ಮೋದಿ ಭೇಟಿಯಾದ ನಳಿನ್‌: ಯೋಜನೆಗಳ ಅನುಷ್ಠಾನಕ್ಕೆ ಪ್ರಧಾನಿ ಭರವಸೆ


Team Udayavani, Aug 3, 2019, 10:45 AM IST

nalin

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಹೊಸ ದಿಲ್ಲಿಯಲ್ಲಿ ಭೇಟಿಯಾದ ಸಂಸದ ನಳಿನ್‌ಕುಮಾರ್‌ ಕಟೀಲು ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನಿಯವರ ವಿವಿಧ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ವರದಿಯನ್ನು ಹಸ್ತಾಂತರಿಸಿದರು.

ಮುದ್ರಾ ಮತ್ತು ಜನಧನ್‌ ಯೋಜನೆಗಳು ದಕ್ಷಿಣ ಕನ್ನಡದಲ್ಲಿ ಅತ್ಯುತ್ತಮವಾಗಿ ಅನುಷ್ಠಾನಗೊಂಡಿವೆ. ಸುಮಾರು 1.12 ಲಕ್ಷ ಜನರಿಗೆ 1,600 ಕೋಟಿ ರೂ. ಸಾಲ ನೀಡಿ ಉದ್ದಿಮೆದಾರರನ್ನಾಗಿ ಪ್ರೋತ್ಸಾಹಿಸಿದ ಯೋಜನೆಯ ವರದಿಯನ್ನು ಪ್ರಧಾನಿಗೆ ನಳಿನ್‌ ಹಸ್ತಾಂತರಿಸಿದರು. ಸಂಸದರ ಕಾರ್ಯಕ್ಕೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇವೇಳೆ ಪ್ರಧಾನಿ ಮೋದಿ ಹಣಕಾಸು ಇಲಾಖೆಯ ಕಾರ್ಯದರ್ಶಿ ರಾಜೀವ್‌ ಕೆ.ಆರ್‌. ಅವರೊಂದಿಗೆ ಸಭೆ ನಡೆಸಿ, ದಕ್ಷಿಣ ಕನ್ನಡ ಜಿಲ್ಲೆಯು ಕೇಂದ್ರ ಸರಕಾರದ ಇನ್ನಿತರ ಯೋಜನೆಗಳನ್ನೂ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಂಪೂರ್ಣ ಸಹಕಾರ ನೀಡುವಂತೆ ಆದೇಶಿಸಿದರು.

ಜಿಲ್ಲೆಯ ಹೊಸ ಮತ್ತು ಬಾಕಿಯಿರುವ ಯೋಜನೆಗಳ ಕುರಿತು ಪ್ರಧಾನಿಗೆ ಸಂಸದರು ಮನವಿ ಸಲ್ಲಿಸಿದರು. ಸ್ಪಂದಿಸಿದ ಪ್ರಧಾನಿ, ತತ್‌ಕ್ಷಣ ಅಧಿಕಾರಿಗಳ ವಿಶೇಷ ಸಭೆ ಕರೆದು ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ.

ಬೇಡಿಕೆಗಳು
ಜಿಲ್ಲೆಗೆ ಕೇಂದ್ರೀಯ ವಿಶ್ವವಿದ್ಯಾಲಯ, ಐಟಿ ಪಾರ್ಕ್‌, ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಅಥವಾ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌, ಮಂಗಳೂರಿನ ಮೀನುಗಾರಿಕೆ ಕಾಲೇಜನ್ನು ಮೇಲ್ದರ್ಜೆಗೇರಿಸುವುದು ಸೇರಿದಂತೆ ಅನೇಕ ಯೋಜನೆಗಳಿಗೆ ವೇಗ ನೀಡುವಂತೆ ಸಂಸದರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.