ಮುಚ್ಚಿದ ಶಾಲೆಯನ್ನು ತೆರೆಸಿದ ಶಾಸಕರು: ಪಟ್ಟು ಬಿಡದ ಹೆತ್ತವರು

ಹಳೆಯಂಗಡಿಯ ಸರಕಾರಿ ಅನುದಾನಿತ ಯುಬಿಎಂಸಿ ಶಾಲೆ

Team Udayavani, May 31, 2019, 6:07 AM IST

3005HALE-3

ಹಳೆಯಂಗಡಿ: ಸುಮಾ ರು 180 ವರ್ಷಗಳ ಇತಿಹಾಸ ಇರುವ ಹಳೆಯಂಗಡಿಯ ಸರಕಾರಿ ಅನು ದಾನಿತ ಯುಬಿಎಂಸಿ ಶಾಲೆಗೆ ಬೀಗ ಹಾಕಿರುವುದನ್ನು ಶಾಸಕ ಉಮಾನಾಥ ಕೋಟ್ಯಾನ್‌ ಅವರ ನಿರ್ದೇಶನದಂತೆ ಗುರುವಾರ ತೆರವು ಮಾಡಿ ಸಮಸ್ಯೆಯನ್ನು ಬಗೆಹರಿಸಲು ಕ್ರಮಕೈಗೊಳ್ಳಲಾಯಿತು. ಈ ಕುರಿತು ಮೇ 30 ಉದಯವಾಣಿ ಸುದಿನಲ್ಲಿ ವಿಶೇಷ ವರದಿಯ ಮೂಲಕ ಬೆಳಕು ಚೆಲ್ಲಲಾಗಿತ್ತು.

ಬುಧವಾರ ಶಾಲಾ ಆರಂಭೋತ್ಸ ವದಂದು ಶಾಲೆಗೆ ಬಂದಿದ್ದ ಹೆತ್ತವರಿಗೆ ಮತ್ತು ಮಕ್ಕಳಿಗೆ ಬೀಗ ಜಡಿದು ಸ್ವಾಗತಿಸಿ, ಏಕಾಏಕೀ ಶಾಲೆಗೆ ಬರಬೇಡಿ ಎಂದು ಸೂಚಿಸಿದ್ದರಿಂದ ಆಕ್ರೋಶಗೊಂಡ ಹೆತ್ತವರು, ನಿರಂತರ ಪ್ರಯತ್ನದಿಂದ ಕಳೆದ ಒಂದು ವರ್ಷದ ಹೋರಾಟಕ್ಕೆ ತಾರ್ಕಿಕ ಅಂತ್ಯವನ್ನು ಶಾಸಕರ ಸಮ್ಮುಖದಲ್ಲಿ ಕಂಡಂತಾಗಿದೆ.

ಗುರುವಾರ ಸ್ಥಳಕ್ಕೆ ಆಗಮಿಸಿದ ಶಾಸಕ ಉಮಾನಾಥ ಕೋಟ್ಯಾನ್‌ ಅವರಲ್ಲಿ ಹೆತ್ತವರು, ಶಾಲೆಯನ್ನು ಉಳಿಸಲು ಹೋರಾಟ ನಡೆಸುತ್ತಿರುವ ನಂದಾ ಪಾçಯಸ್‌ ಅವರು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವನ್ನು ವಿವರಿಸಿದರು. ಸುಮಾರು 50 ಮಕ್ಕಳಿದ್ದರೂ ಸಹ ಶಿಕ್ಷಕರನ್ನು ನೀಡದಿರುವುದನ್ನು ಪ್ರತಿಭಟಿಸಿದ ಪೋಷಕರ ಮಾತನ್ನು ಆಲಿಸಿ ಶಿಕ್ಷಣ ಸಂಯೋಜಕರಿಗೆ ದೂರವಾಣಿಯ ಮೂಲಕ ಮಾತನಾಡಿದ ಶಾಸಕರು, ಇಂದೇ ಶಿಕ್ಷಕರನ್ನು ನೇಮಿ ಸಬೇಕು ಎಂದರು.

ಆಡಳಿತ ಮಂಡಳಿಯ ಪರವಾಗಿ ಹಳೆಯಂಗಡಿ ಯುಬಿಎಂಸಿ ಚರ್ಚ್‌ನ ಸಭಾ ಪಾಲಕ ವಂ| ವಿನಯ್‌ಲಾಲ್‌ ಬಂಗೇರ ಅವರೊಂದಿಗೆ ಶಾಸಕರು ಮಾತನಾಡಿ, ಇಲಾಖೆಯಿಂದ ಶಿಕ್ಷಕರ ನೇಮಕವಾಗುತ್ತದೆ. ಶಾಲೆಯನ್ನು ಕೂಡಲೇ ತೆರೆದು ನೂತನ ದಾಖಲಾತಿಯ ಪ್ರಕ್ರಿಯೆಗೆ ಚಾಲನೆ ನೀಡಲು ಸಹಕರಿಸಬೇಕು ಎಂದು ವಿನಂತಿಸಿದ ನಂತರ ಆಡಳಿತ ಮಂಡಳಿಯ ಪರವಾಗಿ ಐರಿನ್‌ ಕರ್ಕಡ ಅವರು ಶಾಲೆಯ ಬೀಗವನ್ನು ತೆರೆದರು.

ಜಿ.ಪಂ. ಸದಸ್ಯ ವಿನೋದ್‌ಕುಮಾರ್‌ ಬೊಳ್ಳೂರು ಹಾಗೂ ತಾ. ಪಂ. ಸದಸ್ಯ ಜೀವನ್‌ ಪ್ರಕಾಶ್‌ ಕಾಮೆರೊಟ್ಟು ಅವರಿಗೆ ಮುಂದಿನ ಹಂತದ ಜವಾಬ್ದಾರಿಯನ್ನು ಹಳೇ ವಿದ್ಯಾರ್ಥಿಯ ನೆಲೆಯ ಜತೆಗೆ ಜನಪ್ರತಿನಿಧಿಯಾಗಿ ಶಾಲೆಯ ಬಗ್ಗೆ ಚಿಂತನೆ ನಡೆಸಲು ಶಾಸಕರು ಸೂಚಿಸಿದರು.

ಪತ್ರಿಕೆಯೊಂದಿಗೆ ಮಾತನಾಡಿದ, ಶಾಸಕ ಉಮಾನಾಥ ಕೋಟ್ಯಾನ್‌ ಎಂದರು.ಹಳೆಯಂಗಡಿ ಗ್ರಾ.ಪಂ.ನ ಸದಸ್ಯರಾದ ವಿನೋದ್‌ಕುಮಾರ್‌ ಕೊಳುವೈಲು, ಅಶೋಕ್‌ ಸಸಿಹಿತ್ಲು, ಚಿತ್ರಾ ಸುಕೇಶ್‌ ಸಸಿಹಿತ್ಲು, ಸಾಮಾಜಿಕ ಕಾರ್ಯಕರ್ತ ಅದ್ದಿ ಬೊಳ್ಳೂರು, ಹಳೆಯಂಗಡಿ ಪಿಸಿಎ ಬ್ಯಾಂಕ್‌ನ ನಿರ್ದೇಶಕ ಹಿಮಕರ್‌ ಕದಿಕೆ, ಮೀನುಗಾರಿಕೆ ಪ್ರಕೋಷ್ಠದ ಶೋಭೇಂದ್ರ ಸಸಿಹಿತ್ಲು, ಅನಂದ ಸುವರ್ಣ ಸಸಿಹಿತ್ಲು, ಸೂರ್ಯ ಕಾಂಚನ್‌ ಸಸಿಹಿತ್ಲು, ಎಚ್‌. ರಾಮಚಂದ್ರ ಶೆಣೈ, ಮನೋಜ್‌ಕುಮಾರ್‌, ಹರೀಶ್‌, ರಾಜೇಶ್‌, ಮಹಾಬಲ ಅಂಚನ್‌, ಶಾಲಾ ಪೋಷಕರು, ಉಪಸ್ಥಿತರಿದ್ದರು.

 ಹೋರಾಟ ನಿರಂತರ
ಶಾಲೆಯನ್ನು ಪುನರಾರಂಭಿಸಲು ನಡೆಸಿದ ಹೋರಾಟ ಇನ್ನು ಶಾಲಾಭಿವೃದ್ಧಿಗೆ ಹೋರಾಟ ಮುಂದುವರಿಸಲಾಗುವುದು. ಹೆತ್ತವರು, ಹಳೇ ವಿದ್ಯಾರ್ಥಿಗಳು, ವಿವಿಧ ಎನ್‌ಜಿಓ ಹಾಗೂ ಖಾಸಗಿ ಕಂಪೆನಿಗಳ ಮೂಲಕ ಆರ್ಥಿಕ ಸಂಪನ್ಮೂಲವನ್ನು ಸಂಗ್ರಹಿಸಿ ಭದ್ರ ಬುನಾದಿಯನ್ನು ಹಾಕುತ್ತೇವೆ, ಚರ್ಚ್‌ನ ಬಿಷಪ್‌, ಸಭಾಪಾಲಕರು, ಶಾಸಕರು ಸಹಿತ ಜನಪ್ರತಿನಿಧಿಗಳ ಸಹಕಾರ ಮೆಚ್ಚುವಂತದ್ದು.
– ನಂದಾ ಪಾಯಸ್‌, ಹೋರಾಟಗಾರರು

 ಶಾಲೆಯ ಅಭಿವೃದ್ಧಿಗೆ ಸಹಕರಿಸಿ
ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ನಾಲ್ಕು ಮಂದಿ ಗೌರವ ಶಿಕ್ಷಕಿಯರೇ ಮುಂದುವರಿಯಲಿದ್ದು. ದಾಖಲಾತಿ ಪ್ರಕ್ರಿಯೆಯನ್ನು ಮುಂದಿನ ನೂತನ ಶಿಕ್ಷಕರ ಸಮ್ಮಿಖದಲ್ಲಿ ನಡೆಯಲಿದೆ. ಹೆತ್ತವರ,ಶಾಲೆಯ ಹಳೆ ವಿದ್ಯಾರ್ಥಿಗಳು ಈ ಶಾಲೆಯ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು, ಇಲಾಖೆಯಿಂದ ಬೇಕಾದ ಸೌಲಭ್ಯವನ್ನು ಮಂಜೂರು ಮಾಡುವ ಜವಾಬ್ದಾರಿ ನನ್ನದಾಗಿದೆ .
– ಉಮಾನಾಥ ಕೋಟ್ಯಾನ್‌,ಶಾಸಕ

 ಶಿಕ್ಷಕರ ನೇಮಕ
ಶಾಸಕರ ಸೂಚನೆಯಂತೆ ಶಿಕ್ಷಣ ಸಂಯೋಜಕಿ ಮಂಜುಳಾ, ಸಿಆರ್‌ಪಿ ಕುಸುಮಾ ಅವರು ಶಾಲೆಗೆ ಭೇಟಿ ನೀಡಿದ್ದಾರೆ. ಶಾಲೆಗೆ ಮಂಜುನಾಥ ಕಾಂಬ್ಲಿ ಅವರನ್ನು ಶಿಕ್ಷಕರನ್ನಾಗಿ ನಿಯುಕ್ತಿಗೊಳಿಸಿ ಡಿಡಿಪಿಐ ಆದೇಶಿಸಿದ್ದಾರೆ.ಶಾಲೆಯ ಅಭಿವೃದ್ಧಿಯನ್ನು ಎಲ್ಲರೊಂದಿಗೆ ನಡೆಸಲಾಗುವುದು.
 - ವಿನೋದ್‌ಕುಮಾರ್‌ ಬೊಳ್ಳೂರು,ಜಿ.ಪಂ.ಸದಸ್ಯರು

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.