ಮೂಡುಬಿದಿರೆ ಪುತ್ತಿಗೆ ಆನಡ್ಕದಲ್ಲಿ ಯಾಂತ್ರೀಕೃತ ಕೃಷಿ ಪ್ರಾತ್ಯಕ್ಷಿಕೆ


Team Udayavani, Jul 8, 2021, 7:12 PM IST

Moodbidre News, Dakshina Kannada

ಮೂಡುಬಿದಿರೆ : ಭತ್ತದ ಕೃಷಿಯಿಂದ ಯುವಕರು ವಿಮುಖರಾಗುತ್ತಿರುವ ಸನ್ನಿವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರೂವಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು `ಯಂತ್ರಶ್ರೀ ‘ ಯೋಜನೆಯ ಮೂಲಕ ಯಂತ್ರಗಳನ್ನು ಬಳಸಿ ಭತ್ತದ ಕೃಷಿಯನ್ನು ಲಾಭದಾಯಕವನ್ನಾಗಿಸಲು ಯುವಕರಿಗೆ, ಬಡವರಿಗೆ ಪ್ರೇರಣೆ, ಸಹಕಾರ ಸಹಿತ ಮಾರ್ಗದರ್ಶನ ನೀಡುತ್ತಿದ್ದಾರೆ’ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಹೇಳಿದರು.

ಸಮೀಪದ ಪುತ್ತಿಗೆಯ ಆನಡ್ಕ ದಿನೇಶ್ ಕುಮಾರ್ ಅವರ ಹೊಲದಲ್ಲಿ ಯಾಂತ್ರೀಕೃತ ಭತ್ತ ಬೇಸಾಯ ತರಬೇತಿ ಪ್ರಾತ್ಯಕ್ಷಿಕೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಎರಡು ನಾಟಿ ಯಂತ್ರಗಳ ಕಾರ್ಯಾಚರಣೆಗೆ ಟ್ರೇಯಲ್ಲಿ ಬೆಳೆಸಿರುವ ಭತ್ತದ ಸಸಿಗಳ ಮಡಿಗಳನ್ನು ದಿನೇಶ್ ಕುಮಾರ್ ಅವರಿಗೆ ಹಸ್ತಾಂತರಿಸಿ ಮಾತನಾಡಿದ ಅವರು ಕೃಷಿ ಅಳಿದುಹೋಗುವುದೋ ಎಂಬ ಭೀತಿಯು ಹೊಸ ಹೊಸ ಯಂತ್ರಗಳ ಪ್ರವೇಶದಿಂದಾಗಿ ದೂರವಾಗುತ್ತಿದೆ; ಮತ್ತೆ ಜನರು ಭತ್ತದ ಕೃಷಿಯತ್ತ ಮನಸ್ಸು ಮಾಡುವಂತಾಗಿದೆ’ ಎಂದರು.

ಇದನ್ನೂ ಓದಿ :ಒತ್ತಡದಿಂದ ಹೊರಬರುವುದಕ್ಕೆ ಸುಲಭ ಮಾರ್ಗ ಯಾವುದು..? ಮ್ಯಾನೇಜ್ ಮೆಂಟ್ ಅಂದರೆ ಏನು… 

ಯೋಜನೆಯ ಹಿರಿಯ ನಿರ್ದೇಶಕ ಗಣೇಶ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, `ಯಂತ್ರಶ್ರೀ’ ಕಾರ್ಯಕ್ರಮದ ಮೂಲಕ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಕಳ, ಮೂಡುಬಿದಿರೆ ಒಳಗೊಂಡಂತೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ವರ್ಷ 1000 ಎಕ್ರೆ ಹಡಿಲು ಭೂಮಿ ಸಾಗುವಳಿ ಆಗಿದ್ದರೆ ಈ ವರ್ಷ ಒಟ್ಟು 1750 ಎಕ್ರೆಯಷ್ಟು ಹಡಿಲು ಭೂಮಿಯಲ್ಲಿ ಕೃಷಿ ಕಾರ್ಯ ನಡೆಯಲಿದೆ; ಒಟ್ಟು 4000 ಎಕ್ರೆಯಲ್ಲಿ ಯಂತ್ರಗಳ ಮೂಲಕ ಕೃಷಿ ಕಾರ್ಯ ನಡೆಸುವ ಗುರಿ ಹೊಂದಲಾಗಿದೆ’ ಎಂದರು.

ಕೃಷಿ ಅಧಿಕಾರಿ ವಿ.ಎಸ್. ಕುಲಕರ್ಣಿ ಅವರು, ಕನಿಷ್ಟ ಒಂದು ದನವಾದರೂ ಸಾಕಿದರೆ ಮೂವತ್ತು ಎಕ್ರೆ ಭೂಮಿಯನ್ನು ಹಸನಾಗಿಸಬಹುದು; ಒಂದು ಬ್ಯಾರೆಲ್ ಜೀವಾಮೃತದ ಮೂಲಕ ಒಂದು ಎಕ್ರೆಯಲ್ಲಿ ಕೃಷಿ ಕಾರ್ಯ ನಡೆಸಲು ಸಾಧ್ಯವಿದೆ’ ಎಂದರು.

ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ್ ಮಾತನಾಡಿ, ಭತ್ತದ ಬೀಜ ಬಿತ್ತನೆಯಿಂದ ಕಟಾವಿನವರೆಗೆ ಎಲ್ಲ ಕೃಷಿಕಾರ್ಯಗಳನ್ನೂ ಯಂತ್ರಗಳ ಮೂಲಕವೇ ನಡೆಸಲು ಕೃಷಿ ಇಲಾಖೆ ಮತ್ತು ಗ್ರಾಮಾಭಿವೃದ್ದಿ ಯೋಜನೆ ಜಂಟಿ ಕಾರ್ಯಾಚರಣೆ ನಡೆಸುತ್ತಿವೆ’ ಎಂದು ವಿವರ ನೀಡಿದರು.

ಗ್ರಾ.ಪಂ. ಸದಸ್ಯ ಜಗದೀಶ ಕೋಟ್ಯಾನ್, ರೈತ ಪ್ರಮುಖರಾದ ಧನಕೀರ್ತಿ ಬಲಿಪ, ರಾಜವರ್ಮ ಬೈಲಂಗಡಿ, ಮಿತ್ತಬೈಲು ವಾಸುದೇವ ನಾಯಕ್, ವಾದಿರಾಜ ಮಡ್ಮಣ್ಣಾಯ, ‘ಯಂತ್ರಶ್ರೀ’ ಮೇಲ್ವಿಚಾರಕ ಬೃಜೇಶ್, ಆನಡ್ಕ ಸುಧೀಶ್ ಕುಮಾರ್ ಉಪಸ್ಥಿತರಿದ್ದರು.

ರುಕ್ಕು ಮತ್ತು ತಂಡದವರು `ರಾವೋ ರಾವು ಕೊರುಂಗೋ ರಾವೆರೇನೆ ಕೇನುಜಲೇ ‘ ಪಾಡ್ದನ ಹಾಡಿದರು. ಮೂಡುಬಿದಿರೆ ತಾಲೂಕು ಯೋಜನಾಧಿಕಾರಿ ನಾರಾಯಣ ಶೆಟ್ಟಿ ಸ್ವಾಗತಿಸಿದರು. ಮೇಲ್ವಿಚಾರಕ ವಿಠಲ್ ನಿರೂಪಿಸಿದರು. ಆನಡ್ಕದ ಬಾಕಿಮಾರು ಗದ್ದೆ ಸಹಿತ ಐದು ಎಕ್ರೆಯಷ್ಟು ವಿಸ್ತಾರದ ಹೊಲದಲ್ಲಿ ಯಂತ್ರದ ಮೂಲಕ ಕಜೆ ಜಯ ಭತ್ತದ ಸಸಿ ನಾಟಿ ಕಾರ್ಯನಡೆಸಲಾಯಿತು.

ಇದನ್ನೂ ಓದಿ : ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆಯಾಗಿ “ಶೋಭಾ”ಯಾನ ಆರಂಭ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.