Mudbidri: ಚರಂಡಿ ವ್ಯವಸ್ಥೆ ಇಲ್ಲದೆ ಕುಸಿದ ಆವರಣ ಗೋಡೆಗಳು

ಪಡುಮಾರ್ನಾಡು ಕೇಂಪುಲುವಿನ ಹಲವು ಮನೆಗಳ ಪರಿಸರಕ್ಕೆ ಹಾನಿ; ವ್ಯವಸ್ಥಿತ ಚರಂಡಿಗೆ ಆಗ್ರಹ

Team Udayavani, Sep 29, 2024, 4:17 PM IST

2(1)

ಮೂಡುಬಿದಿರೆ: ಪಡುಮಾರ್ನಾಡು ಗ್ರಾ.ಪಂ. ವ್ಯಾಪ್ತಿಯ ಕೃಷಿ ಪ್ರಧಾನ ವಲಯವಾಗಿರುವ ಕೇಂಪುಲು ಪ್ರದೇಶ ಅಸಮರ್ಪಕ ಚರಂಡಿ ವ್ಯವಸ್ಥೆಯಿಂದಾಗಿ ಬಹಳ ಸಮಸ್ಯೆ ಎದುರಿಸುತ್ತಿದೆ. ಇಲ್ಲಿನ ಹಲವು ಮನೆಗಳ ಆವರಣ ಗೋಡೆಗಳು ಕುಸಿದಿವೆ, ಕೃಷಿಗೆ ಹಾನಿಯಾಗಿದೆ.

ಎತ್ತರದ ಗುಡ್ಡ ಪ್ರದೇಶದಿಂದ ನೇರ ಹರಿದು ಬರುವ ಮಳೆ ನೀರು ಪಶ್ಚಿಮ ದಿಕ್ಕಿನ ಚರಂಡಿಯಲ್ಲಿ ಸಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ತೋಡನ್ನು ಸೇರಿದರೆ ಯಾವುದೇ ಸಮಸ್ಯೆ ಉಂಟಾಗದು. ಆದರೆ, ಪೂರ್ವಕ್ಕಿಂತ ಪಶ್ಚಿಮವೇ ಸ್ವಲ್ಪ ಎತ್ತರವಾಗಿರುವ ಕಾರಣ ಮಳೆ ನೀರು ಮಾರ್ಗವನ್ನು ಹಾದು ದಕ್ಷಿಣಕ್ಕೆ ಹರಿದು ಹಲವರ ಮನೆಯಂಗಳಕ್ಕೆ ನುಗ್ಗಿ ಮುನ್ನುಗ್ಗುವುದು ನಿವಾಸಿಗಳನ್ನು ಕಂಗೆಡಿಸಿದೆ.

ಮಳೆಗಾಲದ ಅಬ್ಬರ ಕಾಲದಲ್ಲಿ ಲಕ್ಷ್ಮೀ ನಾರಾಯಣ ಭಟ್ಟರ ಮನೆಯಂಗಳಕ್ಕೆ ನುಗ್ಗಿದ ನೀರು ಮನೆಯ ಆವರಣ ಗೋಡೆ ಕುಸಿಯುವಂತೆ ಮಾಡಿದೆ. ಇದೀಗ ರಕ್ಷಣೆಗಾಗಿ ಗೋಡೆಯನ್ನು ಸ್ವಂತ ಖರ್ಚಿನಲ್ಲಿ ಮರು ನಿರ್ಮಿಸಬೇಕಾಗಿದೆ. ಹತ್ತಿರವ ನವೀನ ಅವರ ಮನೆಯ ಆವರಣ ಗೋಡೆಯೂ ಕುಸಿದು ಬಿದ್ದಿದೆ, ಇನ್ನೂ ಹಾಗೆಯೇ ಇದೆ. ಶಾರದಾ ಶೆಟ್ಟಿ ಅವರ ಮನೆಯ ಆವರಣ ಗೋಡೆ ಇನ್ನೇನು ಕುಸಿಯುವ ಸ್ಥಿತಿಯಲ್ಲಿದೆ.

ಹೀಗೆ ಎಲ್ಲೆ ಮೀರಿ ಹರಿಯುವ ಮಳೆ ನೀರು ಹತ್ತಿರದ ತೋಟಗಳಿಗೆ ನುಗ್ಗಿ ಮತ್ತಷ್ಟು ಸಮಸ್ಯೆ ಉಂಟುಮಾಡುತ್ತಿದೆ. ಪಂಚಾಯತ್‌ ವತಿಯಿಂದ ಚರಂಡಿಯ ಒಂದಿಷ್ಟು ಮಣ್ಣು ಹೆರೆದು ತೆಗೆಯಲಾಗಿದೆಯಾದರೂ ಅದು ಸಮಸ್ಯೆಗೆ ಪರಿಹಾರವಾಗುವ ಸಾಧ್ಯತೆ ಇಲ್ಲ. ಚರಂಡಿಯನ್ನು ಇನ್ನಷ್ಟು ಆಳ ಮಾಡಿ ಪಶ್ಚಿಮಕ್ಕೆ ಹರಿಸಿದರೆ ಮಾತ್ರ ಪರಿಹಾರ ಸಿಗಬಹುದು.

ರಸ್ತೆಯೂ ಜೀರ್ಣಾವಸ್ಥೆಯಲ್ಲಿ
ಇದರ ಜತೆಗೆ ಕೇಂಪುಲ ರಸ್ತೆಯು ಜೀರ್ಣವಾಗಿದೆ. ಹೊಂಡ ಗುಂಡಿಗಳಿಂದ ತುಂಬಿದೆ. ಡಾಮರ್‌ ಕಿತ್ತು ಕಿತ್ತು ಹೋಗಿದೆ. ಇದಕ್ಕೂ ಚರಂಡಿ ವ್ಯವಸ್ಥೆ ಸರಿ ಇಲ್ಲದಿರುವುದೇ ಪ್ರಮುಖ ಕಾರಣವಾಗಿದೆ.

ಗಮನ ಹರಿಸಲಾಗುವುದು
ಸಂಬಂಧಪಟ್ಟ ಸಂತ್ರಸ್ತರು ದೂರು ನೀಡಿ, ವಾರ್ಡ್‌ ಸದಸ್ಯರು ಬೇಡಿಕೆ ಮುಂದಿಟ್ಟರೆ ಮುಂದಿನ ಕ್ರಿಯಾಯೋಜನೆಯಲ್ಲಿ ಈ ಬಗ್ಗೆ ಗಮನ ಹರಿಸಲಾಗುವುದು.
-ವಾಸುದೇವ ಭಟ್‌, ಅಧ್ಯಕ್ಷರು, ಪಡುಮಾರ್ನಾಡು ಗ್ರಾ.ಪಂ.

ಕ್ರಮ ಜರಗಿಸಲಾಗುವುದು
ಮುರಕಲ್ಲು ಇರುವುದರಿಂದ ಸ್ವಲ್ಪ ಹೆಚ್ಚಿನ ಮೊತ್ತ ಬೇಕಾಗಬಹುದು. ಆದರೂ ಮುಂದೆ ಈ ಬಗ್ಗೆ ಕ್ರಮ ಜರಗಿಸಲಾಗುವುದು.
-ಸಾಯೀಶ್‌ ಚೌಟ, ಪಿಡಿಒ

-ಧನಂಜಯ ಮೂಡುಬಿದಿರೆ

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

1-sadsad

Lokayukta ADGP ಚಂದ್ರಶೇಖರ್ ಬ್ಲಾಕ್‌ಮೇಲರ್, ಕ್ರಿಮಿನಲ್:ಎಚ್‌ಡಿಕೆ ಕೆಂಡಾಮಂಡಲ

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

M-Kharge-illeness

J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್‌ ಖರ್ಗೆ!

1-shah

Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

6

World Heart Day: ನಿಮ್ಮ ಹೃದಯ ಜೀವಕ್ಕೆ ಕುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

1-jjk

Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಟ್ರಾಫಿಕ್‌ ಸಿಗ್ನಲ್‌ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್‌

3

Kinnigoli: ಅಂಗಡಿಗಳಿಂದ ಆದಾಯ ಬಂದರೂ ದುರಸ್ತಿ ಇಲ್ಲ

1

Kaikamba: ಎಚ್ಚರ,ಕುಸಿಯುತ್ತಿದೆ ಬೆಳ್ಳಿಬೆಟ್ಟು!;ಗುರುಪುರದ ಬಳಿಯ ಮೂಳೂರಿನಲ್ಲಿ ಗುಡ್ಡ ಜರಿತ

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

5-

Mangaluru: ಸೆನ್‌ ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

1-sadsad

Lokayukta ADGP ಚಂದ್ರಶೇಖರ್ ಬ್ಲಾಕ್‌ಮೇಲರ್, ಕ್ರಿಮಿನಲ್:ಎಚ್‌ಡಿಕೆ ಕೆಂಡಾಮಂಡಲ

7

Mangaluru: ಟ್ರಾಫಿಕ್‌ ಸಿಗ್ನಲ್‌ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್‌

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

M-Kharge-illeness

J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್‌ ಖರ್ಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.