ಮೋಟಾರು ವಾಹನ ಕಾಯ್ದೆ ನಿಯಮ ಉಲ್ಲಂಘನೆ 90ಕ್ಕೂ ಹೆಚ್ಚು ಪ್ರಕರಣ ದಾಖಲು


Team Udayavani, Jul 7, 2017, 3:45 AM IST

prakarana.jpg

ಸ್ಟೇಟ್‌ಬ್ಯಾಂಕ್‌: ಬಸ್‌ ಪ್ರಯಾಣಕ್ಕೆ ಸಂಬಂಧಿಸಿ ಸಾರ್ವಜನಿ ಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ  ಮಂಗಳೂರು ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳು ಗುರುವಾರ ಸ್ಟೇಟ್‌ಬ್ಯಾಂಕ್‌ ಬಳಿ ಕಾರ್ಯಾಚರಣೆ ನಡೆಸಿ ಮೋಟಾರು ವಾಹನ ಕಾಯ್ದೆಯ ವಿವಿಧ ನಿಯಮ ಉಲ್ಲಂಘನೆಗೆ ಸಂಬಂಧಿಸಿ 90ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದರು. 

ಕರ್ಕಶ ಹಾರ್ನ್ಗೆ ಸಂಬಂಧಿಸಿ 65 ಕೇಸು, ಎತ್ತರದ ಮೆಟ್ಟಿಲುಗಳ ಕುರಿತಂತೆ 15 ಪ್ರಕರಣ, ಟಿಕೆಟ್‌ ಮೆಶಿನ್‌ ಇಲ್ಲದ ಹಾಗೂ ಟಿಕೆಟ್‌ ಕೊಡದ 7 ಬಸ್‌ಗಳ ನಿರ್ವಾಹಕರ ವಿರುದ್ಧ ಹಾಗೂ ವಲಯ ನಿಯಮ ಉಲ್ಲಂಘಿಸಿದ 6 ಆಟೋ ರಿಕ್ಷಾ ಚಾಲಕರ ಮೇಲೆ ಪ್ರಕರಣವನ್ನು ದಾಖಲಿಸಿಕೊಂಡರು. ಈ ಎಲ್ಲ ಪ್ರಕರಣಗಳಲ್ಲಿ ಒಟ್ಟು ಸುಮಾರು 6 ಸಾವಿರ ರೂ. ದಂಡವನ್ನು ವಿಧಿಸಲಾಗಿದೆ. 

ಪರವಾನಿಗೆ ಉಲ್ಲಂಘಿಸಿ ಕಾರ್ಯಾಚರಿಸಿದ 8 ಕಾಂಟ್ರ್ಯಾಕ್ಟ್  ಕ್ಯಾರೇಜ್‌ ಮತ್ತು 2 ಸರ್ವಿಸ್‌ ಬಸ್‌ಗಳ 
ವಿರುದ್ಧ ಬುಧವಾರ ಕೇಸು ದಾಖಲಿಸಲಾಗಿತ್ತು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್‌.ಹೆಗಡೆ ಅವರು ತಿಳಿಸಿದ್ದಾರೆ. 

ಮುಂಬರುವ ದಿನಗಳಲ್ಲಿ  ಸಾರಿಗೆ ಇಲಾಖೆ ಮತ್ತು ಪೊಲೀಸ್‌ ಇಲಾಖೆಯ ಜಂಟಿ ಸಹಯೋಗದಲ್ಲಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ತಿಳಿಸಿದರು. 

ಬಸ್‌ಗಳ ಮೆಟ್ಟಿಲುಗಳು ನೆಲದಿಂದ 52 ಸೆಂಟಿ ಮೀಟರ್‌ ಎತ್ತರದಲ್ಲಿ ಇರಬೇಕೆಂಬ ನಿಯಮವಿದೆ. ಆದರೆ ಕೆಲವು ಬಸ್‌ಗಳ ಮಾಲಕರು ಈ ನಿಯಮವನ್ನು  ಪಾಲನೆ ಮಾಡಿಲ್ಲ. ಮೆಟ್ಟಿಲು ಎತ್ತರದಲ್ಲಿ ಇರುವುದರಿಂದ ಮಕ್ಕಳು, ಮಹಿಳೆಯರು ಮತ್ತು  ಹಿರಿಯ ನಾಗರಿಕರಿಗೆ ಬಸ್‌ ಹತ್ತಿ, ಇಳಿಯಲು ಕಷ್ಟವಾಗುತ್ತಿದೆ. ಇಂತಹ ಬಸ್‌ಗಳನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ಬಸ್‌ಗಳ ನಿಯಮ ಉಲ್ಲಂಘನೆ
ಕಾಂಟ್ರ್ಯಾಕ್ಟ್  ಕ್ಯಾರೇಜ್‌ ಬಸ್‌ಗಳು ಸರ್ವಿಸ್‌ ಬಸ್‌ ನಿಲ್ದಾಣ ಪ್ರವೇಶಿಸುವಂತಿಲ್ಲ. ಹಾಗೆಯೇ ಕೆಲವು ಸರ್ವಿಸ್‌ ಬಸ್‌ಗಳಿಗೆ ಮಲ್ಲಿಕಟ್ಟೆ, ಕಂಕನಾಡಿ ತನಕ ಮಾತ್ರ ಪರವಾನಿಗೆ ಇರುತ್ತದೆ ಎಂದರು. 

ಪರವಾನಿಗೆ ಇರುವ ಬಸ್‌ಗಳಲ್ಲಿ ಕೆಲವು ಬಸ್‌ಗಳು ನಿಯಮ ಉಲ್ಲಂಘಿಸಿ ಕಾರ್ಯಾಚರಿಸುತ್ತಿವೆ.  ಅವುಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ವಿವರಿಸಿದರು.

ಕಾರ್ಯಾಚರಣೆ 
ಮಂಗಳೂರು ನಗರದೊಳಗೆ ಸಂಚರಿಸಲು 2500ರಷ್ಟು ಆಟೋರಿಕ್ಷಾಗಳು ಮಾತ್ರ ಪರವಾನಿಗೆ ಪಡೆದಿವೆ. ಆದರೆ ಈಗ ಸುಮಾರು 6500ರಷ್ಟು ಆಟೋಗಳು ಓಡಾಡುತ್ತಿವೆ. ನಗರದ ಹೊರ ವಲಯಲ್ಲಿ ಗ್ರಾಮೀಣ ಪರವಾನಿಗೆಯನ್ನು ಪಡೆದು ನಗರದಲ್ಲಿ ಬಾಡಿಗೆ ಮಾಡುವ ರಿಕ್ಷಾ ಚಾಲಕ/ ಮಾಲಕರ ವಿರುದ್ಧ ಕಾರ್ಯಾಚರಣೆ ನಡೆಸಲಾಗುವುದು ಎಂದರು. 
ಗುರುವಾರ ನಡೆದ ಕಾರ್ಯಾಚರಣೆಯ ಸಂದರ್ಭ ದಲ್ಲಿ ಟ್ರಾಫಿಕ್‌ ಇನ್‌ಸ್ಪೆಕ್ಟರ್‌ ಮೋಹನ್‌ ಕೊಟ್ಟಾರಿ, ದಕ್ಷಿಣ ಕನ್ನಡ ಬಸ್‌ ಮಾಲಕರ ಸಂಘದ ಅಧ್ಯಕ್ಷ  ಅಜೀಜ್‌ ಪರ್ತಿಪಾಡಿ  ಅವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.