ಮೋದಿ ಹೃದಯಹೀನ ಪ್ರಧಾನಿ: ಕುಮಾರಸ್ವಾಮಿ


Team Udayavani, Apr 8, 2019, 6:07 AM IST

IMG-20190407-WA0044

ಸುಳ್ಯ: ರೈತರ ಸಾಲ ಮನ್ನಾ ಪಾಪದ ಕೆಲಸ ಎಂದು ಹೇಳುವ ನರೇಂದ್ರ ಮೋದಿ ಹೃದಯಹೀನ ಪ್ರಧಾನಿ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು.

ಸುಳ್ಯದ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ರವಿವಾರ ದ.ಕ.ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಿಥುನ್‌ ರೈ ಅವರ ಪರ ಪ್ರಚಾರ ಸಮಾವೇಶದಲ್ಲಿ ಅವರು ಮಾತನಾಡಿದರು.

ಕರಾವಳಿ ಭಾಗದಲ್ಲಿ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಈಡಾದಾಗ ಮೋದಿ ಸರಕಾರ ಸಹಾಯ ಮಾಡಿಲ್ಲ. ಗೋರಖ್‌ಸಿಂಗ್‌ ವರದಿ ಜಾರಿ ಮಾಡಿಲ್ಲ. ಆದರೆ ರಾಜ್ಯದ ಮೈತ್ರಿ ಸರಕಾರ 44 ಲಕ್ಷ ರೈತರ ಸಾಲ ಮನ್ನಾ ಮಾಡಿ, ಈಗಾಗಲೇ 15,58,000 ರೂ. ಬಿಡುಗಡೆ ಮಾಡುವ ಮೂಲಕ ನೆರವು ನೀಡಿದೆ ಎಂದರು.

ಇಸ್ರೇಲ್‌ ಪದ್ಧತಿ ಕೃಷಿಗಾಗಿ 450 ಕೋ.ರೂ. ಬಿಡುಗಡೆ, ಸರಕಾರಿ ಪ್ರಾಥಮಿಕ, ಹೈಸ್ಕೂಲು, ಕಾಲೇಜುಗಳಿಗೆ ಕಟ್ಟಡ ಒದಗಿಸಲು 1,200 ಕೋ.ರೂ. ಅನುದಾನ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಅನಾರೋಗ್ಯ ಪೀಡಿತ ಫಲಾನುಭವಿಗೆ ಒಟ್ಟು 85 ಕೋ.ರೂ. ನೆರವು ಮೊದಲಾದ ನೂರಾರು ಕಾರ್ಯಕ್ರಮಗಳು ನಮ್ಮ ಸರಕಾರದ ಸಾಧನೆ ಎಂದರು.

ಸಚಿವ ಯು.ಟಿ. ಖಾದರ್‌ ಮಾತನಾಡಿ, ಕರಾವಳಿ ಭಾಗದಲ್ಲಿ ಅನೇಕ ಸಮಸ್ಯೆಗಳಿದ್ದರೂ ಸಂಸದ ನಳಿನ್‌ ಕುಮಾರ್‌ ಕಟೀಲು ಈ ಬಗ್ಗೆ ಚಕಾರ ಎತ್ತಿಲ್ಲ. ಹಾಗಾಗಿ ಈ ಬಾರಿ ಯುವ ಅಭ್ಯರ್ಥಿ ಮಿಥುನ್‌ ರೈ ಅವರನ್ನು ಜಿಲ್ಲೆಯ ಜನರು ಗೆಲ್ಲಿಸಲಿದ್ದಾರೆ ಎಂದರು.

ಕಾಂಗ್ರೆಸ್‌ ರಾಜ್ಯ ಉಪಾಧ್ಯಕ್ಷ ಪ್ರೊ| ಕೆ.ಇ. ರಾಧಾಕೃಷ್ಣ, ಅಭ್ಯರ್ಥಿ ಮಿಥುನ್‌ ರೈ ಮಾತನಾಡಿದರು.ನಾಯಕರಾದ ಹರೀಶ್‌ ಕುಮಾರ್‌, ಭೋಜೇಗೌಡ, ಅಮರನಾಥ ಶೆಟ್ಟಿ, ಬಿ. ರಮಾನಾಥ ರೈ, ಕಣಚೂರು ಮೋನು ಮೊದಲಾದವರು ಉಪಸ್ಥಿತರಿದ್ದರು. ಭರತ್‌ ಮುಂಡೋಡಿ ಪ್ರಸ್ತಾವನೆಗೈದರು. ಎನ್‌. ಜಯಪ್ರಕಾಶ್‌ ರೈ ಸ್ವಾಗತಿಸಿದರು. ಎಂ.ಬಿ. ಸದಾಶಿವ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.