Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ


Team Udayavani, Apr 26, 2024, 12:13 AM IST

1-MB

ಮಂಗಳೂರು: ನೋಟು ಅಮಾನ್ಯಿàಕರಣ ಮಾಡಿದ ಸಂದರ್ಭ ಅದೆಷ್ಟೋ ಮಹಿಳೆಯರು ತಮ್ಮ ಮಂಗಳಸೂತ್ರವನ್ನೇ ಅಡವಿಟ್ಟಿದ್ದರು. ಆಗ ಪ್ರಧಾನಿ ಮೋದಿ ಮೌನವಾಗಿದ್ದು ಯಾಕೆ? ಸಾಲದ ಸುಳಿಯಲ್ಲಿ ಸಿಲುಕಿರುವ ರೈತನ ಪತ್ನಿ ಮಂಗಳಸೂತ್ರವನ್ನು ಮಾರಬೇಕಾದಾಗ ಪ್ರಧಾನಿ ಎಲ್ಲಿದ್ದರು? ಮಣಿಪುರದಲ್ಲಿ ಮಹಿಳೆಯನ್ನು ಬೆತ್ತಲೆಯಾಗಿ ಮೆರವಣಿಗೆ ನಡೆಸಿದ ಸಂದರ್ಭ ಏನನ್ನೂ ಹೇಳದ ಪ್ರಧಾನಿ ಅವರು ಈಗ ಮಾಂಗಲ್ಯವನ್ನು ಕಾಂಗ್ರೆಸ್‌ ಕಿತ್ತುಕೊಳ್ಳುತ್ತಿದೆ ಎಂಬ ಕೀಳುಮಟ್ಟದ ಹೇಳಿಕೆ ನೀಡುತ್ತಿರುವುದು ಖಂಡನೀಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.

ಮಂಗಳೂರಿನ ವಿವಿಧ ಕಡೆಗಳಲ್ಲಿ ಗುರುವಾರ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಆರ್‌. ಪೂಜಾರಿ ಅವರ ಪರವಾಗಿ ಮನೆ ಮನೆ ಪ್ರಚಾರ ಕೈಗೊಂಡ ಸಂದರ್ಭದಲ್ಲಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಚುನಾವಣ ಭಾಷಣದಲ್ಲಿ ಹೇಳಿದ ಹೇಳಿಕೆಗಳು ಗೌರವಾನ್ವಿತ ಪ್ರಧಾನ ಮಂತ್ರಿ ಸ್ಥಾನಕ್ಕೆ ಯೋಗ್ಯವಾಗಿರುವುದಿಲ್ಲ ಹಾಗೂ ಅಂತಹ ಕೀಳುಮಟ್ಟದ ಹೇಳಿಕೆಗಳು ದೇಶದಲ್ಲಿರುವ ಧರ್ಮಗಳ ನಡುವೆ, ಜಾತಿಗಳ ನಡುವೆ ವಿಷ ಬೀಜವನ್ನು ಬಿತ್ತಿರುತ್ತದೆ ಎಂದರು.

ಮೋದಿ ಸರಕಾರ ಮೌನ ಯಾಕೆ?
ಕರ್ನಾಟಕದಲ್ಲಿ ಮುಸಲ್ಮಾನರಿಗೆ ನೀಡಿದ ಮೀಸಲಾತಿಯನ್ನು ಸ್ವಾತಂತ್ರ್ಯ ಪೂರ್ವದ ನಾಲ್ವಡಿ ಕೃಷ್ಣರಾಜ ಒಡೆಯರ್‌ ನೇಮಿಸಿದ ಮಿಲ್ಲರ್‌ ಆಯೋಗದಿಂದ ಹಿಡಿದು ಸ್ವಾತಂತ್ರ್ಯಾ ನಂತರದ ಚಿನ್ನಪ್ಪರೆಡ್ಡಿ, ವೆಂಕಟಸ್ವಾಮಿ ಆಯೋಗದ ಆದಿಯಾಗಿ ಇಂದಿನ ಎಲ್ಲ ಆಯೋಗಗಳು ಮುಸ್ಲಿಮರನ್ನು ಹಿಂದುಳಿದ ವರ್ಗಗಳು ಎಂದೇ ಕರ್ನಾಟಕದಲ್ಲಿ ಗುರುತಿಸಲಾಗಿದೆ. ಕರ್ನಾಟಕದಲ್ಲಿ ಮುಸಲ್ಮಾನರನ್ನು 2ಬಿ ಕೆಟಗರಿಯಾದ ಹಿಂದುಳಿದ ವರ್ಗದವರೊಂದಿಗೆ ಸೇರಿಸಿಕೊಂಡು 1974ರ ಎಲ್‌.ಜಿ. ಹಾವನೂರು ಅವರ ವರದಿಯಿಂದ ಇದು ಕಳೆದ 3 ದಶಕಗಳಿಂದ ಇದೆ. ಕಳೆದ ಸಲ ಬಿಜೆಪಿ ಸರಕಾರವಿರುವಾಗ ಅಥವಾ ಕಳೆದ 10 ವರ್ಷದಿಂದ ಮೋದಿ ಸರಕಾರ ಇದರ ಬಗ್ಗೆ ಯಾಕೆ ಚಕಾರ ಎತ್ತಲಿಲ್ಲ ಅಥವಾ ಕೋರ್ಟ್‌ನಲ್ಲಿ ಸಹ ಪ್ರಶ್ನೆ ಮಾಡಲಿಲ್ಲ ಎಂದು ಅವರು ಪ್ರಶ್ನಿಸಿದರು.

ಮೀಸಲಾತಿ; ಕೇಂದ್ರ ಸರಕಾರ ನಿರಾಕರಣೆ
ಧರ್ಮವನ್ನು ಒಡೆದು ಮತ ಗಳಿಸುವ ಉದ್ದೇಶದಿಂದ ಕಳೆದ ಸಲ ಬಸವರಾಜ ಬೊಮ್ಮಾಯಿ ಅವರ ಬಿಜೆಪಿ ಸರಕಾರ ಮುಸಲ್ಮಾನರಿಗೆ ಮೀಸಲಾತಿಯನ್ನು ತಿದ್ದುಪಡಿ ಮಾಡಿದೆ. ಆದರೆ ಸುಪ್ರೀಂ ಕೋರ್ಟ್‌ ಅದನ್ನು ಅನುಷ್ಠಾನ ಮಾಡಲು ಬಿಡಲಿಲ್ಲ. ಕಳೆದ ಬಿಜೆಪಿ ಸರಕಾರ ಎಸ್‌ಸಿ ರಿಸರ್ವೇಶನ್‌ ಶೇ. 15ರಿಂದ 17ರ ವರೆಗೆ, ಎಸ್‌ಟಿಯನ್ನು ಶೇ. 3ರಿಂದ 5ರ ವ ರೆ ಗೆ ಏರಿಸಿತ್ತು. ಆದರೆ ಮಾರ್ಚ್‌ 14ರಂದು ಕೇಂದ್ರ ಸಚಿವ ನಾರಾಯಣ ಸ್ವಾಮಿ ಅವರು ನಮಗೆ ರಾಜ್ಯದಿಂದ ಯಾವುದೇ ರೀತಿಯ ಮನವಿ ಬಂದಿಲ್ಲ ಎಂದು ಲೋಕಸಭೆಯಲ್ಲಿ ತಿಳಿಸಿದ್ದಾರೆ ಎಂದರು.

ರಾಜ್ಯದಿಂದ ಗ್ಯಾರಂಟಿ; ಕೇಂದ್ರದಿಂದ ಚೊಂಬು
ಕಳೆದ 10 ವರ್ಷಗಳಿಂದ ಪ್ರಧಾನಿಯವರು ಭರವಸೆಗಳನ್ನು ನೀಡಿ ಯಾವುದನ್ನೂ ನಿರ್ವಹಿಸದೆ ಭಾರತೀಯ ಜನತೆಗೆ ಕೇವಲ ಚೊಂಬು ನೀಡಿದ್ದಾರೆ. ಆದರೆ ಕರ್ನಾಟಕ ಸರಕಾರದ ಗ್ಯಾರಂಟಿಗಳನ್ನು ನಂಬಿದ ಜನರು ಅದರಲ್ಲೂ ಕರಾವಳಿ ಮತ್ತು ಮಲೆನಾಡಿನ ಪ್ರದೇಶದಲ್ಲಿರುವ ಜನರು ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಕರ್ನಾಟಕದಲ್ಲಿ ಅತ್ಯಧಿಕ ಸ್ಥಾನ ನೀಡುವ ಎಲ್ಲ ಸಾಧ್ಯತೆ ಇದೆ ಎಂದು ಮಂಜುನಾಥ ಭಂಡಾರಿ ಅವರು ಮತಯಾಚನೆಯ ಸಂದರ್ಭ ತಿಳಿಸಿದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.