Nalin Kumar Kateel ಮೈಸೂರು ರೈಲ್ವೇ ವಿಭಾಗಕ್ಕೆ ಮಂಗಳೂರು ಸೇರ್ಪಡೆ ಶೀಘ್ರ

ಸಂಸದನಾದ ಬಳಿಕ 15 ವರ್ಷಗಳಲ್ಲಿ ವಿವಿಧ ಯೋಜನೆ ಅನುಷ್ಠಾನ

Team Udayavani, Jun 4, 2024, 12:02 AM IST

Nalin Kumar Kateel ಮೈಸೂರು ರೈಲ್ವೇ ವಿಭಾಗಕ್ಕೆ ಮಂಗಳೂರು ಸೇರ್ಪಡೆ ಶೀಘ್ರ

ಮಂಗಳೂರು: ಪಾಲ್ಘಾಟ್ ವಿಭಾಗದಿಂದ ಮಂಗಳೂರನ್ನು ಬೇರ್ಪಡಿಸಿ ಪ್ರತ್ಯೇಕ ವಿಭಾಗ ಮಾಡಬೇಕು ಅಥವಾ ಮೈಸೂರು ವಿಭಾಗಕ್ಕೆ ಸೇರಿಸಬೇಕು ಎಂಬ ರೈಲ್ವೇ ವಲಯದ ಬಹುಕಾಲದ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಹತ್ವದ ಪ್ರಯತ್ನ ಈಗಾಗಲೇ ಆರಂಭವಾಗಿದೆ. ಕೇಂದ್ರದ ರೈಲ್ವೇ ಸಚಿವರಿಗೆ ಈ ವಿಚಾರವನ್ನು ಮನದಟ್ಟು ಮಾಡಲಾಗಿದ್ದು ಮೈಸೂರು ವಿಭಾಗಕ್ಕೆ ಸೇರಿಸುವ ಬಗ್ಗೆ ಧನಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಶೀಘ್ರ ಈಡೇರುವ ಲಕ್ಷಣಗಳಿವೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ ಮಂಗಳೂರಿನಲ್ಲಿ ಆಯೋಜಿಸಲಾದ “ಸಂಸದರ ಜತೆ ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಸದನಾದ ಬಳಿಕ 15 ವರ್ಷಗಳಲ್ಲಿ 1.80 ಲಕ್ಷ ಕೋ. ಅನುದಾನವನ್ನು ದ.ಕ. ಜಿಲ್ಲೆಯ ವಿವಿಧ ಕ್ಷೇತ್ರಗಳಿಗೆ ತರಲಾಗಿದೆ. ಅದರಲ್ಲಿ 17 ಸಾವಿರ ಕೋಟಿ ರೂ. ವೆಚ್ಚದಲ್ಲಿ 3 ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಮಂಗಳೂರಿಗೆ ಪಾಸ್‌ಪೋರ್ಟ್‌ ಕಚೇರಿ ಆರಂಭಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಪರಿವರ್ತನೆ ಮಾಡಲಾಗಿದೆ.

ದೇಶದ ಏಕೈಕ ಕೋಸ್ಟ್‌ಗಾರ್ಡ್‌ ಅನ್ನು ಮಂಗಳೂರಿಗೆ ತರಲಾಗಿದೆ. ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಹೆಚ್ಚುವರಿ 2 ಪ್ಲಾಟ್‌ಫಾರಂ ನಿರ್ಮಾಣ, 100 ಜನೌಷಧಿ ಕೇಂದ್ರ, ಪ್ಲಾಸ್ಟಿಕ್‌ ಪಾರ್ಕ್‌ ಯೋಜನೆ, ಮೀನುಗಾರಿಕಾ ಜೆಟ್ಟಿ ಅನುಷ್ಠಾನಿಸಲಾಗಿದೆ ಎಂದರು.

ಎನ್‌ಎಂಪಿಎ ಅಭಿವೃದ್ಧಿ ಕಾಮಗಾರಿ ವೇಗ ಪಡೆದುಕೊಂಡಿದೆ. ಎಂಆರ್‌ಪಿಎಲ್‌ 3ನೇ ಹಂತದ ಕಾಮಗಾರಿ, ಎಸ್‌ಇಝಡ್‌ ವಿಸ್ತರಣೆ, ಮಂಗಳೂರಿಗೆ ಸ್ಮಾರ್ಟ್‌ ಸಿಟಿ, ಅಮೃತ ಯೋಜನೆ, ಬಳ್ಪ ಆದರ್ಶ ಗ್ರಾಮದ ಅಭಿವೃದ್ಧಿ, ನಗರದ ಜಪ್ಪು ಕುಡುಪ್ಪಾಡಿ, ಮಹಾಂಕಾಳಿ ಪಡ್ಪು , ಪಡೀಲ್‌ ರೈಲ್ವೇ ಮೇಲ್ಸೇತುವೆ ನಿರ್ಮಾಣ, ಬೈಕಂಪಾಡಿಯಲ್ಲಿ ರೈಲ್ವೇ ಮೇಲ್ಸೇತುವೆ ಸೇರಿದಂತೆ 2 ಸಾವಿರ ಕೋಟಿ ರೂ.ಗಳನ್ನು ರೈಲ್ವೇ ಅಭಿವೃದ್ಧಿಗೆ ನೀಡಲಾಗಿದೆ. ಜಲಸಿರಿ, ಗೇಲ್‌ ಗ್ಯಾಸ್‌ ಪೈಪ್‌ಲೈನ್‌ಯನ್ನು ಅನುಷ್ಠಾನ ಮಾಡಲಾಗಿದೆ ಎಂದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಮಂಗಳೂರು ಪ್ರಸ್‌ ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್‌ ರೈ ಉಪಸ್ಥಿತರಿದ್ದರು. ವಿಜಯ ಕೋಟ್ಯಾನ್‌ ನಿರೂಪಿಸಿದರು.

ಶಿರಾಡಿ ಸುರಂಗ, ನಂತೂರು ಫ್ಲೆ$çಓವರ್‌ ಅಂತಿಮ
ಶಿರಾಡಿ ಸುರಂಗ ಮಾರ್ಗ ಡಿಪಿಆರ್‌ ಮಾಡಿದಾಗ ಪ್ರಾರಂಭದಲ್ಲಿ 3 ಸಾವಿರ ಕೋಟಿ ರೂ. ಎಂದು ಅಂದಾಜಿಸಲಾಗಿತ್ತು. 2ನೇ ಬಾರಿ 12 ಸಾವಿರ ಕೋ.ರೂ.ಗೆ ಏರಿಕೆಯಾಗಿತ್ತು. ಈಗ ಪರಿವರ್ತನೆ ಮಾಡಿಕೊಂಡು 2,500 ಕೋಟಿ ರೂ. ಯೋಜನೆಗೆ ಡಿಪಿಆರ್‌ ಮಾಡಲಾಗಿದೆ. ಚಾರ್ಮಾಡಿ ಯೋಜನೆಯೂ ಚಾಲನೆ ದೊರಕಿದೆ.

ಮೂಡುಬಿದಿರೆ ರಾ.ಹೆ. ಕಾಮಗಾರಿ ನಡೆಯುತ್ತಿದ್ದು, ಭೂಸ್ವಾಧೀನ ಕಾರಣದಿಂದ ತಡವಾಗಿದೆ. ಅಡ್ಡಹೊಳೆ -ಬಿ.ಸಿ.ರೋಡ್‌ ಯೋಜನೆಯೂ ವೇಗ ಪಡೆದಿದೆ. ನಂತೂರಿನಲ್ಲಿ ಫ್ಲೆ$çಓವರ್‌ ಬಹುಬೇಡಿಕೆಯ ಯೋಜನೆಯಾಗಿದೆ. 360 ಕೋ.ರೂ.ಗೆ ಟೆಂಡರ್‌ ಕೂಡ ಆಗಿ ಕೆಲವು ತಿಂಗಳು ಆಗಿದೆ. ಆದರೆ ಭೂಸ್ವಾಧೀನ ಬಾಕಿಯಾಗಿ ನ್ಯಾಯಾಲಯದಲ್ಲಿ ಪ್ರಕರಣವಿದ್ದ ಕಾರಣದಿಂದ ಕೆಲಸ ನಡೆಸಲು ಆಗಿರಲಿಲ್ಲ. ಈಗ ಎಲ್ಲವೂ ಸರಿಯಾಗುತ್ತಿದ್ದು 1 ವಾರದಲ್ಲಿ ಇದು ಇತ್ಯರ್ಥವಾಗಿ ಕಾಮಗಾರಿ ಆರಂಭವಾಗಲಿದೆ. ಕೆಪಿಟಿ ಫ್ಲೆ$çಓವರ್‌ಗೆ ಕಾಮಗಾರಿ ಕೂಡ ಟೆಂಡರ್‌ ಆಗಿದ್ದು, ಈಗಾಗಲೇ ಮರ ತೆರವು ಕಾರ್ಯ ನಡೆದಿದೆ. ಪರಿಸರ ಹೋರಾಟಗಾರರ ಆಕ್ಷೇಪದಿಂದ ತಾತ್ಕಾಲಿಕ ತಡೆಯಿಂದ ಕೆಲಸಕ್ಕೆ ಸಮಸ್ಯೆ ಆಗಿದೆ ಎಂದು ನಳಿನ್‌ ಹೇಳಿದರು.

“ನಾನಾಗಿ ಕೇಳಿಲ್ಲ; ಮುಂದೆ ಕೇಳುವುದೂ ಇಲ್ಲ’
“ನಳಿನ್‌ ಅವರಿಗೆ ಈ ಬಾರಿ ಟಿಕೆಟ್‌ ತಪ್ಪಿದ್ದು ಯಾಕೆ?’ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಸಂಘದ ಪ್ರಚಾರಕನಾಗಿ ಕಾರ್ಯ ಆರಂಭಿಸಿದ ನನಗೆ ಇಂತಹ ಜವಾಬ್ದಾರಿ ಕೊಡಿ ಎಂದು ಯಾವತ್ತೂ ಕೇಳಲಿಲ್ಲ. ಮುಂದೆ ಕೇಳುವುದೂ ಇಲ್ಲ. ಏನನ್ನೂ ಕೇಳದೆ ಪಕ್ಷವು ನನಗೆ ಬೇರೆ ಬೇರೆ ಜವಾಬ್ದಾರಿ ನೀಡಿದೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ನಾನಿರುವೆ ಎಂದರು.

ಟಾಪ್ ನ್ಯೂಸ್

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.