Mangaluru: ಟ್ರಾಫಿಕ್‌ ಸಿಗ್ನಲ್‌ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್‌


Team Udayavani, Sep 29, 2024, 6:37 PM IST

7

ಮಹಾನಗರ: ನಗರದಲ್ಲಿ ಸಂಚಾರ ಸುಧಾರಣೆಗೆ ವಿವಿಧ ಜಂಕ್ಷನ್‌ಗಳಲ್ಲಿ ಟ್ರಾಫಿಕ್‌ ಸಿಗ್ನಲ್‌ಗ‌ಳನ್ನು ಅಳವಡಿಸಲಾಗಿದೆ. ಆದರೆ ಪ್ರಸ್ತುತ ನಗರದ ಐದು ಕಡೆಗಳಲ್ಲಿ ಮಾತ್ರ ಕಾರ್ಯಾಚರಣೆ ನಡೆಯುತ್ತಿದ್ದು, ಉಳಿದ ವುಗಳು ಇನ್ನೂ ಕಾರ್ಯಾಚರಣೆ ಆರಂಭಿಸಿಲ್ಲ.

ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆ ಯಡಿ ಕಮಾಂಡ್‌ ಕಂಟ್ರೋಲ್‌ ರೂಂ ನಿಂದ ನಿಯಂತ್ರಿಸಲ್ಪಡುವ ಈ ಹೊಸ ಕಂಬಗಳ ಸಹಿತ ಸಿಗ್ನಲ್‌ಗ‌ಳನ್ನು ಕೆಲವು ತಿಂಗಳುಗಳ ಹಿಂದೆ ಅಳವಡಿಸಲಾಗಿದೆ. ಆದರೆ ಈ ಮೊದಲು ಎಲ್ಲೆಲ್ಲ ಸಿಗ್ನಲ್‌ಗ‌ಳು ಕಾರ್ಯಾಚರಣೆ ನಡೆಸುತ್ತಿತ್ತೋ ಅಲ್ಲಿ ಮಾತ್ರ ಈಗಲೂ ಕಾರ್ಯಾಚರಿಸು ತ್ತಿದೆ. ಇತರ ಕಡೆಗಳಲ್ಲಿ ಹೊಸ ಸಿಗ್ನಲ್‌ ಅಳವಡಿಸಿದ್ದರೂ ಅವುಗಳು ಕಾರ್ಯಾಚರಣೆ ನಡೆಸು ತ್ತಿಲ್ಲ. ಇವುಗಳು ಇನ್ನೂ ಸ್ಮಾರ್ಟ್‌ ಸಿಟಿಯ ಅಧೀನದಲ್ಲಿಯೇ ಇದ್ದು, ಪೊಲೀಸ್‌ ಇಲಾಖೆಗೆ ಇವುಗಳ ಕಾರ್ಯಾಚರಣೆ ಹಸ್ತಾಂತರಿಸುವ ಕಾರ್ಯ ನಡೆದಿಲ್ಲ.

ಎಲ್ಲೆಲ್ಲಿ ಸಿಗ್ನಲ್‌ ಕಾರ್ಯಾಚರಿಸುತ್ತಿವೆ?
ನಗರದಲ್ಲಿ ಪ್ರಸ್ತುತ ಲಾಲ್‌ಬಾಗ್‌ ವೃತ್ತ, ಪಿವಿಎಸ್‌ ಜಂಕ್ಷನ್‌, ಹಂಪನಕಟ್ಟೆ, ಕಂಕನಾಡಿಯ ಕರಾವಳಿ ವೃತ್ತ, ರಾ.ಹೆ. 66ರ ಕೆ.ಪಿ.ಟಿ. ವೃತ್ತದಲ್ಲಿ, ಸಿಗ್ನಲ್‌ಗ‌ಳು ಕಾರ್ಯಾಚರಿಸುತ್ತಿವೆ. ಬೆಂದೂರುವೆಲ್‌, ಬೆಂದೂರು, ಬಿಜೈ ಕೆಎಸ್‌ಆರ್‌ಟಿಸಿ, ಬಲ್ಮಠಗಳಲ್ಲಿ ಹೊಸ ಸಿಗ್ನಲ್‌ ಅಳವಡಿಸಲಾಗಿದ್ದು ಕಾರ್ಯಾಚರಿಸುತ್ತಿಲ್ಲ.

ಸಮಸ್ಯೆ ಸರಿಪಡಿಸಬೇಕಿದೆ
ಬಂಟ್ಸ್‌ಹಾಸ್ಟೆಲ್‌ನಿಂದ ಕದ್ರಿ ಕಡೆಗೆ ಸಾಗುವ ರಸ್ತೆಯಲ್ಲಿ ಸಿಗ್ನಲ್‌ ದಾಟಿದ ತತ್‌ಕ್ಷಣವೇ ಬಸ್‌ ತಂಗುದಾಣವಿದೆ. ಇಲ್ಲಿ ಸಿಗ್ನಲ್‌ ಕಾರ್ಯಾಚರಿಸಲು ಆರಂಭವಾದರೆ ನಾಲ್ಕೈದು ಬಸ್‌ಗಳು ಒಟ್ಟಿಗೆ ಬಂದಾಗ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಬೆಂದೂರುವೆಲ್‌ ಜಂಕ್ಷನ್‌ನಲ್ಲೂ ಕಂಕನಾಡಿ ಕಡೆಯಿಂದ ಬರುವ ಬಸ್‌ಗಳು ಸಿಗ್ನಲ್‌ ಬುಡದಲ್ಲಿಯೇ ಪ್ರಯಾಣಿಕರನ್ನು ಇಳಿಸುತ್ತವೆ. ಇಲ್ಲಿ ಈಗಾಗಲೇ ವಾಹನ ದಟ್ಟಣೆ ಉಂಟಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಿಗ್ನಲ್‌ ಕಾರ್ಯಾಚರಣೆ ಆರಂಭ ವಾದರೆ ಸಮಸ್ಯೆಯಾಗಲಿದೆ.

ಸಿಗ್ನಲ್‌ನಲ್ಲೇ ಇವೆ ಬಸ್‌ ತಂಗುದಾಣಗಳು
ನಗರದ ಕೆಲವು ಜಂಕ್ಷನ್‌ಗಳಲ್ಲಿ ಸಿಗ್ನಲ್‌ ಅಳವಡಿಸಿರುವಲ್ಲಿಯೇ ಬಸ್‌ ತಂಗುದಾಣಗಳಿವೆ. ಇದರಿಂದಲೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಪಿವಿಎಸ್‌ ಜಂಕ್ಷನ್‌ ಬಳಿ ಇಂತಹ ಸಮಸ್ಯೆಯಿದೆ. ನವಭಾರತ ವೃತ್ತದ ಕಡೆಯಿಂದ ಬರುವ ಬಸ್‌ಗಳು ಸಿಗ್ನಲ್‌ ಬಳಿಯೇ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದರಿಂದ ಎಂ.ಜಿ. ರಸ್ತೆಗೆ ತೆರಳುವ ವಾಹನಗಳು ದಟ್ಟಣೆಯಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ. ಇನ್ನೊಂದು ಕಡೆ ಬಂಟ್ಸ್‌ಹಾಸ್ಟೆಲ್‌ನಿಂದ ಬರುವ ಬಸ್‌ಗಳು ಕುದು¾ಲ್‌ ರಂಗರಾವ್‌ ಹಾಸ್ಟೆಲ್‌ ಮುಂಭಾಗದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದರಿಂದ ನವಭಾರತ ರಸ್ತೆಯ ಕಡೆಗೆ ಸಾಗುವ ವಾಹನಗಳಿಗೆ ಅಡ್ಡಿಯಾಗುತ್ತಿದೆ.

ಹಂಪನಟ್ಟೆ ಜಂಕ್ಷನ್‌ನಲ್ಲಿ ಮತ್ತೆ ದಟ್ಟಣೆ
ಹಂಪನಕಟ್ಟೆ ಜಂಕ್ಷನ್‌ನಲ್ಲಿ ಈ ಮೊದಲು ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಪ್ರಯಾಣಿಕರಿಗೆ ಬಸ್ಸುಗಳನ್ನು ಹತ್ತಲು ಅವಕಾಶ ನಿರಾಕರಿಸಲಾಗಿತ್ತು. ತಿಂಗಳ ಹಿಂದೆ ಇಲ್ಲಿನ ಬ್ಯಾರಿಕೇಡ್‌ಗಳನ್ನು ತೆಗೆಯಲಾಗಿದ್ದು, ಪ್ರಯಾಣಿಕರನ್ನು ಸಿಗ್ನಲ್‌ನಲ್ಲಿಯೇ ಹತ್ತಿಸಿಕೊಳ್ಳಲಾಗುತ್ತಿದೆ. ಬಸ್‌ಗಳು ಸಿಗ್ನಲ್‌ ಬಳಿಯೇ ನಿಲ್ಲುವುದರಿಂದ ಹಿಂದಿನಿಂದ ಬರುವ ವಾಹನಗಳಿಗೆ ಕೆಎಸ್‌ರಾವ್‌ ರಸ್ತೆ ಕಡೆಗೆ ತೆರಳಲು ಸಮಸ್ಯೆಯಾಗುತ್ತಿದೆ. ಸುಮಾರು 50 ಸೆಕೆಂಡ್‌ಗಳ ಸಿಗ್ನಲ್‌ ಇದ್ದರೂ ವಾಹನಗಳಿಗೆ ಸರಾಗವಾಗಿ ಸಾಗಲು ಸಾಧ್ಯವಾಗುತ್ತಿಲ್ಲ.

ಪ್ರಾಯೋಗಿಕ ಕಾರ್ಯಾಚರಣೆ ಪರಿಶೀಲಿಸಿ ಕ್ರಮ
ನಗರದ ಜಂಕ್ಷನ್‌ಗಳಲ್ಲಿ ಹೊಸದಾಗಿ ಅಳವಡಿಸಿರುವ ಸಿಗ್ನಲ್‌ಗ‌ಳು ಸದ್ಯ ಸ್ಮಾರ್ಟ್‌ ಸಿಟಿಯವರ ನಿಯಂತ್ರಣದಲ್ಲಿದ್ದು, ಅವುಗಳು ಕಾರ್ಯಾಚರಿಸುತ್ತಿಲ್ಲ. ಪೊಲೀಸ್‌ ಇಲಾಖೆಗೆ ಇನ್ನೂ ಹಸ್ತಾಂತರಿಸುವ ಪ್ರಕ್ರಿಯೆ ಇನ್ನೂ ಆಗಿಲ್ಲ. ಪ್ರಾಯೋಗಿಕ ಕಾರ್ಯಾಚರಣೆಗಳನ್ನು ಪರಿಶೀಲಿಸಿದ ಅನಂತರವೇ ಅವುಗಳನ್ನು ನಮ್ಮ ನಿಯಂತ್ರಣಕ್ಕೆ ಪಡೆದುಕೊಳ್ಳುತ್ತೇವೆ. ಪ್ರಸ್ತುತ ಯಾವೆಲ್ಲ ಜಂಕ್ಷನ್‌ಗಳಲ್ಲಿ ಕಾರ್ಯಚರಣೆ ಆಗುತ್ತಿದೆಯೋ ಅದು ಮಾತ್ರ ಸಂಚಾರ ಪೊಲೀಸ್‌ ವಿಭಾಗದ ನಿಯಂತ್ರಣದಲ್ಲಿದೆ.
– ದಿನೇಶ್‌ ಕುಮಾರ್‌ ಬಿ.ಪಿ. ಡಿಸಿಪಿ, ಸಂಚಾರ ಮತ್ತು ಅಪರಾಧ

-ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.