ಕಾಲಿಯಾ ರಫೀಕ್‌ ಕೊಲೆ ಪ್ರಕರಣ: ತಲೆಮರೆಸಿದ್ದ ಆರೋಪಿ ಬಂಧನ


Team Udayavani, Oct 4, 2019, 2:55 AM IST

C-50

ಮಂಗಳೂರು: ಎರಡೂವರೆ ವರ್ಷಗಳ ಹಿಂದೆ ಕೋಟೆಕಾರ್‌ನಲ್ಲಿ ನಡೆದಿದ್ದ ಕುಖ್ಯಾತ ರೌಡಿ ಕಾಲಿಯಾ ರಫೀಕ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿ ಕೊಂಡಿದ್ದ ಪ್ರಮುಖ ಆರೋಪಿ, ಕೇರಳದ ಕಾಸರಗೋಡು ಚಳಯಂಗೋಡ್‌ ಮೇಲ್ಪರಂಬ ನಿವಾಸಿ ಮಹಮ್ಮದ್‌ ನಜೀಬ್‌ ಯಾನೆ ಕಲ್ಲಟ್ರ ನಜೀಬ್‌ (46) ನನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ನೂರ್‌ ಅಲಿ, ರಶೀದ್‌ ಟಿ.ಎಸ್‌. ಹುಸೈನಬ್ಬ ಯಾನೆ ಹುಸೈನ್‌, ಮುತಾಸಿಂ ಯಾನೆ ತಸ್ಲಿಂ ಸಹಿತ ಹಲವರನ್ನು ಈ ಮೊದಲೇ ಬಂಧಿಸಲಾಗಿತ್ತು.

ಪ್ರಕರಣದ ವಿವರ
2017ರ ಫೆ. 14ರಂದು ಮಹಮ್ಮದ್‌ ಝಾಹಿದ್‌ ತನ್ನ ಸ್ನೇಹಿತ ಕಾಲಿಯಾ ರಫೀಕ್‌ನೊಂದಿಗೆ ಮುಜೀಬ್‌ ಹಾಗೂ ಫಿರೋಜ್‌ ಜತೆಯಲ್ಲಿ ರಾತ್ರಿ 11:30ಕ್ಕೆ ಮಾರುತಿ ರಿಟ್‌l ಕಾರಿನಲ್ಲಿ ಕಾಸರಗೋಡಿನ ಹೊಸಂಗಡಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಬಂದು ರಾತ್ರಿ 12 ಗಂಟೆಗೆ ಕೋಟೆಕಾರ್‌ ಪೆಟ್ರೋಲ್‌ ಪಂಪ್‌ ತಲುಪಿದ್ದರು. ಆ ಹೊತ್ತಿಗೆ ವಿರುದ್ಧ ದಿಕ್ಕಿನಿಂದ ರಾಂಗ್‌ ಸೈಡ್‌ನ‌ಲ್ಲಿ ವೇಗವಾಗಿ ಬಂದ ಆರೋಪಿಗಳಿದ್ದ ಟಿಪ್ಪರ್‌ ಢಿಕ್ಕಿ ಹೊಡೆದಿತ್ತು.

ಆರೋಪಿಗಳ ಪೈಕಿ ಚಾಲಕ ರಶೀದ್‌ ಹೊಂಚು ಹಾಕಿ ಪೆಟ್ರೋಲ್‌ ಬಂಕ್‌ ಬಳಿ ಟಿಪ್ಪರ್‌ ಲಾರಿಯನ್ನು ಮೊದಲೇ ತಂದು ನಿಲ್ಲಿಸಿದ್ದ. ಕಾಲಿಯಾ ರಫೀಕ್‌ ಇದ್ದ ಕಾರು ಬರುತ್ತಿದ್ದಂತೆ ಆರೋಪಿ ಏಕಾಏಕಿ ಟಿಪ್ಪರನ್ನು ಢಿಕ್ಕಿ ಹೊಡೆಸಿ ಕಾರನ್ನು ಅಡ್ಡಗಟ್ಟಿದ್ದ. ಏತನ್ಮಧ್ಯೆ, ಆರೋಪಿಗಳ ತಂಡದ ಮತ್ತೂಂದು ಎರ್ಟಿಕಾ ಕಾರು ಕಾಲಿಯಾ ರಫೀಕ್‌ನನ್ನು ಬೆನ್ನಟ್ಟಿಕೊಂಡು ಬಂದಿತ್ತು. ದುಷ್ಕರ್ಮಿಗಳ ಕೈಯಲ್ಲಿ ಸಿಕ್ಕಿ ಬೀಳುವುದು ಖಾತರಿಯಾಗುತ್ತಿದ್ದಂತೆ ಕಾಲಿಯಾ ರಫೀಕ್‌ ಮತ್ತು ಸಹಚರರು ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಆಗ ನೂರ್‌ ಅಲಿ ಹಾಗೂ ಇನ್ನೋರ್ವ ಆರೋಪಿಯು ಪಿಸ್ತೂಲ್‌ನಿಂದ ಕಾಲಿಯಾ ರಫೀಕ್‌ಗೆ ಗುಂಡು ಹಾರಿಸಿದ್ದರು. ಅಲ್ಲದೆ, ಇತರ ಆರೋಪಿಗಳು ಬೆನ್ನಟ್ಟಿ ತಲವಾರಿನಿಂದ ಕಡಿದು ಕೊಲೆಗೈದಿದ್ದರು ಎಂದು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಈಗಾಗಲೇ ನಾಲ್ವರನ್ನು ಬಂಧಿಸಿದ್ದ ಮಂಗಳೂರು ಪೊಲೀಸರು, ಇತರರ ಪತ್ತೆಗೆ ಬಲೆ ಬೀಸಿದ್ದರು. ಘಟನೆ ನಡೆದಾಗ ಕಾಲಿಯಾ ರಫೀಕ್‌ ಇದ್ದ ಕಾರು ಚಾಲಕ ಮಹಮ್ಮದ್‌ ನಜೀಬ್‌ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಎಂದು ಆರೋಪಿಸಲಾಗಿತ್ತು. ಕೃತ್ಯದ ನಂತರ ಈತ ಮುಂಬಯಿ, ಬೆಂಗಳೂರು, ಎರ್ನಾಕುಳಂ ಮುಂತಾದೆಡೆ ತಲೆ ಮರೆಸಿದ್ದ. ಈತನ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕೇರಳದಲ್ಲಿ ಗುರುವಾರ ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಪೊಲೀಸ್‌ ಆಯುಕ್ತ ಡಾ| ಹರ್ಷ ಪಿ.ಎಸ್‌. ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಸಿಬಿ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್‌ ಆರ್‌. ನಾಯ್ಕ, ಎಸ್‌ಐ ಕಬ್ಟಾಳ್‌ರಾಜ್‌ ಎಚ್‌.ಡಿ. ಹಾಗೂ ಸಿಸಿಬಿ ಸಿಬಂದಿ ಭಾಗವಹಿಸಿದ್ದರು.

ಹಲವು ಪ್ರಕರಣಗಳ ಆರೋಪಿ
ಆರೋಪಿ ಮಹಮ್ಮದ್‌ ನಜೀಬ್‌ ಪ್ರಕರಣದ ಪ್ರಮುಖ ಆರೋಪಿ ಝೀಯಾ ಹಾಗೂ ಇತರರೊಂದಿಗೆ ಸೇರಿ ಸಂಚು ರೂಪಿಸಿ ಕೊಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಆರೋಪಿ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು, ಬೇಕಲ, ನೀಲೇಶ್ವರ ಠಾಣೆಗಳಲ್ಲಿ ಕಳ್ಳತನ, ವಂಚನೆ ಪ್ರಕರಣಗಳು ಸಹಿತ ಒಟ್ಟು 5 ಪ್ರಕರಣಗಳು ದಾಖಲಾಗಿವೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.