Moodabidri ;ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿದ ಬಜರಂಗ ದಳ
Team Udayavani, Jun 20, 2023, 7:33 AM IST
ಮೂಡುಬಿದಿರೆ: ಕೆಲ್ಲಪುತ್ತಿಗೆಯಿಂದ ಹೊರಟ ರಿಡ್ಜ್ ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ಇಂದು ಮುಂಜಾನೆ ರಕ್ಷಿಸಿದ ಘಟನೆ ನಡೆದಿದೆ.
ಕೆಲ್ಲಪುತ್ತಿಗೆ ಕಡೆಯಿಂದ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಬಜರಂಗ ದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿದ್ದು ಜಂಟಿ ಕಾರ್ಯಾಚರಣೆ ನಡೆಸುತ್ತ ಬಂದು, ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ. ಗಾರ್ಡನ್ ಬಳಿ ತಡೆದಾಗ ಕಾರಿನಲ್ಲಿದ್ದ ಇಬ್ಬರು ಗೋವು ಕಳ್ಳರು ಕಾರನ್ನು ಮತ್ತು ಮೊಬೈಲ್ ಗಳನ್ನು ಬಿಟ್ಟು ಪರಾರಿಯಾದರು ಎಂದು ತಿಳಿದುಬಂದಿದೆ.
ಕಾರಿನೊಳಗೆ ದನಗಳನ್ನು ಯದ್ವಾತದ್ವಾ ಕಟ್ಟಿಹಾಕಿ ಒತ್ತಡದಲ್ಲಿ ತುಂಬಿಸಿರುವುದು ಕಂಡುಬಂದಿದ್ದು, ಮೊಬೈಲ್ ಸಿಕ್ಕಿರುವುದರಿಂದ ಗೋವು ಕಳ್ಳರ ಪತ್ತೆ ಸಲೀಸಾಗಿ ಆಗಬಹುದೆಂಬ ನಿರೀಕ್ಷೆ ಇದೆ.
ಮೂಡುಬಿದಿರೆಯ ಪೊಲೀಸ್ ಉಪನಿರೀಕ್ಷಕ ಸಿದ್ದಪ್ಪ ಅವರ ಕಾರ್ಯಾಚರಣೆಯಲ್ಲಿ ಬಜರಂಗ ದಳದ ತಾಲೂಕು ಸಂಚಾಲಕ ಅಭಿಲಾಷ್ ಸಹಿತ ಕಾರ್ಯಕರ್ತರು ಸಹಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe; ಗಾಂಜಾ ಸೇವನೆ; ಮೂವರು ವಶಕ್ಕೆ
Multi level parking ಇನ್ನೆಷ್ಟು ವರ್ಷ ಬೇಕು? ಬರೀ ಪಾರ್ಕಿಂಗಲ್ಲ, ಶಾಪಿಂಗ್ ಮಾಲೂ ಇದೆ!
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ
Shiruru Landslide Tragedy: ಟ್ಯಾಂಕರ್ ಎಂಜಿನ್, ಸ್ಕೂಟಿ ಪತ್ತೆ
Election Schedule: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆ ನೀತಿ ಸಂಹಿತೆ: ಮಾರ್ಗಸೂಚಿ
Badminton; ಅನ್ಮೋಲ್ ಖರಬ್ಗೆ ಬ್ಯಾಡ್ಮಿಂಟನ್ ಪ್ರಶಸ್ತಿ
Duleep Trophy:ಇಂಡಿಯಾ ಎ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.