ಮೂಡುಬಿದಿರೆಯಲ್ಲಿ ನಡೆದ ಜನಜಾಗೃತಿ ಜಾಥಾ, ಸಮಾವೇಶದಲ್ಲಿ ಸಚಿವ ಕೋಟ

ಧ.ಗ್ರಾ. ಯೋಜನೆಯಿಂದ ಗಾಂಧಿ ಚಿಂತನೆ ಸಾಕಾರ

Team Udayavani, Oct 3, 2019, 4:17 AM IST

x-31

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಕಳ-ಮೂಡುಬಿದಿರೆ ವತಿಯಿಂದ 150ನೇ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಮೂಡುಬಿದಿರೆಯಲ್ಲಿ ಬೃಹತ್‌ ಜನಜಾಗೃತಿ ಜಾಥಾ ಮತ್ತು ಸಮಾವೇಶ ಬುಧವಾರ ಜರಗಿತು.

ಪದ್ಮಾವತಿ ಕಲಾಮಂದಿರದಲ್ಲಿ ನಡೆದ ಸಮಾವೇಶವನ್ನು ಉದ್ಘಾಟಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸಮಾಜವನ್ನು ವ್ಯಸನಮುಕ್ತ, ಪರಿಶ್ರಮಶೀಲ, ಅಭಿವೃದ್ಧಿಯ ಮಾರ್ಗದಲ್ಲಿ ಮುನ್ನಡೆಸುವಲ್ಲಿ ಸರಕಾರಕ್ಕೆ ಮಾರ್ಗದರ್ಶನ ನೀಡುವ ಮಟ್ಟಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಬೆಳೆದು ನಿಂತಿದೆ. ಗಾಂಧೀ ಪ್ರಣೀತ ಸ್ವತ್ಛ, ಮಾದಕವ್ಯಸನಮುಕ್ತ, ಗ್ರಾಮಾಭಿವೃದ್ಧಿ ಪರ ಚಿಂತನೆಗಳನ್ನು ಸಾಕಾರಗೊಳಿಸುತ್ತಿರುವ ಡಾ| ಹೆಗ್ಗಡೆಯವರತ್ತ ಸರಕಾರ, ಸಮಾಜ ಆಶಾವಾದದಿಂದ ನೋಡುತ್ತ ಇದೆ’ ಎಂದು ಹೇಳಿದರು.

96,000 ಮಂದಿ ಪಾನಮುಕ್ತರು
ಅಧ್ಯಕ್ಷತೆ ವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಬ್ರಿಟಿಷರು ಬಡಾಜನರ ಜತೆಗಿದ್ದರೆ ಗಾಂಧೀಜಿ ಬಡಜನರ ಜತೆಗಿದ್ದರು, ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕನ್ನು ಅರಳಿಸಬೇಕೆಂಬ ಕನಸು ಕಂಡಿದ್ದರು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಅದೇ ಆದರ್ಶದಲ್ಲಿ ನಡೆದುಬಂದಿದೆ. ಮದ್ಯವ್ಯಸನಮುಕ್ತ ಸಮಾಜ ನಿರ್ಮಾಣದ ಸಂಕಲ್ಪದಲ್ಲಿ ಇದುವರೆಗೆ 1,390 ಶಿಬಿರಗಳನ್ನು ಏರ್ಪಡಿಸಲಾಗಿದ್ದು 96,000 ಮಂದಿ ಪಾನಮುಕ್ತರಾಗಿದ್ದಾರೆ, ಉಜಿರೆಯಲ್ಲಿ ಇದಕ್ಕಾಗಿಯೇ ಶಾಶ್ವತ ಕೇಂದ್ರವನ್ನು ನಡೆಸಲಾಗುತ್ತಿದೆ. 4,600 ನವಜೀವನ ಸಮಿತಿಗಳನ್ನು ರೂಪಿಸಲಾ ಗಿದೆ’ ಎಂದರು ಎಂದು ಹೇಳಿದರು.

ಶಾಸಕ ಉಮಾನಾಥ ಕೋಟ್ಯಾನ್‌ ಅವರು, ಪಾನವ್ಯಸನದ ಕುಟುಂಬದ ಕಷ್ಟ, ಅವಮಾನಕರ ಸ್ಥಿತಿಯ ಸ್ವಾನುಭವ ವಿವರಿಸಿ ಮದ್ಯವರ್ಜನ, ಪರಿಶ್ರಮದ ಬದುಕಿನ ಪಾಠ ಕಲಿಸುವ ಯೋಜನೆಯ ಕಾರ್ಯ ಮನೆ ಉಳಿಸುವ ಕಾರ್ಯ, ದೇವಸ್ಥಾನ ಕಟ್ಟಿದಷ್ಟೇ ಪುಣ್ಯಪ್ರದ’ ಎಂದರು.

ಧರ್ಮಸ್ಥಳದ ಡಿ. ಸುರೇಂದ್ರ ಕುಮಾರ್‌, ಮಾಜಿ ಸಚಿವ ಕೆ. ಅಭಯಚಂದ್ರ, ಕೆ. ಅಮರನಾಥ ಶೆಟ್ಟಿ, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ವಿ. ರಾಮಸ್ವಾಮಿ ಮುಖ್ಯ ಅತಿಥಿಗಳಾಗಿದ್ದರು. ಚೌಟರ ಅರಮನೆ ಕುಲದೀಪ ಎಂ., ಶಿರ್ತಾಡಿ ಸಂಪತ್‌ ಸಾಮ್ರಾಜ್ಯ, ಜನಜಾಗೃತಿ ಉಡುಪಿ ಜಿಲ್ಲಾಧ್ಯಕ್ಷ ನವೀನ್‌ ಅಮೀನ್‌, ಮುಂಬಯಿಯ ಆರ್‌. ಹೆಬ್ಬಳ್ಳಿ, ಸಂಪನ್ಮೂಲ ವ್ಯಕ್ತಿ ವಿವೇಕ್‌ ವಿನ್ಸೆಂಟ್‌ ಪಾಯಸ್‌ ವೇದಿಕೆಯಲ್ಲಿದ್ದರು.

ಕಾರ್ಕಳ ಮೂಡುಬಿದಿರೆ ಜನಜಾಗೃತಿ ವೇದಿಕೆ ಅಧ್ಯಕ್ಷ ಸುಭಾಶ್ಚಂದ್ರ ಚೌಟ ಸ್ವಾಗತಿಸಿ, ಮೂಡುಬಿದಿರೆ ತಾಲೂಕು ಯೋಜನಾಧಿಕಾರಿ ನಾರಾಯಣ ಶೆಟ್ಟಿ ವಂದಿಸಿದರು. ಕಾರ್ಕಳ ತಾಲೂಕು ಯೋಜನಾಧಿಕಾರಿ ಭಾಸ್ಕರ ವಿ. ಹಾಗೂ ಉದಯ ಹೆಗ್ಡೆ ನಿರೂಪಿಸಿದರು.

ಜಾಗೃತಿ ಅಣ್ಣ, ಜಾಗೃತಿ ಮಿತ್ರ ಪುರಸ್ಕಾರ
ತಾವು ಮದ್ಯವ್ಯಸನಮುಕ್ತರಾಗಿ, ಇನ್ನೂ 50 ಮಂದಿಯನ್ನು ವ್ಯಸನಮುಕ್ತರನ್ನಾಗಿಸಿದ ಮೂಡುಬಿದಿರೆ ಪೇಪರ್‌ಮಿಲ್‌ ಭಾಸ್ಕರ, ಕಾರ್ಕಳ ಬಜಗೋಳಿಯ ನಾರಾಯಣ ಪೂಜಾರಿ, ಹಾಲಾಡಿಯ ಬಸವ ಅವರಿಗೆ “ಜಾಗೃತಿ ಅಣ್ಣ’ ಪ್ರಶಸ್ತಿ, 25 ಮಂದಿಯನ್ನು ವ್ಯಸನಮುಕ್ತರನ್ನಾಗಿಸಿದ ಪೆರ್ಡೂರಿನ ಅಶೋಕ ಮಡಿವಾಳ, ಮಂದಾರ್ತಿಯ ಬಸವ, ಹೊಸ್ಮಾರ್‌ನ ರಮೇಶ ಪೂಜಾರಿ, ಅಜೆಕಾರು ಗಣಪತಿ ಆಚಾರ್ಯ, ಹೆಬ್ರಿಯ ಸುಕೇಶ್‌, ಕಾರ್ಕಳ ನಗರದ ನೀಲಾಧರ ಶೆಟ್ಟಿಗಾರ್‌, ಕೋಟೇಶ್ವರದ ಜಗನ್ನಾಥ, ಬೈಂದೂರು ಚಿತ್ತೂರಿನ ಚಂದ್ರ ಆಚಾರಿ ಇವರಿಗೆ “ಜಾಗೃತಿ ಮಿತ್ರ’ ಪ್ರಶಸ್ತಿ ನೀಡಿ ಡಾ| ಹೆಗ್ಗಡೆಯವರು ಆಶೀರ್ವದಿಸಿದರು.

ಹೆಗ್ಗಡೆ ಸಾಕ್ಷಿಯಾಗಿ ಪ್ರಮಾಣ!
“10 ವರ್ಷಗಳ ಹಿಂದೆ ವಿಧಾನಸಭೆಯಲ್ಲಿ ನಾನು “ಸಂವಿಧಾನಕ್ಕೆ ಬದ್ಧನಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಸಾಕ್ಷಿಯಾಗಿ’ ಪ್ರಮಾಣವಚನ ಸ್ವೀಕರಿಸಿದ್ದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಈ ಸಂದರ್ಭ ಸ್ಮರಿಸಿಕೊಂಡರು.

ಮಾಸಿಕ 600 ರೂ. ದುಡಿಯುತ್ತಿದ್ದ ನಾನು ರುಡ್‌ಸೆಟ್‌ನಿಂದಾಗಿ ಸ್ವದ್ಯೋಗ ಸ್ಥಾಪಿಸಿ ಇಂದು ವಾರ್ಷಿಕ 100 ಕೋಟಿ ರೂ. ವ್ಯವಹಾರ ಮಾಡುವಂತಾಗಿದೆ
 - ರಾಮಸ್ವಾಮಿ, ರಾಜ್ಯಾಧ್ಯಕ್ಷರು, ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.