![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 18, 2022, 7:22 AM IST
ಸಾಂದರ್ಭಿಕ ಚಿತ್ರ..
ಮೂಲ್ಕಿ: ಶಾಲೆಗೆ ಬಂದ ಹುಡುಗನನ್ನು ಆತನ ತಂದೆ ಶಾಲೆಯಿಂದ ಕರೆದುಕೊಂಡು ಹೋಗಿ ಸ್ನೇಹಿತನ ಮನೆಯಲ್ಲಿರಿಸಿ ತನ್ನ ಮಗ ಶಾಲೆಗೆ ಬಂದವನು ಎಲ್ಲಿದ್ದಾನೆ ಎಂದು ಪ್ರಶ್ನಿಸಿ ಶಾಲೆಯಲ್ಲಿ ರಂಪಾಟ ನಡೆಸಿದ ಘಟನೆಯೊಂದು ಮೂಲ್ಕಿ ಠಾಣಾ ವ್ಯಾಪ್ತಿಯ ಕಾರ್ನಾಡಿನಲ್ಲಿ ನಡೆದಿದೆ.
ಹೆಜಮಾಡಿಯ ನಿವಾಸಿ ಹರೀಶ್ ಅವರು ತನ್ನ 9 ವರ್ಷದ ಮಗ ಶಾಲೆಯಲ್ಲಿ ಇಲ್ಲದಿರುವುದನ್ನು ಪ್ರಶ್ನಿಸಿ ಶಾಲೆಯ ಸಿಬಂದಿಗೆ ಗದರಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಪೊಲೀಸರು ಧಾವಿಸಿ ಬಂದು ಶಾಲೆಯ ಬದಿಯ ಅಂಗಡಿಯೊಂದರ ಸಿಸಿ ಕೆಮರಾದ ಫೂಟೇಜ್ ಪರಿಶೀಲನೆ ನಡೆಸಿದಾಗ ಹುಡುಗ ಶಾಲೆಗೆ ಬಂದಿರುವುದು ದಾಖಲಾಗಿತ್ತು. ಸ್ವಲ್ಪ ಹೊತ್ತಿನಲ್ಲಿ ಆತನ ತಂದೆಯೇ ರಿಕ್ಷಾದಲ್ಲಿ ಕುಳ್ಳಿರಿಸಿ ಕರೆದುಕೊಂಡು ಹೋದ ದೃಶ್ಯವೂ ಸೆರೆಯಾಗಿತ್ತು. ಪೊಲೀಸರು ಹರೀಶ್ನನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ತಾನು ಕರೆದುಕೊಂಡು ಹೋಗಿರುವುದಾಗಿ ಒಪ್ಪಿಕೊಂಡಿದ್ದಾನೆ.
ತಂದೆ ಹರೀಶ್ ಬಾಲಕನನ್ನು ಕೆರೆಕಾಡಿನ ಸ್ನೇಹಿತನ ಮನೆಯಲ್ಲಿ ಬಿಟ್ಟು ಬಂದು ಮಗ ನಾಪತ್ತೆಯಾಗಿರುವುದಾಗಿ ನಾಟಕ ಮಾಡಿದ್ದಾನೆ. ಬಾಲಕನನ್ನು ಕರೆದುಕೊಂಡು ಬಂದ ಅನಂತರ ಪ್ರಕರಣ ಇತ್ಯರ್ಥವಾಗಿದೆ. ಆದರೆ ಯಾಕೆ ಬಾಲಕನ ತಂದೆ ಈ ರೀತಿ ವರ್ತಿಸಿದ್ದಾನೆ ಎಂಬುವುದು ತಿಳಿದು ಬಂದಿಲ್ಲ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.