ 36, ಶಾಶ್ವತ ಸಂಯೋಜನೆಗೆ 29 ಹಾಗೂ ಹೊಸ ಶಾಶ್ವತ ಸಂಯೋಜನೆಯಲ್ಲಿ 5 ಕಾಲೇಜುಗಳು ಅರ್ಜಿ ಸಲ್ಲಿಸಿದ್ದು ಸಭೆಯಲ್ಲಿ ಅನುಮೋದಿಸಲಾಯಿತು.

ಯುಜಿಸಿ ಮಾರ್ಗಸೂಚಿಯಂತೆ ವಿದ್ಯಾರ್ಥಿಯು ಪ್ರವೇಶಾತಿ ಪಡೆಯುವ ಕಾರ್ಯಕ್ರಮದ ಪಠ್ಯಕ್ರಮ ಚೌಕಟ್ಟಿನ ಬಗ್ಗೆ ಪೂರ್ಣ ಮಾಹಿತಿ ಪಡೆದಿರಬೇಕು. ತಾನು ಅಧ್ಯಯನಕ್ಕೆ ಆಯ್ಕೆ ಮಾಡಿದ ಪಠ್ಯಕ್ರಮಗಳ ಸ್ಪಷ್ಟ ಮಾಹಿತಿ ಮತ್ತು ಕಲಿಯಬೇಕಾದ ವಿಷಯಗಳ ಬಗ್ಗೆ ಅರಿವಿರಬೇಕು. ಹಾಗಾಗಿ ಸ್ನಾತಕೋತ್ತರ ಕಾರ್ಯಕ್ರಮಗಳ ಪಠ್ಯಕ್ರಮಕ್ಕೆ ಸಂಬಂಧಿಸಿ ವಿಶ್ವವಿದ್ಯಾನಿಲಯದ “ಲರ್ನಿಂಗ್‌ ಔಟ್‌ಕಮ್ಸ್‌’ ಮತ್ತು “ಗ್ರಾಜ್ಯುಯೇಟ್‌ ಆಟ್ರಿಬ್ಯೂಟ್ಸ್‌’ ಗೂ ಅನುಮೋದನೆ ನೀಡಲಾಯಿತು.

ಸ್ವಾಯತ್ತ ಕಾಲೇಜಾಗಿರುವ ಎಸ್‌ಡಿಎಂ ಉಜಿರೆಯಲ್ಲಿ ಬಿ.ವೋಕ್‌ ಕೋರ್ಸ್‌ ಮಾಡಿದವರಿಗೆ ಎಂಕಾಂ ಗೆ ಪ್ರವೇಶ ಕಲ್ಪಿಸಲು ಅನುಮೋದನೆ ನೀಡ ಲಾಯಿತು. ಅದೇ ರೀತಿ 2024- 25ನೇ ಸಾಲಿಗೆ ಶೈಕ್ಷಣಿಕ ಮಂಡಳಿ ಸಮಿತಿ ರಚನೆ, ನಂತೂರಿನ ಶ್ರೀ ಭಾರತಿ ಕಾಲೇಜಿನ ಹೊಸ ಸಂಯೋಜನೆಯಾದ ಬಿಕಾಂ(ಬಿಸಿನೆಸ್‌ ಡಾಟಾ ಅನಾ ಲಿಟಿಕ್ಸ್‌)ಗೆ ಮಂಜೂರಾತಿ ನೀಡಲಾಯಿತು. ಬಿಎಸ್ಸಿ-ಎಫ್‌ಎನ್‌ಡಿ (ಫುಡ್‌ ನ್ಯೂಟ್ರಿಶನ್‌, ಡಯೆಟೆಟಿಕ್ಸ್‌)ಯ ಪ್ರವೇಶಾತಿಗೆ ಅರ್ಹತೆಯ ಸಂಬಂಧ ಈ ಹಿಂದಿನ ನಿಯಮಗಳನ್ನು ಪಾಲಿಸಬೇಕು. ಎಸ್‌ಸಿಎಸ್‌ ಪ್ರಥಮ ದರ್ಜೆ ಕಾಲೇಜು, ತ್ರಿಶಾ ಕಾಲೇಜು ಆಫ್‌ ಮ್ಯಾನೇಜ್‌ಮೆಂಟ್‌ ಮತ್ತು ಸಂಧ್ಯಾ ಕಾಲೇಜುಗಳ ಸ್ಥಳ ಬದಲಾವಣೆಯನ್ನೂ ಅನುಮೋದಿಸಲಾಯಿತು.

ಫಿಲೋಮಿನಾ ಕಾಲೇಜಿಗೆ
ಸ್ವಾಯತ್ತ ಸ್ಥಾನಮಾನ
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ 2024-25ರಿಂದ 2033-34ರ ವರೆಗೆ ಸ್ವಾಯತ್ತ ಸ್ಥಾನ ಮಾನ ನೀಡಲು ಸಭೆ ಸಮ್ಮತಿಸಿತು. ಯುಜಿಸಿಯೂ ಅನುಮೋದಿಸಿದ್ದು, ಸ್ವಾಯತ್ತ ಸ್ಥಾನಮಾನ ನೀಡುವ ಪ್ರಸ್ತಾವಕ್ಕೆ ಮಂಡಳಿ ಸದಸ್ಯರು ಒಪ್ಪಿಗೆ ವ್ಯಕ್ತಪಡಿಸಿದರು.

ವಿ.ವಿ. ವ್ಯಾಪ್ತಿಯ ಅರ್ಹ ಸಂಯೋಜಿತ ಕಾಲೇಜುಗಳಿಗೆ ಸ್ವಾಯತ್ತ ಸ್ಥಾನಮಾನ ನೀಡಿಕೆ ಮತ್ತು ಅವುಗಳ ಕಾರ್ಯ ನಿರ್ವಹಣೆ ನಿರ್ಬಂಧಿಸುವ ನಿಯಮ ಪ್ರಕಾರ ಸ್ಥಾಯಿ ಸಮಿತಿ ರಚಿಸಲಾಗಿದೆ. ಸಮಿತಿಯು ಸಂತ ಫಿಲೋಮಿನಾ ಕಾಲೇಜಿಗೆ ಭೇಟಿ ನೀಡಿಸ್ವಾಯತ್ತ ಸ್ಥಾನಮಾನ ನೀಡುವ ಕುರಿತು ಪರಿಶೀಲನೆ ನಡೆಸಿ ವರದಿಯನ್ನು ಸಲ್ಲಿಸಿತ್ತು. ವಿ.ವಿ. ಕುಲಸಚಿವ ಕೆ.ರಾಜು ಮೊಗ ವೀರ, ಪರೀಕ್ಷಾಂಗ ಕುಲಸಚಿವ ಡಾ|ಎಚ್‌. ದೇವೇಂದ್ರಪ್ಪ, ಹಣಕಾಸು ಅಧಿಕಾರಿ
ಡಾ. ಸಂಗಪ್ಪ ವೈ ಉಪಸ್ಥಿತರಿದ್ದರು.

ಜೂ. 24ರಿಂದ ಪದವಿ ಪರೀಕ್ಷೆ
ಮಂಗಳೂರು ವಿ.ವಿ.ಯ ಎರಡನೇ, ನಾಲ್ಕನೇ ಹಾಗೂ ಆರನೇ ಸೆಮಿಸ್ಟರ್‌ನ ಪರೀಕ್ಷೆಗಳು ಜೂ. 24ರಿಂದ ಜು. 31ರ ವರೆಗೆ ನಡೆಯಲಿದೆ. ಇದರಲ್ಲಿ ಆರನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳಿಗೆ ಮೊದಲು ಪರೀಕ್ಷೆ ನಡೆಸಿ ನಂತರ ಮೌಲ್ಯಮಾಪನ ನಡೆಸಲು ತೀರ್ಮಾನಿಸಲಾಗಿದೆ. ಆಗಸ್ಟ್‌ ನ ಮೊದಲ ವಾರದಲ್ಲಿ ಪದವಿ ಕೋರ್ಸ್‌ ಗಳ ಆರಂಭಕ್ಕೆ ಸಿದ್ಧತೆ ನಡೆಸಿರುವುದಾಗಿ ಕುಲಪತಿ ಪ್ರೊ.ಪಿ. ಎಲ್‌. ಧರ್ಮ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

dc

Electrical failure: ವರದಿ ನೀಡುವಂತೆ ಮೆಸ್ಕಾಂ ಎಂ.ಡಿ.ಗೆ ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Untitled-1

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.