ಮಂಗಳೂರು-ಮುಂಬಯಿ ಎಐ ವಿಮಾನ 81 ದಿನ ರದ್ದು


Team Udayavani, Jul 6, 2018, 10:44 AM IST

airindiaaviationairlines720-770×433.png

ಮಂಗಳೂರು: ಏರ್‌ ಇಂಡಿಯಾ ವಿಮಾನ ಯಾನ ಸಂಸ್ಥೆಯು ಜುಲೈ 12ರಿಂದ ಸೆಪ್ಟಂಬರ್‌ 30ರ ವರೆಗೆ ಮಂಗಳೂರು- ಮುಂಬಯಿ ನಡುವಿನ ವಿಮಾನಯಾನ ಸೇವೆಯನ್ನು ದಿಢೀರನೆ ರದ್ದುಗೊಳಿಸಿದ್ದು, ಈಗಾಗಲೇ ಟಿಕೆಟ್‌ ಬುಕ್‌ ಮಾಡಿರುವ ನೂರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. “ನಿರ್ವಹಣೆಯ ಕಾರಣಗಳಿಗಾಗಿ (ಆಪ ರೇಶನಲ್‌ ರೀಸನ್‌)’ 81 ದಿಗಳ ಕಾಲ ಮಂಗಳೂರು- ಮುಂಬಯಿ ನಡುವಿನ ವಿಮಾನ ಯಾನವನ್ನು ರದ್ದುಪಡಿಸ‌ಲಾಗಿದೆ’ ಎಂದಷ್ಟೇ ಏರ್‌ ಇಂಡಿಯಾ ಸಂಸ್ಥೆಯ ಮಂಗಳೂರಿನ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಶೀಘ್ರದಲ್ಲೇ ಹಜ್‌ ಯಾತ್ರೆ ಕೂಡ ಆರಂಭವಾಗಲಿದ್ದು, ಇಂತಹ ಸಂದರ್ಭದಲ್ಲಿಯೇ ವಿಮಾನ ಯಾನ ರದ್ದು ಪಡಿಸಿರುವ ಸಂಸ್ಥೆಯ ನಿರ್ಧಾರಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇನ್ನೊಂದೆಡೆ ಹಜ್‌ ಯಾತ್ರೆಗೆ ಅನುಕೂಲತೆ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಏರ್‌ ಇಂಡಿಯಾ ಮಾತ್ರ ಈ ದಿಢೀರ್‌ ನಿರ್ಧಾರಕ್ಕೆ ಬಲವಾದ ಕಾರಣ ನೀಡದಿರುವುದು ಸಂಶಯಕ್ಕೆ ಎಡೆಮಾಡಿದೆ.
ಜೂ. 25ರ ತನಕವೂ ಏರ್‌ ಇಂಡಿಯಾ ಸಂಸ್ಥೆಯು ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕಿಂಗ್‌ಗೆ ಅವಕಾಶ ಕಲ್ಪಿಸಿತ್ತು. ಜೂ. 26ರಂದು ಮಂಗಳೂರು- ಮುಂಬಯಿ ವಿಮಾನ ಯಾನ ವನ್ನು ಜುಲೈ 12ರಿಂದ ರದ್ದು ಮಾಡುತ್ತಿರುವುದಾಗಿ ಟಿಕೆಟ್‌ ಬುಕ್‌ ಮಾಡಿದವರಿಗೆ ದಿಢೀರನೆ ಏರ್‌ ಇಂಡಿಯಾ ಕಡೆಯಿಂದ ಸಂದೇಶ ರವಾನೆಯಾಗಿದೆ.

ಟಿಕೆಟ್‌ ಹಣ ವಾಪಸ್‌ 
ಟಿಕೆಟ್‌ ಬುಕ್‌ ಮಾಡಿದವರಿಗೆ ಏರ್‌ ಇಂಡಿಯಾ ಸಂಸ್ಥೆಯು ಪ್ರಯಾಣ ಕೈಗೊಳ್ಳಲು ಪರ್ಯಾಯ ವ್ಯವಸ್ಥೆ ಮಾಡಿಲ್ಲ. ಬದಲಾಗಿ ಟಿಕೆಟ್‌ ಹಣವನ್ನು ಪೂರ್ತಿ ಮರು ಪಾವತಿಸಲು ಅವಕಾಶ ಕಲ್ಪಿಸಿದೆ ಎಂದು ಸಂಸ್ಥೆಯ ಓರ್ವ ಅಧಿಕಾರಿ ತಿಳಿಸಿದ್ದಾರೆ.

ಏರ್‌ ಇಂಡಿಯಾ ಆಯ್ಕೆ ಯಾಕೆ?
ಏರ್‌ ಇಂಡಿಯಾವು ಮಂಗಳೂರು-ಮುಂಬಯಿ ನಡುವೆ ಪ್ರತಿದಿನ ಮಧ್ಯಾಹ್ನ 12.45ಕ್ಕೆ ಒಂದು ಟ್ರಿಪ್‌ ಸಂಚರಿಸುತ್ತಿದೆ. ಬೇರೆ ವಿಮಾನಯಾನಗಳಿಗೆ ಹೋಲಿಸಿದರೆ ಇದರಲ್ಲಿ ಪ್ರಯಾಣ ದರ ಸ್ವಲ್ಪ ಕಡಿಮೆ. ಜತೆಗೆ ಕರಾವಳಿ ಭಾಗದ ಹೆಚ್ಚಿನ ಸಂಖ್ಯೆಯ ಜನರು ಮುಂಬಯಿಯಲ್ಲಿ ನೆಲೆಸಿರುವುದರಿಂದ ಅಲ್ಲಿಗೆ ಹೋಗಿ ಬರಲು ಈ ವಿಮಾನವನ್ನೇ ಅವಲಂಬಿಸಿದ್ದಾರೆ. ಸಾಕಷ್ಟು ಮುಂಚಿತವಾಗಿ ಟಿಕೆಟ್‌ ಬುಕ್‌ ಮಾಡಿದರೆ ಟಿಕೆಟ್‌ ದರದಲ್ಲಿ ಉಳಿತಾಯ ಆಗುವುದರಿಂದ ಹಲವಾರು ಮಂದಿ ಮಂಗಳೂರು- ಮುಂಬಯಿ- ಮಂಗಳೂರು ಪ್ರಯಾಣಕ್ಕೆ ಟಿಕೆಟ್‌ ಬುಕ್‌ ಮಾಡಿದ್ದರು. ಅಲ್ಲದೆ ಏರ್‌ ಇಂಡಿಯಾದ ದೇಶಿಯ ಯಾನದಲ್ಲಿ 25 ಕೆ.ಜಿ. ತೂಕದ ಲಗೇಜ್‌ ಕೊಂಡೊ ಯ್ಯಲು ಅವಕಾಶ ಇರುವುದರಿಂದ ಹೆಚ್ಚಿನ ಪ್ರಯಾಣಿಕರು ಏರ್‌ ಇಂಡಿಯಾವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಮಾತ್ರವಲ್ಲದೆ ಈ ವಿಮಾನಕ್ಕೆ ಮುಂಬಯಿಯಲ್ಲಿ ಸಾಕಷ್ಟು ಸಂಪರ್ಕ ವಿಮಾನಗಳ ಲಭ್ಯತೆಯೂ ಇರುವುದು ಜನತೆ ಪ್ರಯಾಣಕ್ಕೆ ಆಯ್ಕೆ ಮಾಡಿಕೊಳ್ಳಲು ಇನ್ನೊಂದು ಕಾರಣ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.