ಹೊರಗುತ್ತಿಗೆ, ದಿನಗೂಲಿ ನೌಕರರ ನೇರ ನೇಮಕಾತಿ: ಪೌರ ಕಾರ್ಮಿಕರಲ್ಲಿ ಮೂಡಿತು ಆಶಾಭಾವ


Team Udayavani, Jan 26, 2023, 7:00 AM IST

ಹೊರಗುತ್ತಿಗೆ, ದಿನಗೂಲಿ ನೌಕರರ ನೇರ ನೇಮಕಾತಿ: ಪೌರ ಕಾರ್ಮಿಕರಲ್ಲಿ ಮೂಡಿತು ಆಶಾಭಾವ

ಮಂಗಳೂರು: ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರಿಗೆ ನೇರ ನೇಮಕಾತಿ, ನೇರ ಪಾವತಿ ವ್ಯವಸ್ಥೆಗೆ ಸರಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 526 ಪೌರ ಕಾರ್ಮಿಕರಲ್ಲಿ ಆಶಾಭಾವ ಮೂಡಿದೆ.

ದ.ಕ. ಜಿಲ್ಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಹೊರತುಪಡಿಸಿ 13 ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಹಾಗೂ ಉಡುಪಿಯ 6 ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರ ನೇರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈಗಾಗಲೇ ದಿನಗೂಲಿ, ಹೊರಗುತ್ತಿಗೆ/ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಆದ್ಯತೆ ದೊರೆಯಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಬೆಳ್ತಂಗಡಿ, ಸುಳ್ಯ, ಸೋಮೇಶ್ವರ, ಕಡಬ, ಬಜಪೆ, ಕಿನ್ನಿಗೋಳಿ, ಮೂಲ್ಕಿ, ವಿಟ್ಲ, ಕೋಟೆಕಾರು ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಮಂಜೂರಾದ ಒಟ್ಟು ಪೌರ ಕಾರ್ಮಿಕರ ಸಂಖ್ಯೆ 483 ಆಗಿದ್ದು ಈ ಪೈಕಿ 371 ಹುದ್ದೆಗಳು ಖಾಲಿ ಇವೆ.

ಉಡುಪಿ ಜಿಲ್ಲೆಯ ಉಡುಪಿ, ಕಾರ್ಕಳ, ಕುಂದಾಪುರ, ಕಾಪು, ಬೈಂದೂರು, ಸಾಲಿಗ್ರಾಮ ಗಳಲ್ಲಿ ಒಟ್ಟು ಮಂಜೂರಾದ 372 ಪೌರ ಕಾರ್ಮಿಕ ಹುದ್ದೆಗಳಲ್ಲಿ 155 ಖಾಲಿ ಹುದ್ದೆಗಳು ಖಾಲಿಯಿವೆ.

ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಹೊರಗುತ್ತಿಗೆ/ಗುತ್ತಿಗೆ/ ದಿನಗೂಲಿ ನೌಕರರಾಗಿ 277 ಮಂದಿ ಹಾಗೂ ಉಡುಪಿಯಲ್ಲಿ 164 ಮಂದಿ ಕರ್ತವ್ಯದಲ್ಲಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆದೇಶ ಬಂದಿರುವುದು ಇದೀಗ ಗುತ್ತಿಗೆಯಡಿ ಹಲವು ವರ್ಷಗಳಿಂದ ದುಡಿಯುತ್ತಿರುವ ಪೌರ ಕಾರ್ಮಿಕರಲ್ಲಿ ಸಂತಸ ಮೂಡಿಸಿದೆ.

ವಿದ್ಯಾರ್ಹತೆ ಅನಗತ್ಯ
ಸರಕಾರದ ಆದೇಶದಂತೆ ಪೌರ ಕಾರ್ಮಿಕರ ನೇರ ನೇಮಕಾತಿಗೆ ವಿದ್ಯಾರ್ಹತೆ ಅನ್ವಯ ವಾಗುವುದಿಲ್ಲ. ಆದರೆ ಕನ್ನಡ ಮಾತನಾಡಲು ಗೊತ್ತಿರಬೇಕು. ಪೌರ ಕಾರ್ಮಿಕ/ ಲೋಡರ್ಸ್‌/ಕ್ಲೀನರ್ಸ್‌ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ನೇರ ಪಾವತಿ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಖಾಯಂ ಮಾಡಲು ಸಾಧ್ಯವಾಗದಿರುವ ಪೌರ ಕಾರ್ಮಿಕ ರನ್ನು ನೇರ ವೇತನ ಪಾವತಿ ವ್ಯಾಪ್ತಿಗೆ ತಂದು ಗುತ್ತಿಗೆ, ಹೊರ ಗುತ್ತಿಗೆ ಸಂಪೂರ್ಣವಾಗಿ ರದ್ದು ಮಾಡಲು ಈಗಾಗಲೇ ರಾಜ್ಯ ಸರಕಾರದಿಂದ ಆದೇಶವಾಗಿದೆ.

ಗುತ್ತಿಗೆ/ಹೊರಗುತ್ತಿಗೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಕನಿಷ್ಠ ವೇತನ, ನೇರ ಪಾವತಿಯ ಸೌಲಭ್ಯವಿಲ್ಲದೆ ಸಂಕಷ್ಟ ಪಡುತ್ತಿರುವ ಕುರಿತಂತೆ ಪೌರ ಕಾರ್ಮಿಕರ ಸಂಘವು ಕಳೆದ ಹಲವಾರು ವರ್ಷಗಳಿಂದ ರಾಜ್ಯ ಮಟ್ಟದ ಹೋರಾಟದ ಮೂಲಕ ಗಮನ ಸೆಳೆಯುತ್ತಾ ಬಂದಿದೆ. ಇದೀಗ ನೇರ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿರುವುದು ಸಂತಸವಾಗಿದೆ.
-ಅನಿಲ್‌ ಕುಮಾರ್‌, ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಪೌರ ಕಾರ್ಮಿಕರ ಸಂಘ/
– ಶಂಕರ್‌, ಹಿರಿಯ ಪೌರ ಕಾರ್ಮಿಕ, ಉಡುಪಿ ಜಿಲ್ಲೆ

ಟಾಪ್ ನ್ಯೂಸ್

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

SBI

Chhattisgarh: ಎಸ್‌ಬಿಐ ನಕಲಿ ಶಾಖೆ, ವಂಚನೆ!

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

1–wewqe

Women’s T20 World Cup: ಸ್ಕಾಟ್ಲೆಂಡ್‌ಗೆ ಆಘಾತ: ಪಾಕ್‌ಗೆ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

ಡಾ| ಸಂಧ್ಯಾ ಶೆಣೈಗೆ ಕಲ್ಪನಾ ಚಾವ್ಲಾ ಯುವವಿಜ್ಞಾನಿ ಪ್ರಶಸ್ತಿ

State Govt: ಡಾ| ಸಂಧ್ಯಾ ಶೆಣೈಗೆ ಕಲ್ಪನಾ ಚಾವ್ಲಾ ಯುವವಿಜ್ಞಾನಿ ಪ್ರಶಸ್ತಿ

POlice

Mangaluru: ಕೆಮರಾ ಖರೀದಿಸುವುದಾಗಿ ತಿಳಿಸಿ ವಂಚನೆ; ಪ್ರಕರಣ ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

1-jaya

Dubey ಸಮಿತಿ ಬಿಟ್ಟು ಬೊಮ್ಮಾಯಿ ಸ್ಥಾಯಿ ಸಮಿತಿಗೆ ಜಯಾ ಬಚ್ಚನ್‌

Maldives Muizzu

Maldives ಅಧ್ಯಕ್ಷ ಮುಯಿಜ್ಜು ಭಾರತ ಪ್ರವಾಸ ಅ.6ರಿಂದ

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

1-atal

Atal Setu; ಜಿಗಿದು ಆತ್ಮಹ*ತ್ಯೆ: 3 ದಿನದ‌ಲ್ಲಿ 2ನೇ ಘಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.