ಕೊಲೆಗೆ ಯತ್ನ ಪ್ರಕರಣ:  ನಾಲ್ವರು ಆರೋಪಿಗಳ ಬಂಧನ 


Team Udayavani, Jul 13, 2017, 3:45 AM IST

Crime-new-12-0702107.jpg

ಉಳ್ಳಾಲ: ಅಜಾದ್‌ ನಗರದಲ್ಲಿ ಯುವಕನೊಬ್ಬನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರುಅಪರಾಧ ಪತ್ತೆ ದಳದ  (ಸಿಸಿಬಿ) ಪೊಲೀಸರು ಯಶಸ್ವಿಯಾಗಿದ್ದಾರೆ.

ಉಳ್ಳಾಲ ಮೇಲಂಗಡಿಯ ಜಲಾಲ್‌ ಯಾನೆ ಜಲಾಲುದ್ದೀನ್‌(28), ಕುಂಪಲ ಶಾಲೆ ಬಳಿಯ ಅರ್ಫಾನ್‌ ಯಾನೆ ಅಪ್ಪು(25), ಉಳ್ಳಾಲ ಟಿ.ಸಿ.ರೋಡಿನ  ಜಾಫರ್‌ ಸಾದಿಕ್‌ (20),  ಕೆ.ಸಿ.ರೋಡ್‌ ತಲಪಾಡಿಯ  ಮುಝಂಬಿಲ್‌ (22) ಬಂಧಿತರು.

ಪ್ರಕರಣದ ವಿವರ
ಮಂಗಳವಾರ ಆಸ್ಟಿಮ್‌ ನಿತೇಶ್‌ ಮೊಂತೆರೋ ಅವರು ಉಳ್ಳಾಲ ಅಜಾದ್‌ ನಗರದ ಕಿರಿದಾದ ರಸ್ತೆಯಲ್ಲಿ ಅವರ ರಿಕ್ಷಾಟೆಂಪೋವನ್ನು ನಿಲ್ಲಿಸಿ ಟೆಂಪೋ ರಿಕ್ಷಾದಿಂದ ಮಣ್ಣಿನ ಲೋಡನ್ನು ಖಾಲಿ ಮಾಡುತ್ತಿದ್ದ ಸಮಯ ಅದೇ ರಸ್ತೆಯಿಂದಾಗಿ ಬಂದ ಕಪ್ಪು ಬಣ್ಣದ ಕಾರೊಂದರಲ್ಲಿ ನಾಲ್ವರು ವ್ಯಕ್ತಿಗಳು ಟೆಂಪೋ ರಿಕ್ಷಾವನ್ನು ರಸ್ತೆಯಿಂದ ತೆಗೆಯುವಂತೆ ಜೋರು ಮಾಡಿದ್ದರು.  

ಅನಂತರ ರಿûಾಕ್ಕೆ ಅಡ್ಡ ನಿಂತು ಅವರಿಗೆ ಕೈಯಿಂದ ಹಲ್ಲೆ ನಡೆಸಿರುವುದಲ್ಲದೇ ಅವರ ಕಾರಿನ ಸೀಟಿನಲ್ಲಿದ್ದವನು ಕಾರಿನಿಂದ ಚೂರಿಯೊಂದನ್ನು ತೆಗೆದುಕೊಂಡು ಬಂದು ಅಸ್ಟಿಮ್‌ ನಿತೇಶ್‌ ಮೊಂತೆರೋ ಅವರಿಗೆ ಚೂರಿಯಿಂದ ಕೈಗೆ ಇರಿದು, ಅನಂತರ ಎದೆಗೆ ಇರಿಯಲು ಪ್ರಯತ್ನಿಸಿದ ಸಮಯ ಅಸ್ಟಿಮ್‌ ನಿತೇಶ್‌ ಮೊಂತೆರೋ ಅ‌ವರು ಅವರಿಂದ ಓಡಿ ತಪ್ಪಿಸಿಕೊಂಡಿದ್ದರು. ಗಾಯಗೊಂಡ ಅಸ್ಟಿಮ್‌ ನಿತೇಶ್‌ ಮೊಂತೆರೋಅವರು ಉಳ್ಳಾಲದ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿ ಯಾಗಿ ದಾಖಲಾಗಿದ್ದಾರೆ. 

ಈ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿಮಂಗಳವಾರ  ಪ್ರಕರಣ ದಾಖಲಾಗಿತ್ತು.ಕೃತ್ಯಕ್ಕೆ ಬಳಸಿದ್ದ ಕಪ್ಪು ಬಣ್ಣದ ಆಲ್ಟೋ ಕಾರು ಹಾಗೂ ಪರಾರಿಯಾಗಲು ಯತ್ನಿಸಿದ್ದ ಇನ್ನೊಂದು ಆಲ್ಟೋ ಕಾರುಗಳನ್ನು  ವಶಪಡಿಸಿಕೊಳ್ಳಲಾಗಿದೆ. 

ಹಲ್ಲೆ ನಡೆಸಿದ ಬಳಿಕ ಆರೋಪಿಗಳು ಬೇರೆ ಕಾರಿನಲ್ಲಿ ಮಡಿಕೇರಿ ಕಡೆಗೆ ಪರಾರಿಯಾಗುವ ಸಂದರ್ಭ ಸುಳ್ಯ ಸಮೀಪ  ಕಾರು ಹಾಳಾಗಿತ್ತು. ಈ  ಹಿನ್ನೆಲೆಯಲ್ಲಿ ಕಾರನ್ನು ಗ್ಯಾರೇಜಿನಲ್ಲಿರಿಸಿದ್ದರು. 

ಸಂದರ್ಭ ಮಾಹತಿ ಪಡೆದ ಸುಳ್ಯ ಪೊಲೀಸರು ಆರೋಪಿಗಳನ್ನು  ವಶಕ್ಕೆ ಪಡೆದುಕೊಂಡರು.ಬಳಿಕ ಆರೋಪಿಗಳನ್ನು ಸಿಸಿಬಿ ಪೊಲೀಸರಿಗೆ ಹಸ್ತಾಃಂತರಿಸಲಾಯಿತು.

ಪೊಲೀಸ್‌ ಕಮೀಷನರ್‌  ಟಿ. ಆರ್‌ ಸುರೇಶ್‌ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ  ಕೆ.ಎಂ. ಶಾಂತರಾಜು, ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ  ಹನುಮಂತರಾಯ ಮತ್ತು ಎಸಿಪಿ ಸಿಸಿಬಿ ಬಿ. ವೆಲೆಂಟೈನ್‌ ಡಿ’ಸೋಜಾ ರವರ ಮಾರ್ಗದರ್ಶನ ನೀಡಿದ್ದರು. 

ಅಪರಾಧ ಪತ್ತೆ ದಳದ ಇನ್ಸ್‌ ಪೆಕ್ಟರ್‌ ಸುನೀಲ್‌ ವೈ ನಾಯ್ಕ ಮತ್ತು ಪಿ.ಎಸ್‌.ಐ ಶ್ಯಾಮ್‌ ಸುಂದರ್‌ ಹಾಗೂ ಸಿಬಂದಿ ಆರೋಪಿಗಳ ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.