ಅಂದು ಬಿಸಿಲಾಯಿತು ಇಂದು ಮಳೆಗೆ ಒದ್ದೆಯಾಗಿ ಪಾಠ ಕೇಳುವ ಸ್ಥಿತಿ

ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಗೋಳು

Team Udayavani, May 20, 2022, 9:41 AM IST

manikkara

ಸವಣೂರು: ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಉರಿಬಿಸಿಲಿನಲ್ಲಿ ಒಣಗಿಕೊಂಡು ಪಾಠ ಕೇಳಬೇಕಾದ ದಯನೀಯ ಸ್ಥಿತಿಯ ಬಗ್ಗೆ ಉದಯವಾಣಿ ವರದಿ ಪ್ರಕಟಿಸಿತ್ತು. ವರದಿಯ ಫ‌ಲಶ್ರುತಿಯಾಗಿ ಕೋಡಿಂಬಾಡಿ ಅಶೋಕ್‌ ರೈ ಅವರು ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರ ಜತೆ ಮಾತನಾಡಿ ಡಿವಿಎಸ್‌ ಅವರ ಸದಾಸ್ಮಿತ ಫೌಂಡೇಶನ್‌ ಮೂಲಕ ಒಂದು ಕೊಠಡಿ ನಿರ್ಮಾಣದ ಭರವಸೆ ನೀಡಿದ್ದರು. ಬಳಿಕ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್‌ ಕುಮಾರ್‌ ರೈ ಅವರು ಇನ್ನೊಂದು ಕೊಠಡಿ ನಿರ್ಮಾಣ ಮಾಡಿಕೊಡುವುದಾಗಿ ತಿಳಿಸಿದ್ದರು. ಇದೀಗ ಅದರ ಕಾಮಗಾರಿ ನಿರ್ಮಾಣ ಹಂತದಲ್ಲಿದೆ. ಆದರೂ ಇಲ್ಲಿನ ಬೇಡಿಕೆ ಪೂರೈಸಲು ಸಾಲುತ್ತಿಲ್ಲ.

ಇದೀಗ ಶಾಲೆ ಪುನರಾರಂಭಗೊಂಡಿದೆ. ಮಳೆರಾಯನ ಅಬ್ಬರವೂ ಜೋರಾಗಿದೆ. ಇದರಿಂದ ಮತ್ತೆ ಮಕ್ಕಳಿಗೆ ಪಾಠ ಕೇಳಲು ಸಮಸ್ಯೆಯಾಗಿದೆ.

ಮಣಿಕ್ಕರ ಈ ಶಾಲೆಯಲ್ಲಿ 88ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ಸದ್ಯಕ್ಕೆ ಶಿಕ್ಷಕರ ಕೊರತೆಯಿಲ್ಲ. ಮಕ್ಕಳು ಪಾಠ ಕೇಳಲು ಕುಳಿತುಕೊಳ್ಳುವ ತರಗತಿ ಕೋಣೆಗಳು ಬಿರುಕು ಬಿಟ್ಟಿದೆ. ಸ್ವಲ್ಪ ಹೆಚ್ಚು ಕಮ್ಮಿಯಾದರೂ ಛಾವಣಿ, ಗೋಡೆ ಬಿದ್ದರೂ ಅಚ್ಚರಿಯಿಲ್ಲ. ಶಾಲೆಯಲ್ಲಿರುವ ನಲಿ-ಕಲಿ ಕೊಠಡಿ ಹೊರತುಪಡಿಸಿ ಉಳಿದ ಎಲ್ಲ ತರಗತಿಗಳದ್ದು ಇದೇ ಅವಸ್ಥೆ.

ತರಗತಿ ಕೋಣೆಯ ಗೋಡೆ ಬೀಳುವ ಸ್ಥಿತಿಯಲ್ಲಿರುವುದರಿಂದ 1ರಿಂದ 7 ನೇ ತರಗತಿಯ ಮಕ್ಕಳು ಈಗ ಶಾಲಾ ರಂಗ ಮಂಟಪದಲ್ಲಿ ಪಾಠ ಕೇಳುವ ಸ್ಥಿತಿಯಲ್ಲಿದ್ದಾರೆ.

ಮನವಿ ನೀಡಿದರೂ ಸ್ಪಂದನೆಯೇ ಇಲ್ಲ

ಈ ಶಾಲೆಯ ಅವಸ್ಥೆಯ ಬಗ್ಗೆ ಶಿಕ್ಷಣ ಇಲಾಖೆಗೂ, ಜನಪ್ರತಿನಿಧಿಗಳ ಗಮನಕ್ಕೆ ಕಳೆದ ಶೈಕ್ಷಣಿಕ ವರ್ಷದಲ್ಲೇ ತರಲಾಗಿದೆ. ಕಳೆದ ಐದು ವರ್ಷಗಳಿಂದ ಈ ಶಾಲೆ ಅಪಾಯದ ಎಚ್ಚರಿಕೆ ಕೊಡುತ್ತಲೇ ಇದೆ. ಪೋಷಕರು ನಿತ್ಯವೂ ಆತಂಕ, ದುಗುಡ, ದುಮ್ಮಾನಗಳ ನಡುವೆಯೇ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ನಮ್ಮ ಮಕ್ಕಳ ಜೀವಕ್ಕೆ ಬೆಲೆಯಿಲ್ಲವೇ ಎಂದು ಪೋಷಕರು ಪ್ರಶ್ನಿಸಿ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದ್ದಾರೆ. ತರಗತಿ ಕೋಣೆ ಬಂದ್‌ ಅಪಾಯದ ಮುನ್ಸೂಚನೆಯ ಕಾರಣಕ್ಕೆ ಶಾಲೆಯ ಎಲ್ಲ ತರಗತಿ ಕೋಣೆಯನ್ನು ಬಂದ್‌ ಮಾಡಲಾಗಿದೆ. ನಲಿಕಲಿ ಕೊಠಡಿ ಹಾಗೂ ರಂಗ ಮಂದಿರದಲ್ಲಿ ಮಕ್ಕಳು ಪಾಠ ಕೇಳುತ್ತಿದ್ದಾರೆ.

ಭಕ್ತಕೋಡಿ ಶಾಲೆಯಲ್ಲೂ ಸಮಸ್ಯೆ

ಸರ್ವೆ ಗ್ರಾಮದ ಭಕ್ತಕೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಈ ಬಾರಿ 15 ಮಕ್ಕಳು ಒಂದನೇ ತರಗತಿ ದಾಖಲಾಗಿದ್ದಾರೆ. ಕೊಠಡಿ ಸಮಸ್ಯೆಗಳಿಂದ 1,2,3 ನೇ ತರಗತಿಗಳು ಒಂದು ಕೊಠಡಿಯಲ್ಲಿ, 3,4,5ನೇ ತರಗತಿಗಳು ಒಂದೇ ಕೊಠಡಿ ಯಲ್ಲಿ ಹಾಗೂ 6,7ನೇ ತರಗತಿಗಳು ಬೇರೆ ಬೇರೆ ಕೊಠಡಿಗಳಲ್ಲಿ ನಡೆಯಲಿದೆ.ಕಳೆದ ವರ್ಷವೇ ಶಾಲೆಗೆ ಅಗತ್ಯವಿರುವ ಕೊಠಡಿಗಳನ್ನು ಒದಗಿಸುವಂತೆ ಮನವಿ ಮಾಡಿದ್ದೆವು. ಈ ಬಾರಿ ಮಳೆಯ ನಡುವೆ ಶೈಕ್ಷಣಿಕ ವರ್ಷ ಆರಂಭವಾಗಿದೆ. ಸಮಸ್ಯೆ ಹಾಗೆಯೇ ಇದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ಕೈಪಂಗಳ ಹೇಳಿದ್ದಾರೆ.

ಅಪಾಯ ಕಟ್ಟಿಟ್ಟ ಬುತ್ತಿ

ಮಣಿಕ್ಕರ ಶಾಲೆಯ ಪೋಷಕರ ಅಳಲನ್ನು ಜನಪ್ರತಿನಿಧಿಗಳು, ಅಧಿಕಾರಿಗಳು ಪುರಸ್ಕರಿಸದೇ ಇದ್ದಲ್ಲಿ ಶಾಲೆಯಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ರಹಿಮಾನ್‌, ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.