ಎಂಆರ್‌ಪಿಎಲ್‌ 4ನೇ ಹಂತ ವಿಸ್ತರಣೆ: ಪೆಟ್ರೋ ಕೆಮಿಕಲ್ಸ್‌ ಉತ್ಪಾದನೆಗೆ ಮೊದಲ ಆದ್ಯತೆ


Team Udayavani, Jan 14, 2023, 1:06 AM IST

ಎಂಆರ್‌ಪಿಎಲ್‌ 4ನೇ ಹಂತ ವಿಸ್ತರಣೆ: ಪೆಟ್ರೋ ಕೆಮಿಕಲ್ಸ್‌ ಉತ್ಪಾದನೆಗೆ ಮೊದಲ ಆದ್ಯತೆ

ಮಂಗಳೂರು: ಭಾರತವು ಪ್ರಸಕ್ತ ಬಹುತೇಕ ಪೆಟ್ರೋ ಕೆಮಿಕಲ್ಸ್‌ ಉತ್ಪನ್ನಗಳನ್ನು ವಿದೇಶದಿಂದ ಆಮದು ಮಾಡುತ್ತಿದೆ. ಇದರ ಬದಲು ಬೇಡಿಕೆಗೆ ಅನುಗುಣವಾಗಿ ಭಾರತದಲ್ಲೇ ಪೆಟ್ರೋ ಕೆಮಿಕಲ್ಸ್‌ ಉತ್ಪಾದನೆಗೆ ಗಮನ ಹರಿಸಬೇಕಿದೆ. ಈ ನಿಟ್ಟಿನಲ್ಲಿ ಎಂಆರ್‌ಪಿಎಲ್‌ ತನ್ನ ನಾಲ್ಕನೇ ಹಂತದ ವಿಸ್ತರಣೆಯ ಸಂದರ್ಭ ಪೆಟ್ರೋಕೆಮಿಕಲ್ಸ್‌ ಉತ್ಪಾದನೆಗೆ ಮೊದಲ ಆದ್ಯತೆ ನೀಡಲು ಉದ್ದೇಶಿಸಿದೆ ಎಂದು ಎಂಆರ್‌ಪಿಎಲ್‌ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಶ್‌ ಎಂ. ತಿಳಿಸಿದ್ದಾರೆ.

ಶುಕ್ರವಾರ ಎಂಆರ್‌ಪಿಎಲ್‌ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿ, ಡೀಸೆಲ್‌ ಹಾಗೂ ಪೆಟ್ರೋಲ್‌ ಬಳಕೆ ಕಡಿಮೆ ಮಾಡಿ ಎಥೆನಾಲ್‌, ಎಲೆಕ್ಟ್ರಿಕ್‌ ಸಹಿತ ಪರ್ಯಾಯ ಇಂಧನ ಕ್ಷೇತ್ರಗಳ ಬಗ್ಗೆ ಕೇಂದ್ರ ಸರಕಾರ ಆದ್ಯತೆ ನೀಡಿದೆ. ವಿಶೇಷವಾಗಿ, ಅಗತ್ಯ ವೈದ್ಯಕೀಯ ವಸ್ತುಗಳ ಖರೀದಿಗೆ ಕೊರೊನಾ ಸಂದರ್ಭ ವಿದೇಶದತ್ತ ಚಿತ್ತ ಹರಿಸಬೇಕಾದ ಪರಿಸ್ಥಿತಿಯೂ ಇತ್ತು. ಹೀಗಾಗಿ ಪೆಟ್ರೋ ಕೆಮಿಕಲ್ಸ್‌ ಉತ್ಪನ್ನಗಳನ್ನು ದೇಶೀಯವಾಗಿಯೇ ಉತ್ಪಾದಿಸಿ, ರಫ್ತು ಮಾಡುವ ನಿಟ್ಟಿನಲ್ಲಿ ಅವಕಾಶ ಬಹಳಷ್ಟಿದೆ ಎಂದರು.

ಎಂಆರ್‌ಪಿಎಲ್‌ 4ನೇ ಹಂತದ ವಿಸ್ತರಣೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಕುತ್ತೆತ್ತೂರು ಹಾಗೂ ಪೆರ್ಮುದೆ ಪ್ರದೇಶದಲ್ಲಿ ಪ್ರಗತಿಯಲ್ಲಿದೆ. ಸುಮಾರು 850 ಎಕರೆ ಪ್ರದೇಶ ಭೂಸ್ವಾಧೀನಕ್ಕೆ ಉದ್ದೇಶಿಸಲಾಗಿದ್ದು, ಕೆಲವು ಕಡೆ ಭೂಮಾಲಕರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ವಿಚಾರಣ ಹಂತದಲ್ಲಿದೆ ಹಾಗೂ ಸಂತ್ರಸ್ತರಿಗೆ 15 ಕಿ.ಮೀ. ದೂರದ ಮೂಳೂರು ಎಂಬಲ್ಲಿ 120 ಎಕರೆ ಪ್ರದೇಶ ನಿಗದಿ ಮಾಡಲಾಗಿದೆ ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹರಿಹರದಲ್ಲಿ ಎಥೆನಾಲ್‌ ಘಟಕ
ಕರ್ನಾಟಕದ ಹರಿಹರದಲ್ಲಿ 2 ಜಿ ಎಥೆನಾಲ್‌ ಘಟಕ ಸ್ಥಾಪನೆಗೆ ಈಗಾಗಲೇ ನಿರ್ಧರಿಸಲಾಗಿದೆ. ಪರಿಸರ ಇಲಾಖೆಯ ಅನುಮತಿ ಮಾತ್ರ ಬಾಕಿ ಇದ್ದು, 2025ರಲ್ಲಿ ಘಟಕದಲ್ಲಿ ಎಥೆನಾಲ್‌ ಉತ್ಪಾದನೆ ಆರಂಭವಾಗಲಿದೆ ಎಂದವರು ವಿವರಿಸಿದರು.

ಪತ್ರಿಕಾ ಸಂವಾದದಲ್ಲಿ ಎಂಆರ್‌ಪಿಎಲ್‌ ನಿರ್ದೇಶಕ (ರಿಫೈನರಿ) ಸಂಜಯ ವರ್ಮಾ, ಕಾರ್ಯನಿರ್ವಾಹಕ ನಿರ್ದೇಶಕರಾದ (ಪ್ರಾಜೆಕ್ಟ್) ಬಿ.ಎಚ್‌.ವಿ.ಪ್ರಸಾದ್‌, (ರಿಫೈನರಿ) ಶ್ಯಾಮ್‌ ಕಾಮತ್‌, ಜಿಜಿಎಂ (ಎಚ್‌ ಆರ್‌) ಕೃಷ್ಣ ಹೆಗ್ಡೆ, ಜಿಎಂ (ಕಾರ್ಪೊರೇಟ್‌ ಕಮ್ಯನಿಕೇಶನ್‌) ರುಡಾಲ್ಫ್ ನೊರೋನ್ಹಾ ಉಪಸ್ಥಿತರಿದ್ದರು.

ಮಾಲಿನ್ಯ ನಿಯಂತ್ರಣಕ್ಕೆ
250 ಕೋ.ರೂ ವೆಚ್ಚ
ಪರಿಸರಕ್ಕೆ ಹಾನಿಯಾಗದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ನ್ಯಾಶನಲ್‌ ಎನ್ವೆ$çರ್ನಮೆಂಟಲ್‌ ಎಂಜಿನಿಯರಿಂಗ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ (ನೀರಿ) ತಜ್ಞರ ಸಮಿತಿಯು ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅವರು ನೀಡುವ ಸಲಹೆ ಸೂಚನೆಗಳನ್ನೂ ಪಾಲಿಸಲಾಗುತ್ತಿದೆ. ಘಟಕದ 10 ಕಿ.ಮೀ. ವ್ಯಾಪ್ತಿಯಲ್ಲಿ ಎಂಟು ಹಳ್ಳಿಗಳಿಂದ ನೀರಿನ ಸ್ಯಾಂಪಲ್‌ ಪಡೆದು ತಪಾಸಣೆ ನಡೆಸಲಾಗಿದೆ. ಪರಿಸರ ಮಾಲಿನ್ಯದಂತಹ ಯಾವುದೇ ಸಮಸ್ಯೆ ಕಂಡುಬಂದಿಲ್ಲ ಎಂದು ವೆಂಕಟೇಶ್‌ ಎಂ. ಹೇಳಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.