ಸಾಗರಮಾಲಾದಿಂದ ಬಂದರುಗಳ ಸಾಮರ್ಥ್ಯ ವರ್ಧನೆ: ಸಚಿವ ಸರ್ಬಾನಂದ ಸೋನೊವಾಲ್‌


Team Udayavani, Oct 14, 2022, 6:09 AM IST

ಸಾಗರಮಾಲಾದಿಂದ ಬಂದರುಗಳ ಸಾಮರ್ಥ್ಯ ವರ್ಧನೆ: ಸಚಿವ ಸರ್ಬಾನಂದ ಸೋನೊವಾಲ್‌

ಮಂಗಳೂರು: ದೇಶದೊಳಗಿನ ಎಲ್ಲ ಬಂದರುಗಳ ಸಾಮರ್ಥ್ಯ ಸುಧಾರಣೆ ಗಾಗಿ ಸಾಗರಮಾಲಾದಿಂದ 800ಕ್ಕೂ ಅಧಿಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದ್ದು ಹಂತ ಹಂತವಾಗಿ ಅವುಗಳನ್ನು ಪೂರ್ಣಗೊಳಿಸಲಾಗುತ್ತಿದೆ ಎಂದು ಕೇಂದ್ರ ನೌಕಾಯಾನ ಸಚಿವ ಸರ್ಬಾನಂದ ಸೋನೊವಾಲ್‌ ಹೇಳಿದ್ದಾರೆ.

ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಮರ್ಮಗೋವಾ ಬಂದರು ಪ್ರಾಧಿಕಾರಗಳ ವಿವಿಧ ಯೋಜನೆಗಳ ಶಿಲಾನ್ಯಾಸ ಹಾಗೂ ಉದ್ಘಾಟನೆಯನ್ನು ವರ್ಚುವಲ್‌ ವೇದಿಕೆಯಲ್ಲಿ ಗುರುವಾರ ನೆರವೇರಿಸಿ ಅವರು ಮಾತನಾಡಿದರು.

ದೇಶದ ಅಭಿವೃದ್ಧಿಯಲ್ಲಿ ಬಂದರುಗಳ ಕೊಡುಗೆಯನ್ನು ಗಮನದಲ್ಲಿರಿಸಿ ಪ್ರಧಾನಿ ಮೋದಿಯವರು ಹಾಕಿಕೊಂಡ ಸಾಗರಮಾಲಾ ಕಾರ್ಯಕ್ರಮದಡಿ 802 ಯೋಜನೆಗಳು ನಡೆಯುತ್ತಿವೆ. ಇದರಲ್ಲಿ 200ಕ್ಕೂ ಅಧಿಕ ಯೋಜನೆಗಳು ಪೂರ್ಣಗೊಂಡಿವೆ. ಬಂದರುಗಳ ಆಧುನೀಕರಣ ನಡೆಯುತ್ತಿದೆ. ಬಂದರು ಮುಖೀ ಕೈಗಾರಿಕೀಕರಣ, ಬಂದರುಮುಖೀ ಸಂಪರ್ಕ ವ್ಯವಸ್ಥೆ, ಕರಾವಳಿ ಸಮುದಾಯ ಅಭಿವೃದ್ಧಿ, ಕರಾವಳಿ ನೌಕಾಯಾನ ಮತ್ತು ಜಲಮಾರ್ಗಗಳ ಅಭಿವೃದ್ಧಿ ಹಂತಹಂತವಾಗಿ ನಡೆಯುತ್ತಿದೆ ಎಂದರು.

ಸರಕು ನಿರ್ವಹಣೆ ದಿನದಿಂದ ದಿನಕ್ಕೆ ಏರುತ್ತಿದೆ, ಅತ್ಯಾಧುನಿಕ ತಂತ್ರಜ್ಞಾನದ ಅಳವಡಿಕೆಯಿಂದಾಗಿ ವಿಶ್ವದ ದೊಡ್ಡ ಬಂದರುಗಳ ಜತೆ ಕೂಡ ನಮ್ಮ ದೇಶದ ಬಂದರುಗಳು ಈಗ ಪೈಪೋಟಿಯೊಡ್ಡುತ್ತಿವೆ ಎಂದ ಅವರು ವಿಕಾಸದ ವೇಗ ಹೆಚ್ಚಿಸಲು ಎಲ್ಲರ ಸಹಯೋಗ ಬೇಕು ಎಂದರು.

ಕೇಂದ್ರ ಸಚಿವ ಶ್ರೀಪಾದ ಯಸೊÕ ನಾಯಕ್‌, ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌, ರಾಜ್ಯ ಸಭಾ ಸದಸ್ಯ ವಿಜಯ್‌ ತೆಂಡುಲ್ಕರ್‌ ಮತ್ತಿತರರಿದ್ದರು. ಎನ್‌ಎಂಪಿಎ ಹಾಗೂ ಮರ್ಮಗೋವಾ ಬಂದರು ಪ್ರಾಧಿಕಾರದ ಚೇರ್ಮನ್‌ ಡಾ| ಎ.ವಿ. ರಮಣ ಸ್ವಾಗತಿಸಿದರು.

ರಸ್ತೆ ಸುಧಾರಣೆ,  ಟ್ರಕ್‌ ಟರ್ಮಿನಲ್‌:

ಬಂದರು ಪ್ರಾಧಿಕಾರದ ಮುಖ್ಯ ಗೇಟ್‌ನಿಂದ ಕುದುರೆಮುಖ ಜಂಕ್ಷನ್‌ ವರೆಗೆ 700 ಮೀಟರ್‌ ಉದ್ದಕ್ಕೆ ಇದ್ದ ಸರ್ವಿಸ್‌ ರಸ್ತೆಯನ್ನು ಅಗಲಗೊಳಿಸಿ, ಕಾಂಕ್ರೀಟ್‌ ಹಾಕುವ 3.75 ಕೋಟ ರೂ. ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು. ಕಾಮಗಾರಿಯು 2023ರ ಫೆಬ್ರವರಿಯಲ್ಲಿ ಪೂರ್ತಿಗೊಳ್ಳಲಿದೆ.

ಕಸ್ಟಂಸ್‌ ಹೌಸ್‌ ಸಮೀಪ ಈಗಿರುವ ಟ್ರಕ್‌ ಟರ್ಮಿನಲ್‌ ಅನ್ನು 3.71 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಮಟ್ಟಕ್ಕೆ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು. 200ರಷ್ಟು ಟ್ರಕ್‌ಗಳನ್ನು ಇಲ್ಲಿ ಪಾರ್ಕ್‌ ಮಾಡುವ ಸೌಲಭ್ಯ ಇರಲಿದೆ.

ಮಲ್ಯಗೇಟ್‌ ಲೋಕಾರ್ಪಣೆ :

ಮುಖ್ಯಪ್ರವೇಶ ದ್ವಾರವಾದ ಯು.ಎಸ್‌.ಮಲ್ಯ ಗೇಟ್‌ ಅನ್ನು ದ್ವಿಪಥದಿಂದ ಚತುಷ್ಪಥವಾಗಿ ಪರಿವರ್ತಿಸಲಾಗಿದ್ದು 3.30 ಕೋಟಿ. ರೂ ವೆಚ್ಚದಲ್ಲಿ ಸುಧಾರಣೆಗೊಳಪಡಿಸಲಾಗಿದೆ. ಅಲ್ಲದೆ ಪರಿಸರ ನಿರ್ವಹಣೆ ಉದ್ದೇಶದೊಂದಿಗೆ 50 ಲಕ್ಷ ರೂ. ವೆಚ್ಚದಲ್ಲಿ ತ್ಯಾಜ್ಯ ನಿರ್ವಹಣ ಘಟಕವನ್ನೂ ನಿರ್ಮಿಸಲಾಗಿದೆ.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.