Mulki: ಮನೆಗೆ ನುಗ್ಗಿ ಸೆರೆ ಸಿಕ್ಕ ಚಿರತೆ ; ಜನರಲ್ಲಿ ಹೆಚ್ಚಾದ ಭೀತಿ


Team Udayavani, Oct 21, 2024, 12:25 AM IST

1-mulky

ಮೂಲ್ಕಿ: ಇಲ್ಲಿನ ವೆಂಕಟರಮಣ ದೇಗುಲ ರಸ್ತೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿದ ಚಿರತೆ ಮರಿಯನ್ನು ಶನಿವಾರ ರಾತ್ರಿ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಡಿದ್ದು, ಪ್ರದೇಶದಲ್ಲಿ ಇನ್ನಷ್ಟು ಚಿರತೆಗಳಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಜನರಲ್ಲಿ ಭೀತಿ ಹೆಚ್ಚಾಗಿದೆ.
ಕಳೆದ ಕೆಲವು ದಿನಗಳಿಂದ ಮೂಲ್ಕಿ ಪರಿಸರದಲ್ಲಿ ಚಿರತೆ ಓಡಾಟದ ಸುದ್ದಿ ಹರಡಿದ್ದು, ಈಗ ಚಿರತೆ ಸೆರೆ ಸಿಗುವ ಮೂಲಕ ಅದು ನಿಜವಾಗಿದೆ.

ವೆಂಕಟರಮಣ ದೇಗುಲ ರಸ್ತೆಯ ಅಕ್ಕಸಾಲಿಗರ ಕೇರಿಯ ರೇಂಜರ್ ಪ್ಲೋಟ್‌ ಬಳಿಯ ಸದಾನಂದ ಕೋಟ್ಯಾನ್‌ ಹಾಗೂ ಶೀಲಾ ದಂಪತಿಯ ಮನೆಯ ಅಡುಗೆ ಕೋಣೆಯಲ್ಲಿ ಚಿರತೆ ಪತ್ತೆಯಾಗಿದ್ದು, ಅದನ್ನು ಮೂಡುಬಿದಿರೆ ಅರಣ್ಯ ಇಲಾಖೆಯ ಆಧಿಕಾರಿಗಳು ಹಾಗೂ ಸಿಬಂದಿ ಸೆರೆ ಹಿಡಿಯುವಲ್ಲಿ ಸಫ‌ಲರಾಗಿದ್ದಾರೆ.

ಕಾರ್ಯ ನಿಮಿತ್ತ ಮನೆಯಿಂದ ಹೊರ ಹೋಗಿದ್ದ ಸದಾನಂದ ದಂಪತಿ ಶನಿವಾರ ರಾತ್ರಿ 9.30ರ ಸುಮಾರಿಗೆ ಮನೆಗೆ ಬಂದು ಕೈಕಾಲು ತೊಳೆದು ಬಚ್ಚಲು ಮನೆಯಿಂದ ಅಡುಗೆ ಮನೆಗೆ ಬರುವ ಮನೆಯ ಬಾಗಿಲನ್ನು ತೆರೆದಿದ್ದರು. ಸ್ವಲ್ಪ ಹೊತ್ತಿನಲ್ಲಿ ಬಚ್ಚಲು ಮನೆಯಲ್ಲಿ ಹಾಗೂ ಬಳಿಕ ಅಡುಗೆ ಮನೆಯಲ್ಲಿ ಸದ್ದು ಉಂಟಾಯಿತು. ಲೈಟ್‌ ಹಾಕಿ ನೋಡಿದಾಗ ಯಾವುದೋ ಪ್ರಾಣಿ ಒಳಗೆ ಸೇರಿರುವುದು ದೃಢವಾಯಿತು. ಕೂಡಲೇ ಅವರು ಪಕ್ಕದ ಮನೆಯರಿಗೆ ತಿಳಿಸಿದ್ದು, ಬಳಿಕ ಪೊಲೀಸರಿಗೂ ಮಾಹಿತಿ ನೀಡಲಾ ಯಿತು. ಮೂಲ್ಕಿ ಪೊಲೀಸರು ಆಗಮಿಸಿ ಚಿರತೆ ಇರುವುದನ್ನು ದೃಢಪಡಿಸಿದರು. ಅನಂತರ ಮೂಡುಬಿದಿರೆಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಯಿತು. ಕೂಡಲೇ ಆಗಮಿಸಿದ ಅರಣ್ಯ ಅಧಿಕಾರಿ ಸಿಬಂದಿ ತಡರಾತ್ರಿ ಚಿರತೆ ಯನ್ನು ಗೂಡಿನಲ್ಲಿ ಬಂಧಿಸುವಲ್ಲಿ ಸಫ‌ಲರಾದರು. ಚಿರತೆಯನ್ನು ನೋಡಲು ಜನರ ದಂಡೇ ನೆರೆದಿದ್ದು, ಅವರನ್ನು ನಿಯಂತ್ರಿಸುವುದೇ ಪೊಲೀಸರಿಗೆ ಸವಾಲಾಯಿತು.

ಮರಿ ಚಿರತೆ
ಚಿರತೆಗೆ ಸುಮಾರು ಒಂದೂವರೆ ವರ್ಷ ಪ್ರಾಯವಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಮರಿಯಾಗಿರುವ ಕಾರಣ ಉಳಿದ ಹೆಣ್ಣು ಮತ್ತು ಗಂಡು ಚಿರತೆ ಪರಿಸರದಲ್ಲಿ ಇರುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರದಿಂದ ಇರುವಂತೆ ತಿಳಿಸಲಾಗಿದೆ. ಇದು ಸಹಜವಾಗಿಯೇ ಜನರಲ್ಲಿ ಆತಂಕ ಮೂಡಿಸಿದೆ.

ಟಾಪ್ ನ್ಯೂಸ್

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Isha-Found

Compliant: ಈಶಾ ಸಂಸ್ಥೆಯಲ್ಲಿ ಮಗನಿಗೆ ಲೈಂಗಿಕ ದೌರ್ಜನ್ಯ: ದಂಪತಿ ಆರೋಪ

ODISHA-GIRL

Odisha: ಕುಟುಂಬಸ್ಥರ ಕಣ್ತಪ್ಪಿಸಲು ಟ್ರಂಕ್‌ನಲ್ಲಿ ಪ್ರಿಯಕರನ ಬಚ್ಚಿಟ್ಟ ಯುವತಿ!

Newz-Air

Policy: ವಿಮಾನ ನಿಲ್ದಾಣದಲ್ಲಿ ಅಪ್ಪುಗೆಗೆ ಸಮಯ ಮಿತಿ ಹೇರಿದ ನ್ಯೂಜಿಲೆಂಡ್‌ ಸರಕಾರ!

Airport

Compensation: ವಿಮಾನ ಅಪಘಾತದಲ್ಲಿ ಸತ್ತರೆ 1.7 ಕೋಟಿ ರೂ. ಪರಿಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Suratkal; ಎಂಜಿನಿಯರಿಂಗ್‌ ವಿದ್ಯಾರ್ಥಿ ಸಮುದ್ರಪಾಲು

police crime

Thinagalady: ಕಾಂಗ್ರೆಸ್‌ ಮುಖಂಡನ ಮೇಲೆ ಹಲ್ಲೆ

1-a-sidili

Puttur: ಸಿಡಿಲು ಬಡಿದು ಹಾನಿ

1-a-suddu

Kukke Subrahmanya: ದಿಢೀರ್‌ ಮಳೆಗೆ ತುಂಬಿ ಹರಿದ ದರ್ಪಣ ತೀರ್ಥ ನದಿ

1–app

Award; ಅನುದಾನ ರಹಿತ ಶಾಲೆಗಳ ಸಂಘ: ಉತ್ತಮ ಆಡಳಿತಗಾರ, ಶಿಕ್ಷಕ ಪ್ರಶಸ್ತಿ ಇಂದು ಪ್ರದಾನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Chattsi-Blood

Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Isha-Found

Compliant: ಈಶಾ ಸಂಸ್ಥೆಯಲ್ಲಿ ಮಗನಿಗೆ ಲೈಂಗಿಕ ದೌರ್ಜನ್ಯ: ದಂಪತಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.