ಕಾಪು ಶಾಸಕ ಲಾಲಾಜಿ ಮೆಂಡನ್ ಗೆ ಸಚಿವ ಸ್ಥಾನ ನೀಡಲು ಮೀನುಗಾರರ ವೇದಿಕೆ ಆಗ್ರಹ
Team Udayavani, Nov 20, 2020, 1:05 PM IST
ಮಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಅವರಿಗೆ ಸ್ಥಾನ ನೀಡಬೇಕೆಂದು ಮಂಗಳೂರಿನ ಮೀನುಗಾರರ ವೇದಿಕೆ ಆಗ್ರಹಿಸಿದೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ.ಕ ಮತ್ತು ಉಡುಪಿ ನಾಡದೋಣಿ ಮೀನುಗಾರರ ಒಕ್ಕೂಟದ ಅಧ್ಯಕ್ಷ ಶರತ್ ಗುಡ್ಡೆಕೊಪ್ಲ, ಮೂರು ಬಾರಿ ಶಾಸಕರಾಗಿ ಅನುಭವ ಹೊಂದಿರುವ ಅನುಭವಿ ಲಾಲಾಜಿ ಮೆಂಡನ್ ಅವರಿಗೆ ಅರ್ಹವಾಗಿ ಸಚಿವ ಸ್ಥಾನ ದೊರೆಯಲೇಬೇಕು ಎಂದರು.
ಗಂಗಾಮತ/ಮೊಗವೀರ ಸಮುದಾಯಕ್ಕೆ ಸೇರಿದ 39 ವಿವಿಧ ಮೀನುಗಾರರ ಸಮುದಾಯದ ಕರ್ನಾಟಕದಲ್ಲಿ 80 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಮೊಗವೀರ ಸಮುದಾಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಮೀನುಗಾರರ ಹಲವು ಬೇಡಿಕೆಗಳು ಇನ್ನೂ ಈಡೇರಿಲ್ಲ. ನಮ್ಮ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯಬೇಕಾದರೆ ಲಾಲಾಜಿ ಮೆಂಡನ್ ಅವರು ಸಚಿವರಾಗಬೇಕು. ಈ ಹಿಂದೆಯೂ ಮೆಂಡನ್ ಅವರಿಗೆ ಸ್ಥಾನ ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದ್ದೆವು. ಆದರೆ ದೊರೆತಿರಲಿಲ್ಲ. ಈ ಬಾರಿಯಾದರೂ ಸಚಿವ ಸ್ಥಾನ ನೀಡಬೇಕು ಎಂದವರು ಹೇಳಿದರು.
ಇದನ್ನೂ ಓದಿ:ಬಸವ ಕಲ್ಯಾಣದಲ್ಲಿ ಗೆಲ್ಲದಿದ್ದರೆ ಬಿಜೆಪಿ ಬಿದ್ದು ಹೋಗುವುದಿಲ್ಲ: ಬಿ.ಸಿ. ಪಾಟೀಲ
ಸುದ್ದಿಗೋಷ್ಠಿಯಲ್ಲಿ ಮೊಗವೀರ ಸಮಾಜದ ಹಿರಿಯ ಮುಖಂಡ ನ್ಯಾಯವಾದಿ, ದಯಾನಾಥ್ ಕೋಟ್ಯಾನ್, ದ.ಕ ಮೊಗವೀರ ಮಹಾಜನ ಸಂಘದ ಮಾಜಿ ಅಧ್ಯಕ್ಷ ನ್ಯಾಯವಾದಿ ಗಂಗಾಧರ ಹೊಸಬೆಟ್ಟು, ಉಪಾಧ್ಯಕ್ಷ ದೇವದಾಸ್ ಬೋಳೂರು, ಮಂಗಳೂರು ಹದಿನಾಲ್ಕು ಪಟ್ನ ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷ ರಾಜೀವ್ ಕಾಂಚನ್ , ಉರ್ವ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿಶ್ಚಂದ್ರ ಕರ್ಕೇರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.