Multi-level ಪಾರ್ಕಿಂಗ್‌ ಕಾಮಗಾರಿಗೆ ವೇಗ

| ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಯೋಜನೆ ಶೀಘ್ರವೇ ಮರುಆರಂಭ | ಸುದಿನ ವರದಿಗೆ ಜನಪ್ರತಿನಿಧಿಗಳು, ಸ್ಮಾರ್ಟ್‌ ಸಿಟಿ, ಗುತ್ತಿಗೆದಾರರ ಸ್ಪಂದನೆ

Team Udayavani, Sep 24, 2024, 4:29 PM IST

Multi-level ಪಾರ್ಕಿಂಗ್‌ ಕಾಮಗಾರಿಗೆ ವೇಗ

ಮಹಾನಗರ: ನಗರದ ಹಂಪನಕಟ್ಟೆಯ ಹಳೆ ಬಸ್‌ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಕಾಮಗಾರಿಗೆ ಸಂಬಂಧಿಸಿ ‘ಉದಯವಾಣಿ ಸುದಿನ’ದಲ್ಲಿ ಸೆ. 18ರಿಂದ ಸೆ. 23ರ ವರೆಗೆ ಪ್ರಕಟವಾದ ‘ಮಲ್ಟಿಲೆವೆಲ್‌ ಪಾರ್ಕಿಂಗ್‌ ಇನ್ನೆಷ್ಟು ವರ್ಷ ಬೇಕು?’ ಅಭಿಯಾನ ಆಡಳಿತ ವ್ಯವಸ್ಥೆಯ ಕಣ್ಣು ತೆರೆಸಿದೆ. ಕುಂಟುತ್ತಾ ಸಾಗುತ್ತಿರುವ ಯೋಜನೆಯ ಹಿನ್ನೆಲೆ – ಮುನ್ನೆಲೆಗಳ ಬಗ್ಗೆ ವಿವರವಾಗಿ ಪ್ರಸ್ತುತ ಪಡಿಸಿದ ವರದಿಗೆ ಆಡಳಿತ ವ್ಯವಸ್ಥೆ ಸ್ಪಂದಿಸಿದೆ.

ಸ್ಮಾರ್ಟ್‌ ಸಿಟಿ ವತಿಯಿಂದ 95 ಕೋಟಿ ರೂ. ವೆಚ್ಚದಲ್ಲಿ ಬಿಒಟಿ- ನಿರ್ಮಾಣ, ನಿರ್ವಹಣೆ, ಹಸ್ತಾಂತರ ಸ್ವರೂಪದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಈ ಯೋಜನೆ ಹಲವಾರು ಕಾರಣಗಳಿಂದ ವೇಗ ಕಳೆದುಕೊಂಡಿತ್ತು. ಇದೀಗ ಬಹು ನಿರೀಕ್ಷಿತ ಯೋಜನೆಯನ್ನು ತುರ್ತಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಒಮ್ಮತದ ತೀರ್ಮಾನ ವ್ಯಕ್ತವಾಗಿದೆ.

ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌, ಶಾಸಕ ವೇದವ್ಯಾಸ ಕಾಮತ್‌ ಮತ್ತು ಮಂಗಳೂರು ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಾಜು ಕೆ. ಅವರು ಈ ಕುರಿತಂತೆ ‘ಉದಯವಾಣಿ ಸುದಿನ’ ಜತೆಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಅದರ ಜತೆಗೆ, ಈ ಯೋಜನೆಯ ಗುತ್ತಿಗೆ ವಹಿಸಿಕೊಂಡ ಸಂಸ್ಥೆಯ ಪ್ರಮುಖರಾದ ಅನುರಾಧಾ ಪ್ರಭು ಅವರು, ಹಲವು ಸವಾಲುಗಳನ್ನು ದಾಟಿದ್ದೇವೆ, ಸಾಕಷ್ಟು ಹಣ ಖರ್ಚು ಮಾಡಿದ್ದೇವೆ. ಎಲ್ಲ ಸವಾಲುಗಳನ್ನು ಮೀರಿ ತ್ವರಿತವಾಗಿ ಕಾಮಗಾರಿ ನಡೆಸಿ ಮಂಗಳೂರಿಗೆ ವಿಶಿಷ್ಟವಾದ ಕೊಡುಗೆಯನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.

ಸ್ಥಗಿತದ ಕಾರಣ ಗೊತ್ತಾಗಿದೆ; ಶೀಘ್ರ ಮರುಚಾಲನೆ ಸಿಗಲಿದೆ
ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಮತ್ತು ಕಾಮಗಾರಿಯನ್ನು ಆರಂಭಿಸುವ ಬಗ್ಗೆ ಉದಯವಾಣಿ ‘ಸುದಿನ’ ಕೈಗೊಂಡಿರುವ ಅಭಿಯಾನವನ್ನು ಗಮನಿಸಿದ್ದೇನೆ. ನಗರದ ಪಾರ್ಕಿಂಗ್‌ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿ ಶೀಘ್ರ ಮುಗಿಸುವ ಅಗತ್ಯವಿದೆ. ಯೋಜನೆ ಸ್ಥಗಿತಗೊಂಡಿರುವ ಕಾರಣಗಳ ಬಗ್ಗೆ ಈಗಾಗಲೇ ಮಾಹಿತಿ ಪಡೆದಿದ್ದೇನೆ. ಕಾಮಗಾರಿಯನ್ನು ಮುಂದುವರಿಸಲು ಗುತ್ತಿಗೆ ವಹಿಸಿಕೊಂಡಿರುವ ಸಂಸ್ಥೆಯವರು ಕೂಡಾ ಉತ್ಸುಕರಾಗಿರುವುದರಿಂದ. ಸ್ಮಾರ್ಟ್‌ ಸಿಟಿ ಅಧಿಕಾರಿಗಳಿಗೆ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಲಾಗವುದು. ಮಂಗಳೂರಿನ ತುರ್ತು ಅಗತ್ಯದ ಯೋಜನೆಯನ್ನು ಕಾಲಮಿತಿಯೊಳಗೆ ಮಾಡಿ ಜನರಿಗೆ ನೀಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಮಾತುಕತೆ ನಡೆಸಲಾಗುವುದು.
– ಯು.ಟಿ. ಖಾದರ್‌, ವಿಧಾನ ಸಭಾಧ್ಯಕ್ಷರು

ಉದಯವಾಣಿ ವರದಿಯಿಂದ ಮತ್ತೂಮ್ಮೆ ಭರವಸೆ ಮೂಡಿದೆ
ರಾಜ್ಯದಲ್ಲಿಯೇ ಮೊದಲ ಬಾರಿಗೆ ಎಂಬಂತೆ ಮಂಗಳೂರಿನ ಕೇಂದ್ರ ಮಾರುಕಟ್ಟೆ ಮತ್ತು ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಯೋಜನೆಯನ್ನು ಸ್ಮಾರ್ಟ್‌ ಸಿಟಿ ಯೋಜನೆಯಡಿ ಬಿಒಟಿ ಸ್ವರೂಪದಲ್ಲಿ ಕಳೆದ ಸರಕಾರದ ಅವಧಿಯಲ್ಲಿ ರೂಪಿಸಲಾಯಿತು. ಕೇಂದ್ರ ಮಾರುಕಟ್ಟೆ ಕಾಮಗಾರಿ ವೇಗವಾಗಿ ಸಾಗಿ ಈಗ ಅಂತಿಮ ಹಂತಕ್ಕೆ ಬಂದಿದೆ. ಎಂಎಲ್‌ಸಿಪಿ ಯೋಜನೆ ಮಾತ್ರ ಆರಂಭಿಕವಾಗಿ ವೇಗ ಪಡೆದರೂ ಕಳೆದ ಒಂದು ವರ್ಷದಿಂದ ಸ್ಥಗಿತಗೊಂಡಿದೆ. ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಮಾರ್ಟ್‌ ಸಿಟಿ ಅಧಿಕಾರಿಗಳು ಇಲ್ಲಿರುವ ಗೊಂದಲಗಳನ್ನು ನಿವಾರಿಸಿ, ಕಾಮಗಾರಿಗೆ ವೇಗ ನೀಡಬೇಕು. ಮಂಗಳೂರಿನ ಪಾರ್ಕಿಂಗ್‌ ಸಮಸ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಎಂಎಲ್‌ಸಿಪಿ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಉದಯವಾಣಿಯ ಅಭಿಯಾನವು ಕಾಮಗಾರಿ ಮತ್ತೆ ಆರಂಭಿಸುವ ಹೊಸ ಭರವಸೆ ಉಂಟು ಮಾಡಿದೆ.
– ವೇದವ್ಯಾಸ ಕಾಮತ್‌, ಶಾಸಕರು

ಅದೇ ಗುತ್ತಿಗೆ ಸಂಸ್ಥೆಯಿಂದ ಕಾಮಗಾರಿ ಮುಂದುವರಿಕೆ
ಮಂಗಳೂರು ಸ್ಮಾರ್ಟ್‌ ಸಿಟಿಯ ಪ್ರಮುಖ ಯೋಜನೆಗಳಲ್ಲಿ ಒಂದಾ ಗಿರುವ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಯೋಜನೆ ಕೆಲವು ಕಾರಣ ಗಳಿಂದ ಸ್ಥಗಿತ ಗೊಂಡಿತ್ತು. ತಾಂತ್ರಿಕ ಹಾಗೂ ಇತರ ಕೆಲವು ವಿಚಾರಗಳಿಂದ ಕಾಮಗಾರಿ ವೇಗ ಪಡೆಯಲು ಸಾಧ್ಯವಾಗಿಲ್ಲ. ಇದೀಗ ಗುತ್ತಿಗೆ ಸಂಸ್ಥೆಯ ಪ್ರಮುಖರು ಮತ್ತೆ ನಮ್ಮನ್ನು ಸಂಪರ್ಕಿಸಿದ್ದು, ಯೋಜನೆಯನ್ನು ಮುಂದು ವರಿಸುತ್ತೇವೆ ಎಂದು ಹೇಳಿದ್ದಾರೆ. ಮುಂದುವರಿಸಲು ಅವಕಾಶವೂ ಇದೆ. ಯಾವ ರೀತಿ ಯೋಜನೆಯನ್ನು ಮುಂದುವರಿಬೇಕು ಎನ್ನುವ ಬಗ್ಗೆ ಮುಂದಿನ ದಿನಗಳಲ್ಲಿ ಅಂತಿಮಗೊಳಿಸಲಾಗುವುದು.
– ರಾಜು ಕೆ. ವ್ಯವಸ್ಥಾಪಕ ನಿರ್ದೇಶಕರು, ಮಂಗಳೂರು ಸ್ಮಾರ್ಟ್‌ ಸಿಟಿ

ಚಿತ್ರ ಸಂಗ್ರಹ: ಯಜ್ಞ ಮಂಗಳೂರು

 

ಟಾಪ್ ನ್ಯೂಸ್

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

CM-preess

MUDA Scam: ಹೈಕೋರ್ಟ್‌ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

16

Mangaluru: ಕೆಟ್ಟು ಹೋದ ಒಳಹಾದಿ, ಸಂಚಾರ ಸಂಕಷ್ಟ

Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ

Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ

Bajpe: Monday Saint: Garlic is the king of the market!

Bajpe: ಸೋಮವಾರದ ಸಂತೆ: ಬೆಳ್ಳುಳ್ಳಿಯೇ ಮಾರುಕಟ್ಟೆಯ ರಾಜ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ

Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.