ಕೊಲೆ ಯತ್ನ ಪ್ರಕರಣ: ಇಬ್ಬರು ಆರೋಪಿಗಳು ಅಪರಾಧಿಗಳೆಂದು ಘೋಷಣೆ 


Team Udayavani, Oct 27, 2017, 9:31 AM IST

27-15.jpg

ಮಂಗಳೂರು: ಏಳು ವರ್ಷಗಳ ಹಿಂದೆ ತೊಕ್ಕೊಟ್ಟಿನ ಕಾಪಿಕಾಡ್‌ನ‌ಲ್ಲಿ  ಸ್ಥಳೀಯ ನಿವಾಸಿ ಪ್ರವೀಣ್‌ ಕುಮಾರ್‌ ಜೆ.ಪಿ. (37) ಅವರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಮೇಲಣ ಅಪರಾಧ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಹಾಗೂ ವಿಶೇಷ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣದ ಬಗ್ಗೆ ಅ. 28ರಂದು ವಿಚಾರಣೆ ನಡೆಯಲಿದೆ. 

ತೊಕ್ಕೋಟು ಸಮೀಪದ ಕುಂಪಲದ ವಿನೋದ್‌ (34) ಮತ್ತು ಪ್ರಕಾಶ್‌ (36) ಅಪರಾಧಿಗಳು. ಈ ಪ್ರಕರಣದ ಇನ್ನೋರ್ವ ಆರೋಪಿ ಕುಂಪಲದ ಸುಜೀರ್‌ (33) ತಲೆಮರೆಸಿಕೊಂಡಿದ್ದು, ಆತನ ಮೇಲೆ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಹಲ್ಲೆಗೊಳಗಾದ ಪ್ರವೀಣ್‌ ಕುಮಾರ್‌ ಜೆ.ಪಿ. ಅವರು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಅವರ ಆಪ್ತ ಸಹಾಯಕರಾಗಿರುತ್ತಾರೆ. 

ಪ್ರಕರಣದ ವಿವರ: 2010ರ ಎಪ್ರಿಲ್‌ 7ರಂದು ಪ್ರವೀಣ್‌ ಕುಮಾರ್‌ ಅವರು ತನ್ನ ಸ್ನೇಹಿತ ರಾಜೇಶ್‌ ಜತೆ ಮಾತನಾಡಲು ಕಾಪಿಕಾಡ್‌ನ‌ ರೆಸ್ಟೋರೆಂಟ್‌ ಬಳಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದಿದ್ದ ವಿನೋದ್‌, ಸುಜೀರ್‌ ಮತ್ತು ಪ್ರಕಾಶ್‌ ಅವರು ಇನ್ನೂ ಕೆಲವು ಮಂದಿ ಅಪರಿಚಿತರ ಜತೆ ಸೇರಿಕೊಂಡು ಪ್ರವೀಣ್‌ ಕುಮಾರ್‌ ಅವರನ್ನು ಅವಾಚ್ಯವಾಗಿ ಬೈದು ಸೋಡಾ ಬಾಟಲಿ ಮತ್ತು ಕೈಯಿಂದ ಹೊಡೆದು ಕೊಲೆಗೆ ಯತ್ನಿಸಿ ಜಾತಿ ನಿಂದನೆ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಉಳ್ಳಾಲ ಪೊಲೀಸರು ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದರು. ಪಣಂಬೂರು ಡಿವೈಎಸ್‌ಪಿ ಆಗಿದ್ದ ಗಿರೀಶ್‌ ತನಿಖೆ  ನಡೆಸಿ ಆರೋಪ ಪಟ್ಟಿಯನ್ನು  ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 

ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ 2ನೇ ಹೆಚ್ಚುವರಿ ಜಿಲ್ಲಾ  ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಸರ್ವೋದಯ ಶೆಟ್ಟಿಗಾರ್‌ ಇಬ್ಬರು ಆರೋಪಿಗಳ ಮೇಲಣ ಆರೋಪ ಸಾಬೀತಾದ ಕಾರಣ ಅವರು ಅಪರಾಧಿಗಳು ಎಂಬುದಾಗಿ ತೀರ್ಮಾನಕ್ಕೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ವಿನೋದ್‌ ಮತ್ತು ಪ್ರಕಾಶ್‌ ಅವರನ್ನು ಐಪಿಸಿ ಸೆಕ್ಷನ್‌ 324, 504 ಮತ್ತು ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ  ಅನ್ವಯ ಗುರುವಾರ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. 

ಈ ಪ್ರಕರಣದಲ್ಲಿ ಸರಕಾರದ ಪರವಾಗಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಬಿ. ಶೇಖರ ಶೆಟ್ಟಿ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.