Mangaluru ಗ್ರಾಹಕ ಸ್ನೇಹಿ ಸೇವೆ ನೀಡಲು ಮೆಸ್ಕಾಂ ಅಧ್ಯಕ್ಷ ಪಂಕಜ್ ಪಾಂಡೆ ಸೂಚನೆ
100ನೇ ನಿರ್ದೇಶಕ ಮಂಡಳಿ ಸಭೆ ಪೂರೈಸಿದ ಮೆಸ್ಕಾಂ
Team Udayavani, Jan 2, 2024, 12:35 AM IST
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಂಗಳೂರು ವಿದ್ಯುತ್ ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ಗ್ರಾಹಕ ಸ್ನೇಹಿ ಸೇವೆ ನೀಡುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮೆಸ್ಕಾಂ ಅಧ್ಯಕ್ಷ ಪಂಕಜ್ ಕುಮಾರ್ ಪಾಂಡೆ ಸೂಚಿಸಿದರು.
ಅವರು ಮೆಸ್ಕಾಂ ಸ್ಥಾಪನೆಗೊಂಡು 21 ವರ್ಷಗಳು ಪೂರ್ಣಗೊಂಡು ಬೆಂಗಳೂರಿನ ಕಾವೇರಿ ಭವನದಲ್ಲಿ ಜರಗಿದ 100ನೇ ನಿರ್ದೇಶಕ ಮಂಡಳಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವ್ಯವಸ್ಥಾಪಕ ನಿರ್ದೇಶಕಿ ಡಿ. ಪದ್ಮಾವತಿ ಮಾತನಾಡಿ, ಮೆಸ್ಕಾಂ ದೇಶದಲ್ಲಿಯೇ ಅತ್ಯುತ್ತಮ ವಿದ್ಯುಚ್ಚಕ್ತಿ ಸರಬರಾಜು ಕಂಪೆನಿಗಳಲ್ಲೊಂದಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಅತ್ಯುತ್ತಮ ನಿರ್ವಹಣೆ ತೋರುತ್ತಿದೆ. ಮೆಸ್ಕಾಂನ ಸೇವೆಗಳನ್ನು ಮತ್ತಷ್ಟು ಉತ್ತಮಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ವಿದ್ಯುತ್ಛಕ್ತಿ ಪೂರೈಕೆ, ವಿದ್ಯುತ್ ನಷ್ಟ ತಡೆಗಟ್ಟುವಿಕೆ, ವಿದ್ಯುತ್ ಪರಿವರ್ತಕಗಳ ದುರಸ್ತಿ, ಹಾಳಾದ ಪರಿವರ್ತಕಗಳ ಬದಲಾವಣೆ ಕುರಿತಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಮೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್.ಜಿ. ರಮೇಶ್, ನಿರ್ದೇಶಕರಾದ ಡಾ| ಎಂ.ಟಿ. ರೆಜು, ಅಪರ್ಣಾ ಪಾವಟೆ, ಜಿ. ಶೀಲಾ, ವಿ. ಕೃಷ್ಣಪ್ಪ, ಆರ್.ಎಚ್, ಲಕ್ಷ್ಮೀಪತಿ, ಕೆ. ಶಿವಣ್ಣ, ಮುಖ್ಯ ಆರ್ಥಿಕ ಅಧಿಕಾರಿ ಬಿ. ಜಗದೀಶ್ ಉಪಸ್ಥಿತರಿದ್ದರು.
ಮೆಸ್ಕಾಂನ ಕಂಪೆನಿ ಕಾರ್ಯದರ್ಶಿ ಪ್ರಭಾತ್ ಮ.ಜೋಶಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.